LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಆವತಿ ಗ್ರಾಮದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅಧ್ಯಕ್ಷೆ ಮುನಿರತ್ನಮ್ಮ ಚಾಲನೆ

ದೇವನಹಳ್ಳಿ : ಪ್ರತಿಯೊಬ್ಬರೂ 5ವರ್ಷದೊಳಗಿನ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿ, ಅಂಗವಿಕಲತೆ ಬಾರದಂತೆ ನಿಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಿ ಎಂದು ಆವತಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶ್ರೀಮತಿ ಮುನಿರತ್ನಮ್ಮ ತಿಳಿಸಿದರು.

ಅವರು ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶನದಂತೆ ಫಲ್ಸ್ ಪೋಲಿಯೋ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಆರೋಗ್ಯವೇ ಭಾಗ್ಯ, ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು,

ಪೋಲಿಯೊ ಒಂದು ಭಯಾನಕ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ, ಈ ರೋಗ 5 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ ಆದ್ದರಿಂದ ಎಲ್ಲರೂ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿ ಎಂದರು.ಗ್ರಾಪಂ ಸದಸ್ಯ ನರಸಪ್ಪ ಮಾತನಾಡಿ ಭಾರತ ದೇಶವು ಪೋಲಿಯೊ ಮುಕ್ತ ರಾಷ್ಟ್ರ ಎಂದು 2014 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ,

ಆದರೂ ಕೂಡ ಪಕ್ಕದ ನೆರೆಯ ದೇಶಗಳಲ್ಲಿ 2024 ರಲ್ಲಿ 12 ಪ್ರಕರಣಗಳು ಕಂಡುಬಂದಿದೆ ಎಂದು ವರದಿ ಬಂದಿದೆ, ಈ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಆರೋಗ್ಯ ಇಲಾಖೆಯಲ್ಲಿ ಪಲ್ಸ್ [ಪೋಲಿಯೊಕಾರ್ಯಕ್ರಮವನ್ನು ಕರ್ನಾಟಕ ಆರೋಗ್ಯ ಇಲಾಖೆ ನಿರ್ಧರಿಸಿದೆ ಇದರಲ್ಲಿ ಪ್ರತಿಯೊಬ್ಬ ಜನಪ್ರತಿನಿದಿಗಳು ಭಾಗವಹಿಸಿ ಲಸಿಕೆ ಹಾಕುವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು
ಈ ಸಮಯದಲ್ಲಿ ಆವತಿ ಗ್ರಾ.ಪಂ. ಅಧ್ಯಕ್ಷರಾದ ಮುನಿರತ್ನಮ್ಮ ಉಪಾಧ್ಯಕ್ಷರಾದ ಸೌಭಾಗ್ಯಮ್ಮ, ಸದಸ್ಯರಾದ ನರಸಪ್ಪ, ರತ್ನಮ್ಮ ಹಾಗೂ ಆವತಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ತಿಲಕ್ ಅಶಾ ಕಾರ್ಯಕರ್ತರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು