LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಪ್ರತಿಭಟನೆ

ಕೋಲಾರ : ರಾಜ್ಯಸರ್ಕಾರವು ಸರ್ಕಾರಿ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸದೆ ವಿಳಂಭ ದೋರಣೆಯನ್ನು ತೋರುತ್ತಿರುವುದನ್ನು ಖಂಡಿಸಿ, ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳಾದ ಎಂ.ಆರ್.ರವಿ ಅವರಿಗೆ ಮನವಿ ಸಲ್ಲಿಸಿದರು.
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆಯ ಜಿಲ್ಲಾಧ್ಯಕ್ಷ ಚಂದ್ರಪ್ಪ ಮಾತನಾಡಿ, ಸರ್ಕಾರಿ ಇಲಾಖೆಗಳಲ್ಲಿ ಸುಮಾರು 2.84 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಉಳಿದಿವೆ. ಈ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸುವುದಾಗಿ ಸರ್ಕಾರ ಹುಸಿ ಭರವಸೆಗಳನ್ನು ನೀಡುತ್ತಾ ಬರುತ್ತಿದೆ. ಪ್ರಸ್ತುತ ವರ್ಷದಲ್ಲಿ 56,432 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಆದರೆ ಇದೂ ಸಹ ಕೇವಲ ಭರವಸೆಗೆ ಸೀಮಿತವಾಗಿಯೇ ಉಳಿದಿದೆ ಎಂದು ಆಪಾದಿಸಿದರು.
ಸರ್ಕಾರಿ ಉದ್ಯೋಗವನ್ನು ಪಡೆಯಬೇಕೆಂಬ ಉದ್ದೇಶದಿಂದ ಸಾಕಷ್ಟು ಅಭ್ಯರ್ಥಿಗಳು ತಮ್ಮ ಮನೆ ಬಿಟ್ಟು ಕುಳಿತು ಸಿದ್ದತೆ ನಡೆಸುತ್ತಿದ್ದಾರೆ. ಆದರೆ ವರ್ಷಗಳು ಕಳೆದರೂ ಸಹ ಸರ್ಕಾರ ಯಾವುದೇ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿಲ್ಲ. ಇದರಿಂದ ಅಭ್ಯರ್ಥಿಗಳಿಗೆ ಮುಂದಿನ ಜೀವನದ ದಾರಿಯೇ ತಿಳಿಯದಂತಹ ಪರಿಸ್ಥಿತಿ ಎದುರಾಗಿದೆ. ಸರ್ಕಾರದ ಈ ಅಸಡ್ಡೆಯ ಧೋರಣೆಯು ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ದ ಉಗ್ರ ಹೋರಾಟವನ್ನು ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿರುವ ಹುದ್ದೆಗಳಿಗೆ ಈ ಕೂಡಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಬೇಕು. ಕೆಲವು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲವಾಗಿರುವುದಿಂದ ವಯೋಮಿತಿಯನ್ನು ಹೆಚ್ಚಿಸಬೇಕು. ಕೆ.ಪಿ.ಎಸ್.ಸಿ ನಡೆಸಿದ ಕೆ.ಎ.ಎಸ್, ಸಿ.ಟಿ.ಐ, ಪಿಡಿಓ ಇತ್ಯಾದಿ ಪರೀಕ್ಷೆಗಳಲ್ಲಿ ಅಕ್ರಮಗಳು ಕಂಡುಬAದಿದ್ದು ಇವುಗಳ ಬಗ್ಗೆ ತನಿಖೆ ಮಾಡಲು ಸಿ.ಬಿ.ಐಗೆ ಒಪ್ಪಿಸಬೇಕು. ಜಿಲ್ಲಾ ಗ್ರಂಥಾಲಯದಲ್ಲಿ ಸೌಲಭ್ಯಗಳನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಎನ್.ಕೆ.ನಾಗೇಶ್ ಮಾತನಾಡಿ, ಕೋಲಾರ ಜಿಲ್ಲೆಯ ಸ್ಪರ್ಧಾರ್ಥಿಗಳಿಗೆ ಅಧ್ಯಯನ ಮಾಡಲು ಜಿಲ್ಲಾ ಗ್ರಂಥಾಲಯದಲ್ಲಿ ಸ್ಥಳಾವಕಾಶದ ಕೊರತೆ ಇದೆ. ಇದರಿಂದ ಅಭ್ಯರ್ಥಿಗಳು ಅಧ್ಯಯನ ಮಾಡಲು ಸಮಸ್ಯೆಯಾಗುತ್ತಿದೆ. ಗ್ರಂಥಾಲಯದ ಹೊರಗಿನ ಮರಗಳ ಕೆಳಗೆ ಕುಳಿತು ಅಧ್ಯಯನ ಮಾಡುವ ಸ್ಥಿತಿ ಬಂದೊದಗಿದೆ. ಹಾಗಾಗಿ ಸರ್ಕಾರವು ಈ ಕೂಡಲೇ ಜಿಲ್ಲೆಗೆ 500 ಆಸನಗಳ ಸಾಮರ್ಥ್ಯದ ಹೊಸ ಗ್ರಂಥಾಲಯವನ್ನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ಇಲಾಖೆಯಲ್ಲಿ ಸೂಕ್ತ ನೇಮಕಾತಿಗಳನ್ನು ಮಾಡಿಕೊಳ್ಳದೆ ಸರ್ಕಾರ ಆಡಳಿತ ಯಂತ್ರ ಕುಸಿಯುತ್ತಿದೆ. ಸರ್ಕಾರ ಕಾಲಕಾಲಕ್ಕೆ ನೇಮಕಾತಿಗಳನ್ನು ನಡೆಸದೆ ಯುವ ಸಮುದಾಯಕ್ಕೆ ಅನ್ಯಾಯವೆಸಗುತ್ತಿದೆ. ಪ್ರತಿವರ್ಷ ಸಾವಿರಾರು ಮಂದಿ ನಿವೃತ್ತಿಯನ್ನು ಹೊಂದುತ್ತಾರೆ. ಇಂತಹ ಸಮಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವವರೇ ಇಲ್ಲದಂತಾದರೆ ಸಾರ್ವಜನಿಕರಿಗೆ ಉತ್ತಮ ಆಡಳಿತವನ್ನು ನೀಡುವುದು ಹೇಗೆ ತಾನೆ ಸಾಧ್ಯ. ಅಭ್ಯರ್ಥಿಗಳು ನಿರಂತರ ಹೋರಾಟ ನಡೆಸುತ್ತಿದ್ದರೂ ಇದರ ಬಗ್ಗೆ ಗಮನ ಹರಿಸದೆ ಇರುವುದು ಸರ್ಕಾರದ ನಿರ್ಲಕ್ಷö್ಯ ಧೋರಣೆಯನ್ನು ತೋರುತ್ತದೆ. ಯುವಜನತೆಯೇ ನಮ್ಮ ರಾಜ್ಯದ ಶಕ್ತಿ. ಇಂತಹ ಯುವ ಸಮುದಾಯಕ್ಕೆ ಸೂಕ್ತ ಉದ್ಯೋಗಗಳನ್ನು ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಈ ಕೂಡಲೇ ನೇಮಕಾತಿಗಳನ್ನು ನಡೆಸಬೇಕೆಂದು ಜೆಡಿಎಸ್. ಮುಖಂಡ ಸಿ.ಎಂ.ಆರ್. ಶ್ರೀನಾಥ್ ಒತ್ತಾಯಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು