LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸಾಮ್ರಾಟ್ ಮಾಂಧಾತ 50

ಹೇಮಂತ್ ಪ್ರೊಡಕ್ಷನ್ಸ್ ಅಡಿ ಹೇಮಂತ್ ಕುಮಾರ್ ಅವರ ನಿರ್ದೇಶನದ, ಪೌರಾಣಿಕ ಕಥಾಹಂದರ ಒಳಗೊಂಡ "ಸಾಮ್ರಾಟ್ ಮಂಧಾತ" ಚಿತ್ರವೀಗ 50 ದಿನಗಳ ಪ್ರದರ್ಶನ ಕಂಡಿದೆ. ಬೆಂಗಳೂರು ಯಶವಂತಪುರದ ಉಲ್ಲಾಸ್ ಚಿತ್ರಮಂದಿರಲ್ಲಿ ಯಶಸ್ವಿಯಾಗಿ 50 ದಿನಗಳ ಪ್ರದರ್ಶನ ಪೂರೈಸಿದೆ.
ಸಾಮ್ರಾಟ್ ಮಾಂಧಾತ ಚಿತ್ರದ ಸುವರ್ಣ ಸಂಭ್ರಮಾಚರಣೆಯನ್ನು ಉಲ್ಲಾಸ್ ಚಿತ್ರಮಂದಿರದ ವೇದಿಕೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ನಿರ್ದೇಶಕ ಚಿಕ್ಕಣ್ಣ, ಉಲ್ಲಾಸ್ ಚಿತ್ತಮಂದಿರದ ಮಾಲೀಕರಾದ ವಸಂತ್ ಕುಮಾರ್ ಹಾಗೂ ಮನಿಷ್ ಜೊತೆಗೆ ಸಾಮ್ರಾಟ್ ಮಾಂಧಾತ ಚಿತ್ರದ ನಿರ್ದೇಶಕ, ನಿರ್ಮಾಪಕರು ಹಾಗೂ ಕಲಾವಿದರುಗಳು. ಉಪಸ್ಥಿತರಿದ್ದರು.ನಿರ್ದೇಶಕ ಹಾಗೂ ನಿರ್ಮಾಪಕ ಹೇಮಂತ್ ಕುಮಾರ್ ಮಾತನಾಡುತ್ತ ಬಿಡುಗಡೆಯಾದ ದಿನದಿಂದಲೂ ನಮ್ಮ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದ್ದು, ಇದೀಗ 50 ದಿನಗಳನ್ನು ಮುಗಿಸಿದೆ. ಇಲ್ಲೀವರೆಗೆ ಯಾವುದೇ ಷೋ ಸಹ ಬ್ರೇಕಪ್ ಆಗದೆ ನಮ್ಮ ಚಿತ್ರ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ ಎಂದು ವಿವರಿಸಿದರು.

ವಿತರಕ ರಾಧಾಕೃಷ್ಣ, ಮಾತನಾಡಿ ಒಂದೊಳ್ಳೇ ಸಿನಿಮಾನ ಇನ್ನೂ ಹೆಚ್ಚು ಜನರಿಗೆ ತಲುಪಿಸಲು ಮಾಧ್ಯಮದವರ ಸಹಕಾರವೂ ಬೇಕು ಎಂದು ಹೇಳಿದರು.
ನಿರ್ಮಾಪಕರಲ್ಲೊಬ್ಬರಾದ ನಂಜುಂಡಪ್ಪ ಮಾತನಾಡಿ ಜನ ಫ್ಯಾಮಿಲಿ ಜೊತೆಗೆ ಬಂದು ಸಿನಿಮಾ ನೋಡ್ತಿದಾರೆ ಎಂದು ಹೇಳಿದರು. ಶನೀಶ್ವರ ಸ್ವಾಮಿ ಪಾತ್ರ ಮಾಡಿರುವ ಸುಂದರಬಾಬು ಮಾತನಾಡಿ ಕಲಿಯ ಶಾಪವಿಮೋಚನೆ ಹೇಗಾಗುತ್ತದೆ ಎಂಬ ವಿಷಯ ಇಟ್ಟುಕೊಂಡು ಮಾಡಿದ ಚಿತ್ರವಿದು ಎಂದರು.

ಚಿತ್ರದಲ್ಲಿ ಮಾಂಧಾತನಾಗಿ ರಂಗಭೂಮಿ ಕಲಾವಿದ ಬಸವರಾಜು, ಬಿಂದುಮತಿಯಾಗಿ ಭಾರತಿ, ನಾರದನಾಗಿರುವ ನಂಜುಂಡಪ್ಪ, ಶೌಭರಿ ಮಹರ್ಷಿಯಾಗಿ ನರಸಿಂಹಮೂರ್ತಿ, ಯವನಾಶ್ವನಾಗಿರುವ ಮಂಜುನಾಥ ಕಾಣಿಸಿಕೊಂಡಿದ್ದಾರೆ. ಸಾಮ್ರಾಟ ಮಾಂಧಾತ ಚಿತ್ರಕ್ಕೆ ಆರ್.ವೀರೇಂದ್ರಕುಮಾರ್ ಸಂಭಾಷಣೆ ಸಾಹಿತ್ಯ ರಚಿಸಿದ್ದಾರೆ. ಶಿವರಾಮ್ ಅವರ ಸಂಕಲನವಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು