LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

RPF ಕಾರ್ಯಾಚರಣೆ: ಮನೆಬಿಟ್ಟು ಬಂದ 253 ಮಕ್ಕಳ ರಕ್ಷಣೆ!

ಬೆಂಗಳೂರು: 2024 ರಲ್ಲಿ ರೈಲ್ವೆ ರಕ್ಷಣಾ ಪಡೆಯ ಮಕ್ಕಳ ಕಳ್ಳಸಾಗಣೆ ವಿರೋಧಿ ಘಟಕದಿಂದ 49 ಬಾಲಕಿಯರು ಸೇರಿದಂತೆ ಒಟ್ಟು 253 ಮಕ್ಕಳನ್ನು ಸಂಭಾವ್ಯ ಶೋಷಣೆಯಿಂದ ರಕ್ಷಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವ ದುರ್ಬಲ ಮಕ್ಕಳ ಸುರಕ್ಷತೆ ಖಾತ್ರಿ ನಿಟ್ಟಿನಲ್ಲಿ ಈ ವಿಶೇಷ ಪಡೆ, 'ನನ್ಹೆ ಫರಿಷ್ಟೆಯನ್ನು ('Nanhe Farishteh) ಮೇ 2018 ರಲ್ಲಿ ಭಾರತೀಯ ರೈಲ್ವೆಯಾದ್ಯಂತ ಸ್ಥಾಪಿಸಲಾಯಿತು. ಕಳೆದ ವರ್ಷಕ್ಕೆ ಹೋಲಿಸಿದರೆ ಡಿಸೆಂಬರ್‌ ನಲ್ಲಿ ಈ ಸಂಖ್ಯೆ ಹೆಚ್ಚಾಗಿದೆ. 2023ರ ಜನವರಿಯಿಂದ ಡಿಸೆಂಬರ್‌ವರೆಗೆ 50 ಬಾಲಕಿಯರು ಸೇರಿದಂತೆ ಒಟ್ಟು 237 ಮಕ್ಕಳನ್ನು ರಕ್ಷಿಸಲಾಗಿತ್ತು.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಬೆಂಗಳೂರು ಹೆಚ್ಚುವರಿ ವಿಭಾಗೀಯ ರೈಲ್ವೆ ಮ್ಯಾನೇಜರ್, ಪರೀಕ್ಷಿತ್ ಮೋಹನ್‌ಪುರಿಯಾ, ಈ 253 ಮಕ್ಕಳನ್ನು ಸಂಭಾವ್ಯ ಶೋಷಣೆಯಿಂದ ರಕ್ಷಿಸಲಾಗಿದೆ. ಈ ಮಕ್ಕಳ ಪೈಕಿ ಬಹುಪಾಲು ಮಕ್ಕಳನ್ನು ಬಾಲಕಾರ್ಮಿಕತೆ, ವೇಶ್ಯಾವಾಟಿಕೆ ಮತ್ತಿತರ ಹೀನ ಕೆಲಸಗಳಲ್ಲಿ ಬಳಸಿಕೊಳ್ಳಲಾಗುತ್ತದೆ. ಕೆಲ ಮಕ್ಕಳು ಪೋಷಕರೊಂದಿಗ ಸಣ್ಣ ಜಗಳ ಅಥವಾ ಪರೀಕ್ಷೆಗಳಲ್ಲಿ ಕಳಪೆ ಸಾಧನೆ ನಂತರ ಮನೆ ಬಿಟ್ಟು ಬರುತ್ತಿದ್ದಾರೆ ಎಂದು ಮತ್ತೋರ್ವ ಅಧಿಕಾರಿ ತಿಳಿಸಿದರು.

RPF ಹಿರಿಯ ವಿಭಾಗೀಯ ಭದ್ರತಾ ಕಮಿಷನರ್ ಶ್ರೇಯನ್ಸ್ ಚಿಂಚವಾಡೆ ಮಾತನಾಡಿ, “ರೈಲ್ವೆ ರಕ್ಷಣಾ ಪಡೆ, ಸರ್ಕಾರಿ ರೈಲ್ವೆ ಪೊಲೀಸರು ಬಚಾಪನ್ ಬಚಾವೋ ಆಂದೋಲನದೊಂದಿಗೆ ಮಕ್ಕಳ ಸುರಕ್ಷಿತ ಸಂಚಾರಕ್ಕಾಗಿ ರೈಲುಗಳು ಮತ್ತು ನಿಲ್ದಾಣದಲ್ಲಿ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ತೊಂದರೆಯಲ್ಲಿರುವ ಯಾವುದೇ ಮಕ್ಕಳಿಗೆ ತಿಳಿಸಲು ರೈಲ್ವೆ ಸಹಾಯವಾಣಿ 139 ಲಭ್ಯವಿದೆ ಎಂದು ತಿಳಿಸಿದರು.

ರಕ್ಷಣಾ ಕ್ರಮಗಳ ಬಗ್ಗೆ ವಿವರಿಸಿದ ಮೋಹನ್ ಪುರಿಯಾ, ರಕ್ಷಿಸಿದ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಮತ್ತು ಎನ್ ಜಿಒಗಳಿಗೆ ಹಸ್ತಾಂತರಿಸಲಾಗುತ್ತದೆ. ನಂತರ ಮಕ್ಕಳ ಕಲ್ಯಾಣ ಸಮಿತಿಗೆ ಕಳುಹಿಸಲಾಗುತ್ತದೆ. ಈ ಸಮಿತಿಗಳು ಸಮಾಲೋಚನೆ ನಡೆಸಿದ ಬಳಿಕ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು