LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕತ್ತಲಲ್ಲಿ ಬರ ಅಧ್ಯಯನ ನಡೆಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್

ದೊಡ್ಡಬಳ್ಳಾಪುರ: ತಾಲ್ಲೂಕಿಗೆ ತಡವಾಗಿ ಕತ್ತಲೆಯಲ್ಲಿ ಆಗಮಿಸಿದ ಬಿಜೆಪಿ ಬರ ಅಧ್ಯಯನ ತಂಡ. ಬರದ ಕುರಿತು ಸರ್ಕಾರವನ್ನು ಟೀಕೆ ಮಾಡುತ್ತಿದ್ದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶುಕ್ರವಾರ ರಾತ್ರಿ ಸ್ವತಃ ತಾವೇ ಟೀಕೆಗೆ ಗುರಿಯಾದ ಘಟನೆ ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಡೆಯಿತು.

ಬಿಜೆಪಿ ನಾಯಕರು ಪದೇ ಪದೇ ರಾಜ್ಯಾದ್ಯಂತ ತಿರುಗಿ ಬರ ಸಮೀಕ್ಷೆ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದಾರೆ, ಇನ್ನೊಂದೆಡೆ ಟೀಕೆಗೆ ಗುರಿಯಾಗುವಂತಹ ಕೆಲಸವನ್ನು ಬಿಜೆಪಿ ನಾಯಕರು ತಾವೇ ಮಾಡುತ್ತಿದ್ದಾರೆ.ಬರ ಅದ್ಯಯನಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳ ಹಿಂದೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ನಿಯೋಗ ಬಂದು ಬರದ ಕುರಿತು ಸಮೀಕ್ಷೆ ನಡೆಸಿ ಹೋಗಿದೆ, ಸಾಲದೆಂಬಂತೆ ರಾಜ್ಯ ಬಿಜೆಪಿ ನಾಯಕರು ಸಹ ಅನಗತ್ಯವಾಗಿ ಪ್ರಚಾರ ಪಡೆಯಲು ಬರ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಪ್ರವಾಸ ಮಾಡಿದ್ದರು. ಕೇಂದ್ರ ಸರ್ಕಾರ ಬರದ ಪರಿಹಾರವಾಗಿ ರಾಜ್ಯಕ್ಕೆ ನಯಾಪೈಸೆ ಬಿಡುಗಡೆ ಮಾಡಿಲ್ಲ.

ಶುಕ್ರವಾರ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ರೈತರ ಜಮೀನಿಗಳಿಗೆ ಭೇಟಿ ನೀಡಿ ಬರದಿಂದ ಉಂಟಾಗಿರುವ ನಷ್ಟ, ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು, ಉಳುಮೆ ಭೂಮಿ ಬರದಿಂದ ಏನೆಲ್ಲಾ ನಷ್ಟವಾಗಿದೆ ಎಂದು ಸಮೀಕ್ಷೆ ನಡೆಸಬೇಕಿತ್ತು. ಆದರೆ ನಿಗದಿತ ಸಮಯಕ್ಕೆ ಬಾರದೆ, ತಡವಾದ ಕಾರಣ ಕತ್ತಲಾಗಿದ್ದು, ರೈತರೊಬ್ಬರ ಹೊಲವನ್ನು ಮೊಬೈಲ್ ಟಾರ್ಚ್ ಬೆಳಕಲ್ಲಿ ಬರ ವೀಕ್ಷಣೆ ಮಾಡಿದರು.

ಈ ವೇಳೆ ವಿಪಕ್ಷ ನಾಯಕ ಅಶೋಕ್ ಅವರ ಜೊತೆಗೆ ಇದ್ದ ಬಿಜೆಪಿ ಕಾರ್ಯಕರ್ತರ ಗುಂಪು ಹೊಲಕ್ಕೆ ನುಗ್ಗಿದ್ದರಿಂದ ಅಳಿದುಳಿದ ಬೆಳೆಯು ನಾಶವಾಗಿದೆ ಎಂಬ ಪಿಸು ಮಾತುಗಳು ಅಲ್ಲಿದ್ದ ರೈತರಿಂದ ಕೇಳಿಬಂತು.ನಂತರ ಕೋಡಿಹಳ್ಳಿ ಗ್ರಾಮಕ್ಕೆ ತೆರಳಿದ ಆರ್.ಅಶೋಕ್ ಅವರು ಅಲ್ಲಿನ ಇಬ್ಬರು ರೈತರನ್ನು ಬೇಟಿ ಮಾಡಿ ಮಾತನಾಡಿದರು,

ವಿಪಕ್ಷ ನಾಯಕ ರೊಂದಿಗೆ ತಮ್ಮ ಅಳಲು ತೋಡಿಕೊಂಡ ರೈತ ಕುಟುಂಬ, ನಮಗೆ ಗೃಹಲಕ್ಷ್ಮೀಯೂ ಬಂದಿಲ್ಲ, ಹಾಲಿಗೆ ಎರಡು ರೂ ಕಡಿತ ಮಾಡಿದ್ದಾರೆ, ಪಡಿತರದಲ್ಲಿ ಮೂರು ಕೆಜಿ ಅಕ್ಕಿ ಎರಡು ಕೆಜಿ ರಾಗಿ ಕೊಡ್ತಾರೆ ನಮಗೆ ರಾಗಿ ಬೇಡ ಅಕ್ಕಿ ಕೊಡಲಿ ಎಂದರು. ಮತ್ತೊಬ್ಬ ವೃದ್ದೆ ಮಾತನಾಡಿ ನಮಗೆ ಸರಿಯಾಗಿ ಕರೆಂಟ್ ಕೊಟ್ಟರೆ ಸಾಕಪ್ಪ ಬೇರೆ ಏನೂ ಬೇಡ ಎಂದರು.

ಕೇಂದ್ರ ಸರ್ಕಾರದ ತಂಡ ಬರ ವೀಕ್ಷಣೆ ಮಾಡಿ ಹೋಗಿದ್ದು, ಪರಿಹಾರ ಬಿಡುಗಡೆ ಮಾಡದಿರುವ ಬಗ್ಗೆ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಆರ್.ಅಶೋಕ್ ನಮ್ಮ ಅವದಿಯಲ್ಲಿ ರೈತರಿಗೆ ನಾವು ಬರಪರಿಹಾರ ನೀಡಲು ಕೇಂದ್ರ ಸರ್ಕಾರವನ್ನು ಕಾಯಲಿಲ್ಲ ನಾವೇ ಕೊಟ್ಟೆವು ಎಂದು ಹೇಳುವ ಮೂಲಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಹಣ ಕೊಡುತ್ತಿಲ್ಲ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಸುಧಾಕರ್, ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ಸೇರಿದಂತೆ ತಾಲ್ಲೂಕಿನ ಕಂದಾಯ, ಹಾಗೂ ಪೆÇಲೀಸ್ ಇಲಾಖೆ ಅಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು