LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸಂಚಾರ ದಟ್ಟಣೆ, ಕಸ ವಿಲೇವಾರಿಗೆ ಪೈಲಟ್ ಪ್ರೋಗ್ರಾಂ: ಡಿಕೆಶಿ

ವಿಧಾನಪರಿಷತ್ ಸುವರ್ಣಸೌಧಅಭಿವೃದ್ಧಿಶೀಲ ಬೆಂಗಳೂರು ಮಹಾ ನಗರದಲ್ಲಿ ಸಹಜವಾಗಿ ಸಂಚಾರ ದಟ್ಟಣೆ ಹೆಚ್ಚುತ್ತಿದೆ. ಕಸ ವಿಲೇವಾರಿ ಕೂಡ ತಲೆ ನೋವಾಗಿದೆ. ಈ ಎಲ್ಲ ಸಮಸ್ಯೆ ಪರಿಹಾರಕ್ಕೆ ಪ್ರಾಯೋಗಿಕ ಯೋಜನೆಯೊಂದರ ಜಾರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರಿಗೆ ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದರು. ಸಹೋದರಿ ಭಾರತಿ ಶೆಟ್ಟಿ ಮಂಗಳೂರು ಭಾಗದವರಾಗಿದ್ದರೂ ಬೆಂಗಳೂರು ಅಭಿವೃದ್ಧಿ ಕುರಿತು ಪ್ರಶ್ನಿಸಿರುವುದು ಸಂತೋಷ. ಬೆಂಗಳೂರಿಗೆ ಹೋಲಿಸಿದರೆ ಮಂಗಳೂರು ಸುಂದರ ನಗರ. ಈಗ ಬೆಳಗಾವಿ ಸಹ ಬೆಂಗಳೂರಿನಷ್ಟು ವಿಸ್ತಾರ ಹೊಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನೊಮ್ಮೆ ಸಮೀಕ್ಷೆ ಮಾಡಲು ಸೂಚಿಸಿದ್ದೇನೆ. ಮಹಾನಗರಗಳ ದೊಡ್ಡ ಸಮಸ್ಯೆ ಎಂದರೆ ವಾಹನ ದಟ್ಟಣೆ, ಸಂಚಾರ ದಟ್ಟಣೆ, ಕಸ ವಿಲೇವಾರಿ ಮತ್ತು ಅಪ ರಾಧ ಕೃತ್ಯಗಳು. ನಮ್ಮ ಸರಕಾರ ಈ ವಿಷಯದಲ್ಲಿ ಕಠಿಣ ಕ್ರಮಕ್ಕೆ ಹಿಂಜರಿಯುವುದಿಲ್ಲ ಎಂದರು.
ಈಗಾಗಲೇ ಸಂಚಾರ ದಟ್ಟಣೆ, ಕಸ ವಿಲೇವಾರಿಗೆ ಸಂಬಂಧಿಸಿದಂತೆ ಹೈದ್ರಾಬಾದ್, ದೆಹಲಿಗೆ ಹೋಗಿ ನೋಡಿರುವುದಾಗಿ ತಿಳಿಸಿದ ಡಿಸಿಎಂ, ಸುಮಾರು 70 ಸಾವಿರ ಜನರಿಂದ ಸಲಹೆ ಸ್ವೀಕರಿಸಲಾಗಿದೆ. ಆರೋಗ್ಯಪೂರ್ಣ ಬೆಂಗಳೂರು ಮತ್ತು ಹಸಿರು ಬೆಂಗಳೂರು ನಿರ್ಮಾಣಕ್ಕೆ ಏನೇನು ಮಾಡಬೇಕು ಎನ್ನುವ ಕುರಿತು ಯೋಜನೆ ರೂಪಿಸಲಾಗುತ್ತಿದೆ ಎಂದರು.

ಬೆಂಗಳೂರು ಈಗ ಉತ್ತರದ ಕಡೆಗೆ ಹೆಚ್ಚು ಅಭಿವೃದ್ಧಿ ಹೊಂದುತ್ತಿದೆ. ಹಾಗಾಗಿ ತುಮಕೂರು ಸೇರಿದಂತೆ ನಾನಾ ಭಾಗಗಳ ವಾಹನಗಳು ಅಧಿಕವಾಗಿರುವುದರಿಂದ ವಾಹನ ದಟ್ಟಣೆ, ಸಂಚಾರ ದಟ್ಟಣೆ ಹೆಚ್ಚಾಗಿದೆ. ಇವುಗಳಿಗೆಲ್ಲ ಕಡಿವಾಣ ಹಾಕಲು ಜನರ-ಜನಪ್ರತಿನಿಧಿಗಳ ಸಲಹ ಮೇರೆಗೆ ಪ್ರಾಯೋಗಿಕ ಕಾರ್ಯಕ್ರಮ ರೂಪಿಸಲು ಸರಕಾರ ಯೋಚಿಸಿದೆ. ಜೊತೆಗೆ ಪ್ರವಾಸೋದ್ಯಮ ತಾಣವಾಗಿ ಬೆಂಗಳೂರಿನ ಅಭಿವೃದ್ಧಿ ಕುರಿತು ಚಿಂತನೆ ನಡೆದಿದೆ ಎಂದರು.

ಸರಗಳ್ಳತನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭಾರತಿ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಗೃಹ ಸಚಿವರು ಮತ್ತು ತಾವು ಸೇರಿ ಈ ಬಗ್ಗೆ ಚಿಂತನೆ ನಡೆಸಿದ್ದೇವೆ. ಜನದಟ್ಟಣೆ ಇರುವಲ್ಲಿ ಸಿಸಿ ಕ್ಯಾಮೆರಾಗಳು, ಪೊಲೀಸ್ ಕಣ್ಗಾವಲು ಹೆಚ್ಚಿಸಿದ್ದೇವೆ ಎಂದು ಡಿಸಿಎಂ ವಿವರಿಸಿದರು. ಡಿಸಿಎಂಗೆ ಧ್ವನಿಗೂಡಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ, ಬೆಂಗಳೂರಿನಾದ್ಯಂತ ಗುಣಮಟ್ಟದ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ರಸ್ತೆ ಮೇಲೆ ಓಡಾಡುವವರ ವಾಚ್ ನಲ್ಲಿ ಟೈ ನೋಡುವಷ್ಟು ಹೈ ರೆಸುಲ್ಯೂಷನ್ ಇರುವ ಕ್ಯಾಮೆರಾ ಇವು. ಶೀಘ್ರವೇ ನಿರ್ಭಯಾ ಯೋಜನೆಯಡಿ ಬೆಂಗಳೂರಿನಲ್ಲಿ ಇನ್ನೂ ಸುಮಾರು 2,500 ಸಿಸಿ ಕ್ಯಾಮೆರಾ ಅಳವಡಿಸುತ್ತೇವೆ. ಸರಗಳ್ಳತನ, ಹಲ್ಲೆ, ದರೋಡೆ ಮತ್ತಿತರ ಅಪರಾಧ ಕೃತ್ಯಗಳ ಪತ್ತೆಗೆ ಈ ಕ್ರಮ ಹೆಚ್ಚು ಸಹಕಾರಿ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು