LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರತೀಯ ಪ್ರಮುಖ ಐದು ಭಾಷೆಗಳಲ್ಲಿ ರಾಮಾಯಣ: ಪಾರ್ಟ್-1 ಚಿತ್ರ ಅನಾವರಣ

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ನಿರೀಕ್ಷಿತ ಹಾಗೂ ಬಹುಕೋಟಿ ವೆಚ್ಚದ `ನಮಿತ್ ಮಲ್ಹೋತ್ರಾ ಅವರ `ರಾಮಾಯಣ: ಪಾರ್ಟ್ 1' ಚಿತ್ರದ ಅಧಿಕೃತ ಟ್ರೇಲರ್ (ಜುಲೈ 30) ಬೆಳಗಿನ ಜಾವ ಜಾಗತಿಕವಾಗಿ ಬಿಡುಗಡೆಯಾಗಿದೆ. ವಿಶ್ವದಾದ್ಯಂತ ಅಪಾರ ಅಭಿಮಾನಿಗಳನ್ನು ಮತ್ತು ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿರುವ ಈ ಟ್ರೇಲರ್ ಅನ್ನು ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಸೇರಿದಂತೆ ಐದು ಪ್ರಮುಖ ಭಾರತೀಯ ಭಾಷೆಗಳಲ್ಲಿ ಅನಾವರಣಗೊಳಿಸಲಾಗಿದೆ.ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರವನ್ನು ನಮಿತ್ ಮಲ್ಹೋತ್ರಾ ಅವರ 'ಪ್ರೈಮ್ ಫೋಕಸ್ ಸ್ಟುಡಿಯೋಸ್', ಎಂಟು ಬಾರಿ ಆಸ್ಕರ್ ಪ್ರಶಸ್ತಿ ವಿಜೇತ ವಿಎಫ್‌ಎಕ್ಸ್ ಸ್ಟುಡಿಯೋ 'ಆಓಇಉ' ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ 'ಮಾನ್ಸ್ಟ್ರ್ ಮೈಂಡ್ ಕ್ರಿಯೇಷನ್ಸ್' ಜಂಟಿಯಾಗಿ ನಿರ್ಮಿಸಿವೆ. ಈ ಚಿತ್ರವು 2026ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿಶ್ವ ದಾದ್ಯಂತ ಭವ್ಯವಾಗಿ ಬಿಡುಗಡೆಯಾಗಲಿದ್ದು, ಜಾಗತಿಕ ವಿತರಣೆಯನ್ನು 'ಸೋನಿ ಪಿಕ್ಚರ್ಸ್' ಹಾಗೂ ಉತ್ತರ ಭಾರತದ ವಿತರಣೆ 'ಧರ್ಮ ಪ್ರೊಡಕ್ಷನ್ಸ್' ವಹಿಸಿಕೊಂಡಿವೆ.ವಿಶ್ವದ ಅತ್ಯಂತ ಪುರಾತನ ಮತ್ತು ಶ್ರೇಷ್ಠ ಮಹಾಕಾವ್ಯಗಳಲ್ಲಿ ಒಂದಾದ ರಾಮಾಯಣವನ್ನು ಆಧರಿಸಿ, ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಎರಡು ಭಾಗಗಳ ಬೃಹತ್ ಸಿನಿಮ್ಯಾಟಿಕ್ ದೃಶ್ಯಕಾವ್ಯವಾಗಿ ಇದನ್ನು ನಿರ್ಮಿಸುತ್ತಿದ್ದಾರೆ. ಸೃಷ್ಟಿಯ ಆರಂಭದಿAದಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರು ಮೂರು ಲೋಕಗಳನ್ನು ಆಳುತ್ತಿದ್ದು, ಧರ್ಮ-ಅಧರ್ಮಗಳ ನಡುವಿನ ಸಮತೋಲನ ತಪ್ಪಿದಾಗ ಶ್ರೀಮಹಾ ವಿಷ್ಣುವು ರಾಮನಾಗಿ ಭೂಮಿಯಲ್ಲಿ ಅವತರಿಸುತ್ತಾರೆ. ಅಜೇಯ, ಅಮರ ಹಾಗೂ ಅಹಂಕಾರದಿAದ ಬ್ರಹ್ಮಾಂಡವನ್ನೇ ನಡುಗಿಸುವ ಅಸುರ ಚಕ್ರವರ್ತಿ ರಾವಣನ ವಿರುದ್ಧ ರಾಮನು ನಡೆಸುವ ಧರ್ಮಯುದ್ಧವೇ ಈ ಮಹಾಕಾವ್ಯದ ಜೀವಾಳವಾಗಿದೆ. ಈ ಮಹಾಕಾವ್ಯದಲ್ಲಿ ಭಾರತೀಯ ಚಿತ್ರರಂಗದ ಅದ್ಭುತ ಕಲಾವಿದರ ದಂಡೇ ಇದೆ. ರಣಬೀರ್ ಕಪೂರ್ ಅವರು ಶ್ರೀರಾಮನಾಗಿ ಕಾಣಿಸಿಕೊಂಡಿದ್ದರೆ, ಪ್ಯಾನ್-ಇಂಡಿಯಾ ಸ್ಟಾರ್ 'ರಾಕಿಂಗ್ ಸ್ಟಾರ್' ಯಶ್ ಅವರು ಬಲಶಾಲಿ ರಾವಣನ ಪಾತ್ರದಲ್ಲಿ ನಟಿಸುವುದರ ಜೊತೆಗೆ 'ಮಾನ್ಸ÷್ಟರ್ ಮೈಂಡ್ ಕ್ರಿಯೇಷನ್ಸ್' ಮೂಲಕ ಚಿತ್ರದ ಸಹ-ನಿರ್ಮಾಪಕರೂ ಆಗಿದ್ದಾರೆ. ಸೀತಾ ಮಾತೆಯಾಗಿ ಸಾಯಿ ಪಲ್ಲವಿ, ಲಕ್ಷ÷್ಮಣನಾಗಿ ರವಿ ದುಬೆ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ದೂರದರ್ಶನ ರಾಮಾಯಣ ಖ್ಯಾತಿಯ ಅರುಣ್ ಗೋವಿಲ್ ರಾಜ ದಶರಥನಾಗಿ, ಖ್ಯಾತ ನಟಿ ಶೋಭನಾ ಕೈಕೇಸಿಯಾಗಿ, ಅಜಿಂಕ್ಯ ದೇವ್ ಋಷಿ ವಿಶ್ವಾಮಿತ್ರನಾಗಿ, ಕುನಾಲ್ ಕಪೂರ್ ಇಂದ್ರ ದೇವನಾಗಿ ಮತ್ತು ರಾಕುಲ್ ಪ್ರೀತ್ ಸಿಂಗ್ ಶೂರ್ಪನಖಿಯಾಗಿದ್ದಾರೆ. ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ಬರಹಗಾರ ಶ್ರೀಧರ್ ರಾಘವನ್ ಚಿತ್ರಕಥೆ ಬರೆದಿದ್ದಾರೆ. ವಿಶೇಷವೆಂದರೆ, ಪೂರ್ವ ಮತ್ತು ಪಶ್ಚಿಮದ ಅತಿದೊಡ್ಡ ಕೊಲ್ಯಾಬರೇಷನ್ ಎಂಬಂತೆ, ಆಸ್ಕರ್ ಪ್ರಶಸ್ತಿ ವಿಜೇತ ದಿಗ್ಗಜರಾದ ಎ.ಆರ್. ರೆಹಮಾನ್ ಮತ್ತು ಹಾಲಿವುಡ್ ಖ್ಯಾತಿಯ ಹ್ಯಾನ್ಸ್ ಜಿಮ್ಮರ್ ಒಟ್ಟಾಗಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು