LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸರ್ಕಾರದ ಸಾಧನೆಗೆ ಜನಸ್ಪಂದನೆ... ಬಿಜೆಪಿಗೆ ದಿಗಿಲು...!

ನಾಲ್ಕುವರೆ ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಧಿಗಳಿಗೆ ಜಾತಿ,ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು.

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದು ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ? ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ ನೂರು ಬಾಗಿಲು ಎಂಬಂತಾಗಿದೆ.

ಆ ಪಕ್ಷದ ರಾಜ್ಯಾಧ್ಯಕ್ಷರನ್ನು ಅದೇ ಪಕ್ಷದ ಹಿರಿಯ ನಾಯಕರು ಈಗಲೂ ಒಪ್ಪಿಕೊಂಡಿಲ್ಲ, ವಿರೋಧ ಪಕ್ಷದ ನಾಯಕರ ಮಾತಿಗೆ ಸದನದಲ್ಲಿಯೇ ಸದಸ್ಯರು ಬಿಡಿಗಾಸಿನ ಕಿಮ್ಮತ್ತು ಕೊಟ್ಟಿಲ್ಲ. ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ದ ದಿನಕ್ಕೊಂದು ಗಂಭೀರ ಸ್ವರೂಪದ ಆರೋಪ ಮಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟೀಸ್ ನೀಡಲಾಗದಷ್ಟು ಪಕ್ಷ ನಿರ್ವಿರ್ಯವಾಗಿದೆ. ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಜನಾನುರಾಗಿಯಾಗುತ್ತಿದೆ. ಈ ಹತಾಶೆಯಿಂದ ಹೊರಬರಲು ಒಬ್ಬ ಕ್ರಿಮಿನಲ್ ಆರೋಪಿಯನ್ನು ಮುಂದಿಟ್ಟು ಬಿಜೆಪಿ ನಾಯಕರು ಕೂಗಾಡುತ್ತಿದ್ದಾರೆ.

ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು. ಹುಬ್ಬಳ್ಳಿಯ ಆರೋಪಿಯನ್ನು ಸಮರ್ಥಿಸಿಕೊಂಡು ಹೋರಾಟಕ್ಕೆ ಇಳಿದಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ ಸ್ವಲ್ಪ ಬುದ್ದಿಗಿದ್ದಿ ಹೊಂದಿದವರಿದ್ದರೆ ದಯವಿಟ್ಟು ಆ ವ್ಯಕ್ತಿಯ ಮೇಲಿನ ಆರೋಪಗಳ ಪಟ್ಟಿಯನ್ನು ತರಿಸಿ ಓದಿ, ಆ ಮೇಲೆ ಹೋರಾಟಕ್ಕೆ ಇಳಿಯಿರಿ.

ಜನಸಂಖ್ಯೆಯಲ್ಲಿ ಹಿಂದೂಗಳೇ ಬಹುಸಂಖ್ಯೆಯಲ್ಲಿರುವುದರಿಂದ ಜೈಲುಗಳಲ್ಲಿರುವ ಕೈದಿಗಳಲ್ಲಿಯೂ ಹಿಂದೂ ಧರ್ಮಿಯರೇ ಬಹುಸಂಖ್ಯೆಯಲ್ಲಿದ್ದಾರೆ. ಅವರೆಲ್ಲ ಹಿಂದೂ ಧರ್ಮಕ್ಕೆ ಸೇರಿದವರು ಎನ್ನುವ ಕಾರಣಕ್ಕೆ ಬಿಜೆಪಿ ಅವರ ಪರವಾಗಿ ಹೋರಾಟ ನಡೆಸುತ್ತಾ?
ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ.

ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ. ಇದು ಧರ್ಮದ್ರೋಹದ ನಡೆ. ಕಾನೂನನ್ನು ಅದರ ಪಾಡಿಗೆ ಕೆಲಸ ಮಾಡಲು ಬಿಟ್ಟು ಬಿಡಿ.

ರಾಜ್ಯದ ಬಿಜೆಪಿ ನಾಯಕರಲ್ಲಿ ಈಗಲೂ ನಾನು ವಿನಂತಿ ಮಾಡುತ್ತಿದ್ದೇನೆ. ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಮಾಡುವುದನ್ನು ಕೈಬಿಟ್ಟು ಜವಾಬ್ದಾರಿಯುತವಾದ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿ. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ರೀತಿಯಲ್ಲಿ ನಾವು ರಾಜ್ಯವನ್ನು ಬಿಜೆಪಿ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಹೇಳಿಕೆಗಳನ್ನು ನೀಡುವುದಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿಯನ್ನು ಶಾಶ್ವತವಾಗಿ ವಿರೋಧಪಕ್ಷದ ಸ್ಥಾನದಲ್ಲಿ ಕೂರಿಸಬೇಕೆಂಬುದು ನನ್ನ ಗುರಿ. ರಾಜ್ಯ ಬಿಜೆಪಿ ನಾಯಕರ ಇತ್ತೀಚಿನ ಅವಾಂತರಗಳನ್ನೆಲ್ಲ ನೋಡಿದರೆ ಈ ಗುರಿ ಸಾಧನೆಗೆ ಅವರೇ ಸಹಕಾರ ನೀಡುತ್ತಿರುವಂತೆ ಕಾಣುತ್ತಿದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು