LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಪ್ರಜ್ವಲ್ ಪ್ರಕರಣ: ಕಾನೂನು ಪ್ರಕಾರ ಕ್ರಮ-ಜೋಶಿ

ಕಲಬುರಗಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಬಗ್ಗೆ ಕಲಬುರಗಿಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಪಾಸ್‍ ಪೋರ್ಟ್ ರದ್ದತಿಗೆ ಅದರದ್ದೇ ಆದ ಪ್ರಕ್ರಿಯೆಗಳು ಇವೆ.

ರಾಜತಾಂತ್ರಿಕ ಪಾಸ್‍ಪೋರ್ಟ್ ರದ್ದತಿಗೆ ಕೋರ್ಟ್‍ನಲ್ಲಿ ಅರ್ಜಿ ಹಾಕಲಾಗಿದೆ ಎಂದು ಜೋಶಿ ಹೇಳಿದರು.ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ. ಆದರೆ, ನನ್ನ ಪ್ರಶ್ನೆಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಪರಮೇಶ್ವರ್ ಈವರೆಗೆ ಉತ್ತರಿಸಿಲ್ಲ. ಪ್ರಜ್ವಲ್ ಪೆನ್‍ಡ್ರೈವ್ ಹೊರಬಂದಿದ್ದು ಏಪ್ರಿಲ್ 21ರಂದು. ಆದರೆ, ಪ್ರಜ್ವಲ್ ವಿದೇಶಕ್ಕೆ ಹೋಗಿದ್ದು ಏಪ್ರಿಲ್ 27ರಂದು. ಹಾಗಾದರೆ ಅಲ್ಲಿಯವರೆಗೆ ಇವರೇನು ಕತ್ತೆ ಕಾಯುತ್ತಿದ್ದಾರಾ ಎಂದು ಜೋಶಿ ಖಾರವಾಗಿ ಪ್ರಶ್ನಿಸಿದ್ದಾರೆ.

ವಿದೇಶಕ್ಕೆ ಹೋದವರನ್ನು ಕರೆತರಲು ಪ್ರಕ್ರಿಯೆಗಳಿವೆ. ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲು ಕೇಂದ್ರ ತಯಾರಿದೆ. ಪತ್ರ ಬರೆದ ತಕ್ಷಣ ಪಾಸ್‍ಪೋರ್ಟ್ ರದ್ದಾಗಬೇಕು ಎಂದರೆ ಹೇಗೆ? ಇದೀಗ ಪ್ರಕರಣವನ್ನು ಬಿಜೆಪಿ ಮೇಲೆ ಹಾಕುವ ಪ್ರಯತ್ನ ಕಾಂಗ್ರೆಸ್ ಮಾಡುತ್ತಿದೆ. ಒಕ್ಕಲಿಗ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಚುನಾವಣೆ ಮುಗಿಯುವವರೆಗೂ ಏನೂ ಕ್ರಮ ಕೈಗೊಂಡಿಲ್ಲ ಎಂದು ಜೋಶಿ ಆರೋಪಿಸಿದರು.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಗಂಭೀರ ಪ್ರಕರಣ. ಪ್ರಜ್ವಲ್ ವಿಚಾರಣೆ ಎದುರಿಸಬೇಕು. ಅವರು ತಪ್ಪು ಮಾಡಿದ್ದೇ ಆಗಿದ್ದರೆ ಕಠಿಣ ಕ್ರಮ ಆಗಲೇಬೇಕು. ಇದರಲ್ಲಿ ಯಾವುದೇ ಅನುಕಂಪ ಇಲ್ಲವೇ ಇಲ್ಲ ಎಂದಿದ್ದಾರೆ.ಪ್ರಜ್ವಲ್ ಪ್ರಕರಣದಲ್ಲಿ ರಾಜ್ಯ ಸರ್ಕಾರ ತನಿಖೆಗಿಂತ ಹೆಚ್ಚು ರಾಜಕಾರಣ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.ಪ್ರಜ್ವಲ್ ರಾಜತಾಂತ್ರಿಕ ಪಾಸ್‍ಪೋರ್ಟ್ ರದ್ದುಪಡಿಸಿದರೆ ಅವರು ವಾಪಸ್ ಬರಲೇಬೇಕಾಗುತ್ತದೆ. ಹೀಗಾಗಿ ಆ ಕ್ರಮ ಕೈಗೊಳ್ಳಬೇಕು. ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು