LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ಸಮಾಜದಲ್ಲಿ ಶಾಂತಿ, ಸೌಹಾರ್ದತೆ, ಸಹಬಾಳ್ವೆ ಅಗತ್ಯ: ಉಮಾ ಪ್ರಶಾಂತ್

ದಾವಣಗೆರೆ: ಸಮಾಜದಲ್ಲಿ ಎಲ್ಲಾ ಸಮುದಾಯದೊಂದಿಗೆ ಶಾಂತಿ, ಸೌಹಾರ್ದತೆ ಯೊಂದಿಗೆ ಸಹಬಾಳ್ವೆ ಮಾಡಿದಾಗ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಉಮಾಪ್ರಶಾಂತ್ ತಿಳಿಸಿದರು.

ಅವರು ಬುಧವಾರ ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಿಸಿದ “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ನಿವಾರಣೆ ಕುರಿತು ಏರ್ಪಡಿಸಲಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಸಮುದಾಯದವರು ಶಾಂತಿ ಸೌಹರ್ದತೆಯಿಂದ ಇರಬೇಕು ಎಂಬುದು ನಮ್ಮ ಭಾವನೆ.

ನೀವು ಕೂಡ ಕಾನೂನಿನ ಬಗ್ಗೆ ತಿಳಿದುಕೊಂಡು ನಮ್ಮೊಂದಿಗೆ ನೀವು ಸಹಕರಿಸಬೇಕು. ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಜೊತೆಗೆ ದುಶ್ಚಟಗಳಿಂದ ದೂರ ಇದ್ದಾಗ ಮನೆ, ಮಕ್ಕಳ ಭವಿಷ್ಯ ಉಜ್ವಲವಾಗಲಿದೆ ಎಂದರು .ನಮ್ಮ ಸಮಾಜ ಸಧೃಡ ಹಾಗೂ ವಿದ್ಯಾವಂತ ಸಮಾಜವಾಗಬೇಕು ಎಂಬುವುದು ನಮ್ಮ ಆಶಯ, ಅದಕ್ಕೆ ನಮ್ಮ ಪೊಲೀಸ್ ಅಧಿಕಾರಿಗಳು ಹಗಲು ರಾತ್ರಿ ಕೆಲಸವನ್ನು ಮಾಡಿತ್ತಿದ್ದಾರೆ. ಅದಕ್ಕೆ ನಿಮ್ಮ ಬೆಂಬಲ ನಮಗೆ ನೀಡಬೇಕು, ಯಾವುದೇ ಸಮಸ್ಯೆ, ಕುಂದುಕೊರತೆಗಳಿದ್ದಲ್ಲಿ ಅದನ್ನು ಕಾನೂನಾತ್ಮಕವಾಗಿ ಪರಿಹರಿಸಲಾಗುತ್ತದೆ.

ಕೈಗೆತ್ತಿಕೊಳ್ಳುವ ಕೆಲಸವನ್ನು ಯಾರು ಸಹ ಮಾಡಬಾರದು ಎಂದು ತಿಳಿಸಿದರು.ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ ಸಂತೋಷ ಜಿಲ್ಲಾ ವಿಶೇಷ ವಿಭಾಗ ಪೊಲೀಸ್ ನಿರೀಕ್ಷಕ ಇಮ್ರಾನ್ ಬೇಗ್, ಅಬಕಾರಿ ಡಿ.ಎಸ್.ಪಿ ರವಿ ಮರಿಗೌಡರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ.ಎಸ್ ಪ್ರಮುತೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು