LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Feature Article

ಸರ್ವಾಭೀಷ್ಟಫಲಪ್ರದಂ ಪುರಂದರ ಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಂ

ಮನ್ಮನೋಭೀಷ್ಟವರದಂ ಸರ್ವಾಭೀಷ್ಟಫಲಪ್ರದಂ
ಪುರಂದರಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಂ
ವಿಷ್ಣು ದೇವರೇ ಬಡ ಬ್ರಾಹ್ಮಣನ ವೇಷದಲ್ಲಿ ಒಮ್ಮೆ ಶ್ರೀನಿವಾಸನ ಅಂಗಡಿಗೆ ಬಂದು ಮಗನ ಉಪನಯನಕ್ಕೆ ಹಣ ಬೇಡಿದನಂತೆ. ಜಿಪುಣ ಶ್ರೀನಿವಾಸ ಪ್ರತಿ ದಿನವೂ ಮಾರನೆಯ ದಿನ ಬರಹೇಳುತ್ತ, ಆರು ತಿಂಗಳುಗಳ ಕಾಲ ಮುಂದೆ ಹಾಕಿದನಂತೆ. ಕೊನೆಗೆ ಬ್ರಾಹ್ಮಣನ ಕಾಟ ತಡೆಯಲಾರದೆ ಒಂದು ಸವಕಲು ನಾಣ್ಯವನ್ನು ಕೊಟ್ಟನಂತೆ. ವಿಠ್ಠಲ ಈಗ ಶ್ರೀನಿವಾಸನ ಮನೆಗೆ ತೆರಳಿ ಆರು ತಿಂಗಳುಗಳ ಕಾಲ ಒಬ್ಬ ವರ್ತಕ ತನ್ನನ್ನು ಸತಾಯಿಸಿ ಕೊನೆಗೆ ಸವಕಲು ನಾಣ್ಯ ಕೊಟ್ಟ ಕಥೆ ಹೇಳಿದನಂತೆ.
ಮಾರನೇ ದಿನ ಅದೇ ಬ್ರಾಹ್ಮಣ ಮನೆಗೆ ಬಂದು ಸರಸ್ವತಿಯ ಬಳಿ ತನ್ನ ಮಗನ ಉಪನಯನದ ಬಗ್ಗೆ ಹೇಳಿ ಅವಳಿಂದ ಸಹಾಯ ಯಾಚಿಸುತ್ತಾನೆ. ಸರಸ್ವತಿ ಮರುಕದಿಂದ ತನ್ನ ಬಳಿ ಯವುದೇ ಧನ ಆಭರಣಗಳಿಲ್ಲ ಎಲ್ಲವೂ ತನ್ನ ಗಂಡನ ಬಳಿ ಇದೆ. ಅವರ ಅನುಮತಿ ಇಲ್ಲದೇ ಏನನ್ನೂ ಕೊಡುವ ಪರಿಸ್ಥಿತಿಯಲ್ಲಿಲ್ಲ ಎಂದು ಬೇಸರ ಪಡುತ್ತಾಳೆ. ಆಗ ಆ ಬ್ರಾಹ್ಮಣ ನಿನ್ನ ತವರಿನಲ್ಲಿ ನಿನಗೆ ಕೊಟ್ಟ ಮೂಗುತಿಯ ಮೇಲೆ ನಿನ್ನ ಅಧಿಕಾರವಿದೆ. ಅದನ್ನೇ ಕೊಡು ಎಂದಾಗ, ಅವನಿಗೆ ತನ್ನ ಮೂಗುತಿಯನ್ನು ತೆಗೆದು ಕೊಟ್ಟಳಂತೆ. ಬ್ರಾಹ್ಮಣ ತಕ್ಷಣ ಮೂಗುತಿಯನ್ನು ಶ್ರೀನಿವಾಸನ ಅಂಗಡಿಗೆ ಒಯ್ದು ಅದನ್ನು ಅಡವಿಡಲು ಪ್ರಯತ್ನಿಸಿದನಂತೆ.
ಶ್ರೀನಿವಾಸ ಆ ಮೂಗುತಿಯನ್ನು ಗುರುತಿಸಿ, ಹಣಕ್ಕೆ ನಾಳೆ ಬರುವಂತೆ ಬ್ರಾಹ್ಮಣನಿಗೆ ಹೇಳಿ, ಅದನ್ನು ಡಬ್ಬಿಯಲ್ಲಿಟ್ಟು ತಕ್ಷಣ ಮನೆಗೆ ಬಂದು ಪತ್ನಿಯ ಬಳಿ ಮೂಗುತಿಯನ್ನು ತೋರಿಸಲು ಹೇಳಿದನಂತೆ. ಹೆದರಿದ ಹೆಂಡತಿ ಸ್ನಾನ ಮಾಡುವಾಗ ತೆಗೆದಿಟ್ಟಿದ್ದೆ, ತರುತ್ತೇನೆಂದು ಒಳಗೆ ಹೋಗಿ, ಸ್ನಾನ ಕೊಠಡಿಯಲ್ಲಿ ವಿಷ ಕುಡಿಯುವ ಪ್ರಯತ್ನ ನಡೆಸಿದಾಗ ಅವಳ ವಿಷದ ಬಟ್ಟಲಿನೊಳಕ್ಕೆ ಮೇಲಿನಿಂದ ಮೂಗುತಿ ಬಿದ್ದಿತಂತೆ. ಅದನ್ನು ತಂದು ಶ್ರೀನಿವಾಸನಿಗೆ ಕೊಡುತ್ತಾಳೆ. ಅಂಗಡಿಗೆ ಹಿಂದಿರುಗಿ ಬಂದ ಶ್ರೀನಿವಾಸ ಡಬ್ಬಿಯನ್ನು ತೆಗೆದು ನೋಡಿದರೆ ಅಲ್ಲಿ ಇಟ್ಟಿದ್ದ ಮೂಗುತಿ ಮಾಯವಾಗಿತ್ತಂತೆ. ಆಗ ಅವನಿಗೆ ಬಂದ ಬ್ರಾಹ್ಮಣ ಬೇರೆ ಯಾರೂ ಅಲ್ಲ, ತನ್ನನ್ನು ಪರೀಕ್ಷಿಸಲು ಸ್ವತಃ ನಾರಾಯಣನೇ ಬ್ರಾಹ್ಮಣ ವೇಷದಲ್ಲಿ ಬಂದಿದ್ದನೆAದು ಅರಿತು, ತನ್ನ ಬಗ್ಗೆ ತಾನೇ ನಾಚಿಕೆ ಪಟ್ಟುಕೊಂಡ ಶ್ರೀನಿವಾಸ, ತನ್ನ ಶ್ರೀಮಂತಿಕೆಯನ್ನು ತೊರೆದು ಹರಿದಾಸನಾಗುವ ನಿರ್ಧಾರ ತೆಗೆದುಕೊಂಡನAತೆ. ದೇವರು ದಾರಿ ತೋರಿಸಿದ್ದರ ಬಗ್ಗೆ ಕೃತಜ್ಞತೆಗಾಗಿ ತಮ್ಮ ಹೆಂಡತಿಯ ಜ್ಞಾಪಕಾರ್ಥ ಒಂದು ಕೀರ್ತನೆಯನ್ನೂ ಪುರಂದರದಾಸರು ರಚಿಸಿದ್ದಾರೆ. ನಂತರ ಶ್ರೀನಿವಾಸ ನಾಯಕ “ಪುರಂದರದಾಸ” ಎಂಬ ಹೆಸರನ್ನು ಪಡೆದರು.
ಪುರಂದರ ದಾಸರು ಕರ್ನಾಟಕ ಶಾಸ್ತಿçÃಯ ಸಂಗೀತ ಮುಖ್ಯ ಸ್ಥಾಪಕ-ಪ್ರತಿಪಾದಕರಲ್ಲಿ ಒಬ್ಬರು & ಕರ್ನಾಟಕ ಸಂಗೀತದ ಪಿತಾಮಹ. ಅವರು ಸ್ವರಾವಳಿಗಳು ಮತ್ತು ಅಲಂಕಾರಗಳು ಎಂದು ಕರೆಯಲ್ಪಡುವ ಶ್ರೇಣೀಕೃತ ವ್ಯಾಯಾಮಗಳನ್ನು ರಚಿಸುವ ಮೂಲಕ ಕರ್ನಾಟಕ ಸಂಗೀತವನ್ನು ಕಲಿಸುವ ಮೂಲಭೂತ ಪಾಠಗಳನ್ನು ರೂಪಿಸಿದರು ಮತ್ತು ಅದೇ ಸಮಯದಲ್ಲಿ ಅವರು “ಮಾಯಾಮಾಳವಗೌಳ “ಎಂಬ ರಾಗವನ್ನು ಪರಿಚಯಿಸಿದರು.
ಪುರಂದರದಾಸರ ಪದಗಳು ಮುಂದೆ ಕರ್ನಾಟಕ ಸಂಗೀತ ಪದ್ಧತಿಯ ಬುನಾದಿಯಾದವು. ಶಾಸ್ತಿçÃಯ ಸಂಗೀತವನ್ನು ಶ್ರೀ ಸಾಮಾನ್ಯನಿಗೆ ಪರಿಚಯ ಮಾಡಿಕೊಡಲು ಯತ್ನಿಸಿದ ಪುರಂದರದಾಸರು ಮಾಯಾಮಾಳವಗೌಳ ರಾಗದಿಂದ ಹಿಡಿದು ಹೊಸಬರಿಗೆ ಶಾಸ್ತಿçÃಯ ಸಂಗೀತವನ್ನು ಕಲಿಸಿಕೊಡುವ ದಾರಿಯ ಬಗೆಗೆ ಯೋಚಿಸಿದರು. ಈಗಲೂ ದಕ್ಷಿಣಭಾರತದ ಶಾಸ್ತಿçÃಯ ಸಂಗೀತದ ಪಾಠಗಳು ಪುರಂದರದಾಸರ ಸರಳೆ, ಜಂಟಿ ವರಸೆಗಳೊಂದಿಗೇ ಆರಂಭಿಸಲ್ಪಡುತ್ತವೆ.
ಪುರಂದರದಾಸರ `ಪಿಳ್ಳಾರಿ ಗೀತೆಗಳು’ (ಉದಾ: ಲಂಬೋದರ ಲಕುಮಿಕರ’., ಕೆರೆಯ ನೀರನು ಕೆರೆಗೆ ಚೆಲ್ಲಿ’.. ಇತ್ಯಾದಿ) ಸಂಗೀತದ ಸ್ವರ-ಸಾಹಿತ್ಯ-ತಾಳಗಳ ಸಂಯೋಜನೆಯನ್ನು ಅಭ್ಯಸಿಸಲು ಮೊದಲ ಮೆಟ್ಟಿಲು. ಕರ್ನಾಟಕ ಶಾಸ್ತಿçÃಯ ಸಂಗೀತದ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ತ್ಯಾಗರಾಜರು ತಮ್ಮ `ಪ್ರಹ್ಲಾದ ಭಕ್ತಿ ವಿಜಯಮ್’ ಎಂಬ ಲೇಖನದಲ್ಲಿ ಶ್ರೀ ಪುರಂದರದಾಸರನ್ನು ತಮ್ಮ ಸಂಗೀತ ಗುರುಗಳೆಂದು ಹೇಳಿಕೊಂಡಿದ್ದಾರೆ. ಹರಿನಾಮಸ್ಮರಣೆಯ ರೂಪದಲ್ಲಿ ರಚಿಸಿದ ಅವರ ಕೃತಿಗಳು ದೇವರನಾಮಗಳಾಗಿ ಪ್ರಸಿದ್ಧವಾಗಿವೆ. ಅವರ ಹರಿಭಕ್ತಿ ಹಾಗೂ ಸಂಗೀತದಲ್ಲಿನ ಪಾಂಡಿತ್ಯ ಕನ್ನಡ ಸಾಹಿತ್ಯದಲ್ಲೇ ವಿಶಿಷ್ಟವಾದ ಸ್ಥಾನವನ್ನು ಪಡೆದ ದಾಸ ಸಾಹಿತ್ಯವನ್ನು ಶ್ರೀಮಂತವಾಗಿಸಿವೆ. ಕರ್ನಾಟಕ ಶಾಸ್ತಿçÃಯ ಸಂಗೀತದ ಪಿತಾಮಹರಾದ ಪುರಂದರದಾಸರ ಸಾಧನೆಯನ್ನು ಕಂಡ ಸರ್ವರೂ `ದಾಸರೆಂದರೆ ಪುರಂದರದಾಸರಯ್ಯಾ..!’ ಎಂದು ಕೊಂಡಾಡಿದ್ದಾರೆ.
ಪುರAದರ ದಾಸರ ರಚನೆಗಳು: ದಂತಕಥೆಯ ಪ್ರಕಾರ, ಪುರಂದರ ದಾಸರು ಸುಮಾರು ೪೭೫,೦೦೦ ಕನ್ನಡ ಮತ್ತು ಸಂಸ್ಕöÈತ ಹಾಡುಗಳನ್ನು ಬರೆದಿದ್ದಾರೆ. ಪ್ರಸ್ತುತ ೧೦೦೦ ಮಾತ್ರ ಲಭ್ಯವಿದೆ. ಪುರಂದರ ದಾಸರ ಹಾಡುಗಳು ಭಗವಾನ್ ನಾರಾಯಣ, ವಿಶೇಷವಾಗಿ ಶ್ರೀಕೃಷ್ಣನಲ್ಲಿ ಅವರ ಭಕ್ತಿಯನ್ನು ಬಹಿರಂಗಪಡಿಸುತ್ತವೆ. ಅವರು ಶ್ರೀಕೃಷ್ಣನ ಜೀವನದಲ್ಲಿ ಹಲವಾರು ಅನುಭವಗಳನ್ನು ಹಾಡುತ್ತಾರೆ. ಈ ಹಲವಾರು ಹಾಡುಗಳಲ್ಲಿ ಸಮಾಜದಲ್ಲಿ ಪ್ರಚಲಿತದಲ್ಲಿರುವ ಎಲ್ಲಾ ಹಲವಾರು ಆಡಂಬರಗಳು ಮತ್ತು ದುರ್ಗುಣಗಳನ್ನು ಅವರು ವಿಡಂಬಿಸಿದ್ದಾರೆ. ಭಕ್ತಿಯ ಎಲ್ಲಾ ಬಾಹ್ಯ ಗುಣಲಕ್ಷಣಗಳನ್ನು ಪ್ರದರ್ಶಿಸುವ ಆದರೆ ನಿಜವಾದ ದಯೆ ಅಥವಾ ಸಮರ್ಪಣೆಯ ಕೊರತೆಯಿರುವ ನಕಲಿ ಭಕ್ತರನ್ನು ಅವರು ಅಪಹಾಸ್ಯ ಮಾಡುತ್ತಾರೆ. ಕರ್ನಾಟಕದ ಅನೇಕ ಸಂಗೀತಗಾರರು ಮತ್ತು ಕವಿಗಳು ಅವರ ಮನಮೋಹಕವಾದ ಬಹುಕಾಂತೀಯ ರಾಗಗಳಿಂದ ಸ್ಫೂರ್ತಿ ಪಡೆದಿದ್ದಾರೆ.
ಪುರಾಣದ ಪ್ರಕಾರ ಪುರಂದರ ದಾಸರು ೮೦ ವರ್ಷ ಬದುಕಿದ ದಾಸರು ಸಂಗೀತದ ಸರ್ವವ್ಯಾಪಿ ಮಾಂತ್ರಿಕತೆ ಮತ್ತು ಆಡುಮಾತಿನ ಮಾಧ್ಯಮವನ್ನು ಬಳಸಿಕೊಂಡು ಭಕ್ತಿಯಿಂದ ಜನರ ಹೃದಯದಲ್ಲಿ ಅಚಲರಾಗಿ ಆರಾಧನೆಗೊಳ್ಳುತ್ತಿದ್ದಾರೆ.
ಪುರಂದರ ದಾಸರ ಆರಾಧನೆ
ಇಂದು ಪುಷ್ಯ ಬಹುಳ ಅಮಾವಾಸ್ಯೆಯ ದಿನ, ಸರ್ವೋತ್ತಮದಾಸ ಶ್ರೀಪುರಂದರರು ದಾಸನಾಗಿ ವಿಶೇಷನಾಗಿ ಹರಿದಾಸನಾಗಿ ವಿಠ್ಠಲನ ಹೃದಯಾಸನದಲ್ಲಿ ಐಕ್ಯವಾದ ಪರಮ ಪವಿತ್ರದಿನ.
ಪ್ರತಿ ವರ್ಷ, ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ, ಪುರಂದರ ದಾಸರ ಆರಾಧನಾ (ಸ್ಮರಣಾರ್ಥ) ಆಚರಣೆಗಳನ್ನು ಭಾರತೀಯ ಚಂದ್ರಮಾನ ಕ್ಯಾಲೆಂಡರ್‌ನ (ಚಂದ್ರನ ಕ್ಯಾಲೆಂಡರ್) ಪುಷ್ಯ ಬಹುಳ ಅಮವಾಸ್ಯೆಯಂದು ನಡೆಸಲಾಗುತ್ತದೆ. ಆಳವಾದ ಧಾರ್ಮಿಕ ಮತ್ತು ಸಂಗೀತದ ಉತ್ಸಾಹದಿಂದ ಆಚರಿಸಲಾಗುವ ಈ ಆಚರಣೆಗಳು ಕರ್ನಾಟಕ, ದಕ್ಷಿಣ ಭಾರತ ಮತ್ತು ಪ್ರಪಂಚದಾದ್ಯಂತದ ವಿವಿಧ ಕೇಂದ್ರಗಳಿಂದ ಸಂಗೀತಗಾರರು, ಕಲಾ ಅಭಿಮಾನಿಗಳು ಮತ್ತು ಭಕ್ತರನ್ನು ಒಟ್ಟುಗೂಡಿಸುತ್ತದೆ.
- ಸೌಮ್ಯ ಸನತ್

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು