LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

Paris, we’re coming today: ಜಾಹಿರಾತು ನೀಡಿ ನಗೆಪಾಟಲಿಗೀಡಾದ ಪಾಕ್! PIA ಯಡವಟ್ಟಿನ ಬಗ್ಗೆ ತನಿಖೆಗೆ ಆದೇಶ

ಇಸ್ಲಾಮಾಬಾದ್: ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಮರ್ಯಾದೆ ಹೋಗುವಂತಹ ಯಡವಟ್ಟೊಂದನ್ನು ಸ್ವತಃ ತಾನೇ ಮಾಡಿಕೊಂಡಿದೆ.

ಆ ದೇಶದ ಏರ್ಲೈನ್ ಸಂಸ್ಥೆಯಾಗಿರುವ ಪಿಐಎ ಜಾಹಿರಾತು ಒಂದಕ್ಕೆ 9/11 ದಾಳಿಯ ಫೋಟೋ ಬಳಸಿ ತನ್ನ ಮುಖಕ್ಕೆ ತಾನೇ ಮಸಿಬಳಿದುಕೊಂಡಿದೆ.

ಪಿಐಎ ನೀಡಿರುವ ಜಾಹಿರಾತು ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ನಗೆಪಾಟಲಿಗೆ ಈಡಾಗಿದ್ದು, ಈ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಪ್ರಧಾನಿ ಪಿಐಎ ಜಾಹಿರಾತಿನ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಪ್ಯಾರಿಸ್ ಗೆ ವಿಮಾನ ಸೇವೆಗಳನ್ನು ಪುನಃ ಒದಗಿಸುತ್ತಿರುವ ವಿಷಯವನ್ನು ತಲುಪಿಸುವುದು ಪಿಐಎ ಜಾಹಿರಾತಿನ ಉದ್ದೇಶವಾಗಿತ್ತು. ಈ ಚಿತ್ರದಲ್ಲಿ ಪ್ಯಾರಿಸ್ ನ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಎಫಿಲ್ ಟವರ್ ಇದ್ದು, ಅದರೊಟ್ಟಿಗೆ 9/11 ದಾಳಿಯನ್ನು ಹೋಲುವ ವಿಮಾನದ ಚಿತ್ರವನ್ನೂ ಬಳಕೆ ಮಾಡಿ Paris, we’re coming today ಎಂಬ ಸಂದೇಶ ಬರೆಯಲಾಗಿತ್ತು.

2001 ರ ಸೆಪ್ಟೆಂಬರ್ 11 ರಂದು ನ್ಯೂಯಾರ್ಕ್ ನ ವರ್ಲ್ಡ್ ಟ್ರೇಡ್ ಸೆಂಟರ್ ಮೇಲೆ ದಾಳಿ ನಡೆದಿತ್ತು. ಸೆಪ್ಟೆಂಬರ್ 11 ರಂದು ನ್ಯೂಯಾರ್ಕ್ ನಗರ ಮತ್ತು ಪೆಂಟಗನ್ ಮೇಲಿನ ದಾಳಿಗೂ ಪಾಕಿಸ್ತಾನಕ್ಕೂ ಐತಿಹಾಸಿಕ ಸಂಬಂಧವಿದೆ. ದಾಳಿಯ ಮಾಸ್ಟರ್ ಮೈಂಡ್ ಎಂದು ಆರೋಪಿಸಲ್ಪಟ್ಟ ಖಾಲಿದ್ ಶೇಖ್ ಮೊಹಮ್ಮದ್ ಅವರನ್ನು 2003 ರಲ್ಲಿ ಪಾಕಿಸ್ತಾನದಲ್ಲಿ ಬಂಧಿಸಲಾಯಿತು. ಅಲ್ ಖೈದಾದ ನಾಯಕ ಒಸಾಮಾ ಬಿನ್ ಲಾಡೆನ್ ಅವರನ್ನು 2011 ರಲ್ಲಿ ಪಾಕಿಸ್ತಾನದಲ್ಲಿ ಅಮೆರಿಕದ ಪಡೆಗಳು ಹತ್ಯೆ ಮಾಡಿದ್ದವು.

ದೇಶದ ವಿದೇಶಾಂಗ ಸಚಿವ ಇಶಾಕ್ ದಾರ್, ಸಂಸತ್ತಿನ ಅಧಿವೇಶನದಲ್ಲಿ ಪ್ರಧಾನಿ ಶೆಹಬಾಜ್ ಷರೀಫ್ ಅವರು ಜಾಹೀರಾತು ಆಂತರಿಕ ವಿಮಾನಯಾನ ಅನುಮೋದನೆಗಳನ್ನು ಹೇಗೆ ಅಂಗೀಕರಿಸಿತು ಎಂಬುದರ ಕುರಿತು ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿ ತಿಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು