LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

'Chef ಚಿದಂಬರ'ನ ಕೈಗೆ ಬೇಡಿ ಹಾಕಿದ 'ಪಂಚರಂಗಿ' ಬೆಡಗಿ ನಿಧಿ ಸುಬ್ಬಯ್ಯ

'Chef ಚಿದಂಬರ' ಚಿತ್ರದಲ್ಲಿನ ನಿಧಿ ಸುಬ್ಬಯ್ಯ ಅವರ ಪಾತ್ರ ಪರಿಚಯದ ಪೋಸ್ಟರ್​ ಅನ್ನು ಚಿತ್ರತಂಡ ಹಂಚಿಕೊಂಡಿದೆ.ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಕೆಲಸ ಮಾಡುವ ಮೂಲಕ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ಸ್ಯಾಂಡಲ್​ವುಡ್​​ ನಟ ಅನಿರುದ್ಧ್ ಜತ್ಕರ್.

ಇವರು ನಾಯಕರಾಗಿ ನಟಿಸಿರುವ ಮುಂದಿನ ಬಹುನಿರೀಕ್ಷಿತ ಸಿನಿಮಾ 'chef ಚಿದಂಬರ'. ರಾಘು ಸಿನಿಮಾ ಖ್ಯಾತಿಯ ಎಂ. ಆನಂದರಾಜ್ ನಿರ್ದೇಶನದ ಶೆಫ್​​ ಚಿದಂಬರ ಚಿತ್ರದ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದೆ. ಸದ್ಯ ಪೋಸ್ಟ್​ ಪ್ರೊಡಕ್ಷನ್​ ಕೆಲಸ ಬಿರುಸಿನಿಂದ ಸಾಗಿದೆ. ಚಿತ್ರತಂಡಕ್ಕೆ 'ಪಂಚರಂಗಿ' ಬೆಡಗಿ ನಿಧಿ ಸುಬ್ಬಯ್ಯ ಎಂಟ್ರಿಯಾಗಿದ್ದಾರೆ. ಅವರ ಪಾತ್ರ ಪರಿಚಯದ ಪೋಸ್ಟರ್​ ಅನಾವರಣಗೊಂಡಿದೆ.

'chef ಚಿದಂಬರ' ಸಿನಿಮಾದಲ್ಲಿ ಮೋನ ಎಂಬುದು ನಿಧಿ ಸುಬ್ಬಯ್ಯ ಅವರ ಪಾತ್ರದ ಹೆಸರು. ಬಿಡುಗಡೆಯಾಗಿರುವ ಫಸ್ಟ್​ ಲುಕ್​ ಪೋಸ್ಟರ್​ ನಿಧಿ ಕೈಯಲ್ಲಿ ಬೇಡಿ ಹಿಡಿದು ನಿಂತಿದ್ದಾರೆ. ಹಾಗಾದ್ರೆ ಚಿತ್ರದಲ್ಲಿ ಅವರ ಪಾತ್ರ ಏನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಬಹಳ ದಿನಗಳ ನಂತರ ನಿಧಿ ಸುಬ್ಬಯ್ಯ ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ಅವರ ಪೋಸ್ಟರ್​ಗೆ ಫ್ಯಾನ್ಸ್​ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಿಮಗೆ ಕುತೂಹಲ ಮೂಡಿಸಿರುವ ನಿಧಿ ಅವರ ಪಾತ್ರದ ಪರಿಚಯ ಅಗಬೇಕೆಂದರೆ ನೀವು ಸಿನಿಮಾವನ್ನೇ ನೋಡಬೇಕು ಎನ್ನುತ್ತಾರೆ ನಿರ್ದೇಶಕ ಆನಂದರಾಜ್​.

ಈ ಚಿತ್ರದಲ್ಲಿ ಅನಿರುದ್ಧ್​ ಅವರಿಗೆ ನಾಯಕಿಯಾಗಿ ನಿಧಿ ಸುಬ್ಬಯ್ಯ ಹಾಗೂ ಲವ್​ ಮಾಕ್ಟೇಲ್​ ಖ್ಯಾತಿಯ ರೆಚೆಲ್​ ಡೇವಿಡ್​ ಕೂಡ ಅಭಿನಯಿಸಿದ್ದಾರೆ. ಸದ್ಯ ನಿಧಿ ಸುಬ್ಬಯ್ಯ ಪಾತ್ರದ ಫಸ್ಟ್​ ಲುಕ್​ ಅನ್ನು ಚಿತ್ರತಂಡ ಹಂಚಿಕೊಂಡಿದೆ. ಚಿತ್ರದಲ್ಲಿ ಇವರ ಜೊತೆಗೆ ಶರತ್​ ಲೋಹಿತಾಶ್ವ, ಕೆ.ಎಸ್​ ಶ್ರೀಧರ್​, ಶಿವಮಣಿ ಮುಂತಾದವರು ಅಭಿನಯಿಸಿದ್ದಾರೆ. ಡಾರ್ಕ್ ಕಾಮಿಡಿ ಜಾನರ್​ನ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕ ಆನಂದರಾಜ್​ ಅವರೇ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, 'ವಿಕ್ರಾಂತ್ ರೋಣ' ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ chef ಚಿದಂಬರ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು