LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

PM-JAY ಅಡಿಯಲ್ಲಿ ಚಿಕಿತ್ಸೆ ನಿರಾಕರಿಸಿದ್ದಕ್ಕೆ ವೃದ್ಧ ಆತ್ಮಹತ್ಯೆ; ರಾಜ್ಯ ಸರ್ಕಾರದಿಂದ ವರದಿ ಕೇಳಿದ ಕೇಂದ್ರ

ನವದೆಹಲಿ: ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ (ಎಬಿ-ಪಿಎಂಜೆಎವೈ) ಯೋಜನೆಯಡಿ ಚಿಕಿತ್ಸೆ ನಿರಾಕರಿಸಿದ್ದರಿಂದ ಮನನೊಂದು 72 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದಿಂದ ವರದಿ ಕೇಳಿದೆ.

ಅಧಿಕೃತ ಮೂಲಗಳ ಪ್ರಕಾರ, ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA) ರಾಜ್ಯ ಆರೋಗ್ಯ ಪ್ರಾಧಿಕಾರದಿಂದ ವರದಿ ಕೇಳಿದೆ. ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನದ ಹೊಣೆಯನ್ನು ಹೊತ್ತುಕೊಂಡಿದೆ.

ವರದಿಗಳ ಪ್ರಕಾರ, ವ್ಯಕ್ತಿಗೆ ಗ್ಯಾಸ್ಟ್ರಿಕ್ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಆದರೆ, ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ನಿರಾಕರಿಸಿದ ನಂತರ ಮನನೊಂದು ಡಿಸೆಂಬರ್ 25 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಚಿಕಿತ್ಸೆ ನಿರಾಕರಿಸಿದ್ದರಿಂದ ಅವರು ಖಿನ್ನತೆಗೆ ಒಳಗಾಗಿದ್ದರು. ತನಗೆ ಕ್ಯಾನ್ಸರ್ ಇರುವುದು ಪತ್ತೆಯಾದ 15 ದಿನಗಳ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವರದಿ ಬಹಿರಂಗಪಡಿಸಿದೆ. ಆದರೆ, 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ವಿಸ್ತರಿಸಿರುವ ಯೋಜನೆ ಇನ್ನೂ ಜಾರಿಯಾಗಿಲ್ಲ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಆದಾಯದ ಮಿತಿಗಳಿಲ್ಲದೆ 70 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೂ ಎಬಿ-ಪಿಎಂಜೆಎವೈ ಅಡಿ ಆರೋಗ್ಯ ವಿಮಾ ಸೌಲಭ್ಯ ಕಲ್ಪಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಅದರಂತೆ 70 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಎಲ್ಲರಿಗೂ ವಾರ್ಷಿಕ 5 ಲಕ್ಷ ರೂ.ಗಳವರೆಗೆ ವಿಮಾ ಸೌಲಭ್ಯ ಸಿಗಲಿದೆ. ಈ ಯೋಜನೆಯಡಿ, ಹಿರಿಯ ನಾಗರಿಕರು ಪ್ರತ್ಯೇಕ ಆಯುಷ್ಮಾನ್ ವಯ ವಂದನಾ ಕಾರ್ಡ್ ಅನ್ನು ಸಹ ಪಡೆಯುತ್ತಾರೆ.

ಎಬಿ- ಪಿಎಂಜೆಎವೈ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ವರ್ಷಕ್ಕೆ 5 ಲಕ್ಷ ರೂ.ವರೆಗೆ ವಿಮೌ ಸೌಲಭ್ಯ ಕಲ್ಪಿಸಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರದ ಚಿಕಿತ್ಸೆಗಳನ್ನು ಫಲಾನುಭವಿಗಳು ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ಪಡೆಯಬಹುದಾಗಿದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು