LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಾಜಣ್ಣ ಮತ್ತೆ ಸಂಪುಟಕ್ಕೆ!?

ಬೆಂಗಳೂರು; ತಮ್ಮದೇ ಆದಂತಹ ಶೈಲಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸಂಪುಟ ಸಚಿವ ಸ್ಥಾನ ಕಳೆದುಕೊಂಡಿದ್ದ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಮತ್ತೆ ಸಚಿವ ಸ್ಥಾನ ದೊರೆಯುವ ಸಾಧ್ಯತೆಯಿದೆ.
ಈ ವಿಷಯವನ್ನು ಗೃಹಸಚಿವ ಡಾ.ಜಿ. ಪರಮೇಶ್ವರ್ ಪರೋಕ್ಷವಾಗಿ ಬಹಿರಂಗಪಡಿಸಿದ್ದಾರೆ. ರಾಜಣ್ಣಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ಮುಖ್ಯಮಂತ್ರಿಯವರು ರಾಜಣ್ಣ ಅವರಿಗೆ ನಾನು ಎಲ್ಲಿದ್ದರೂ ಸಿಹಿಯನ್ನೆ ಕೊಡುವುದು. ಸಿಹಿಯನ್ನೇ ಕೊಡುತ್ತೇನೆ ಎಂದು ಹೇಳಿದ್ದಾರೆ. ಇನ್ನೇನು ಆಯಿತಲ್ಲ ಎಂದು ಉತ್ತರಿಸಿದ್ದಾರೆ. ಹೀಗಾಗಿ ರಾಜಣ್ಣ ಅವರಿಗೆ ಮತ್ತೆ ಸಚಿವ ಸಾನ ದೊರೆಯುವುದನ್ನು ಪರಮೇಶ್ವರ್ ತಿಳಿಸಿದ್ದಾರೆ.
ನಿನ್ನೆ ತುಮಕೂರಿನಲ್ಲಿ ರಾಜಣ್ಣ ಅವರ ಮನೆಯಲ್ಲಿ ಭೋಜನಕೂಟದಲ್ಲಿ ಮಾಂಸಾಹಾರವನ್ನ ಏರ್ಪಡಿಸಲಾಗಿದ್ದು, ಮಾಂಸಹಾರದ ಊಟದ ಬಗ್ಗೆ ಚರ್ಚೆ ನಡೆಸಿದ್ದೇವೆ. ಬೇರೆ ಯಾವುದೇ ರಾಜಕೀಯದ ಬಗ್ಗೆ ಚರ್ಚೆ ನಡೆಸಿಲ್ಲ ಇದೇ ಸಂದರ್ಭದಲ್ಲಿ ಸಷ್ಟಪಡಿಸಿದ್ದಾರೆ.
ಜೆಡಿಎಸ್-ಬಿಜೆಪಿ ಕೇಳಿ ಆಡಳಿತ ನಡೆಸುತ್ತಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಗರಂ ಆದ ಪರಮೇಶ್ವರ್, ಶಿಡ್ಲಘಟ್ಟ ನಗರಸಭೆಯ ಆಯುಕ್ತೆ ಅಮೃತಾಗೌಡ ಅವರನ್ನು ನಿಂದಿಸಿ ನಾಪತ್ತೆ
ಯಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಅವರ ಬಂಧನ ವಿಳಂಬ ಆಗುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ಆರೋಪಿಯನ್ನು ಆದಷ್ಟೂ ಕೂಡಲೇ ಬಂಧಿಸಲಾಗುವುದು, ಅವರ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದಿದ್ದಾರೆ.
ಶಾಸಕ ಜನಾರ್ಧನ ರೆಡ್ಡಿ ಶ್ರೀರಾಮುಲು ಅವರು ಬಳ್ಳಾರಿಯಲ್ಲಿ ನಡೆಸುವ ಸಮಾವೇಶದ ಕುರಿತಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಬಳ್ಳಾರಿಯಲ್ಲಿ ಸಮಾವೇಶಕ್ಕೆ ಇದುವರೆಗೂ ಪರ್ಮಿಷನ್ ಕೊಟ್ಟಿಲ್ಲ. ಅವಕಾಶ ಕೊಡೋ ವಿಚಾರ ಸ್ಥಳೀಯ ಪೊಲೀಸರಿಗೆ ಬಿಟ್ಟಿದ್ದೇವೆ. ಅಲ್ಲಿನ ಸ್ಥಿತಿಗತಿ ನೋಡಿಕೊಂಡು ನೀವು ಅವರಿಗೆ ಪರ್ಮಿಷನ್ ಕೊಡಬೇಕ ಬೇಡ್ವಾ ಅನ್ನೋದನ್ನ ನೀವೇ ತೀರ್ಮಾನ ಮಾಡಿ ಅಂತ ಹೇಳಿದ್ದೇವೆ. ಹಾಗಾಗಿ ಅಲ್ಲಿನ ಸ್ಥಳೀಯ ಪೊಲೀಸರು ಪರ್ಮಿಷನ್ ಕೊಡುವ ವಿಚಾರವಾಗಿ ನಿರ್ಧರಿಸುತ್ತಾರೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು