LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಮಾಗಡಿಗೆ ಹೇಮೆ ಹರಿಯುವುದು ಸೂರ್ಯ ಚಂದ್ರರಷ್ಟೇ ಸತ್ಯ: ರೇವಣ್ಣ

ಮಾಗಡಿ: ಶ್ರೀ ರಂಗ ಏತ ನೀರಾವರಿ ಯೋಜನೆಯ ಮೂಲಕ ಮಾಗಡಿಗೆ ಹೇಮಾವತಿ ನೀರು ಹರಿಯುವುದು ಸೂರ್ಯ ಚಂದ್ರರಷ್ಟೇ ಸತ್ಯ ಎಂದು ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ ಹೇಳಿದರು.

ತಮ್ಮ 74 ನೇ ಜನುಮದಿನದ ನಿಮಿತ್ತವಾಗಿ ಇತಿಹಾಸ ಪ್ರಸಿದ್ದ ತಿರುಮಲೆ ಶ್ರೀ ರಂಗನಾಥಸ್ವಾಮಿಗೆ ಕುಟುಂಬ ಸಮೇತರಾಗಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು ಹೇಮಾವತಿ ಯೋಜನೆಯ ಕಾಮಗಾರಿಯು ಕೆಲವು ರೈತರ ಅಸಹಕಾರದಿಂದ ಕುಂಠಿತವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಧಾನ ನೀಡಿದ್ದು ಸಂಸದ ಡಿ.ಕೆ.ಸುರೇಶ್ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರು ಸಂಪೂರ್ಣ ಸಹಕಾರ ನೀಡುತ್ತಿದ್ದು ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರಕಾರವಿದ್ದು ಹೇಮಾವತಿ ನದಿ ನೀರನ್ನು ತಾಲ್ಲೂಕಿನ 84 ಕೆರೆಗಳಿಗೆ ಹರಿಸಲಾಗುವುದು ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 162 ಕೋಟಿ ರೂಪಾಯಿ ಖರ್ಚು ಮಾಡಿ 55 ಪ್ರಶ್ನೆಗಳನ್ನು ರಚಿಸಿಕೊಂಡು ಸಾವಿರಾರು ಜನ ಸ್ವಯಂ ಸೇವಕರು ರಾಜ್ಯದಲ್ಲಿ ಮನೆಮನೆಗೆ ತೆರಳಿ ಕ್ರೋಢೀಕರಿಸಿ ಜಾತಿಗಣತಿ ವರಧಿ ಮಾಹಿತಿಯನ್ನು ಮನೆಯಲ್ಲಿ ಕುಳಿತು ಬರೆದಿದ್ದಾರೆ ಎನ್ನುವುದು ಸಮಂಜಸವಲ್ಲ.

ತುಳಿತಕ್ಕೆ ಒಳಗಾದವರನ್ನು ಮೀಸಲಾತಿಯೇ ಅಳತೆಗೋಲು ಸಮಸಮಾಜ ನಿರ್ಮಾಣವಾಗುವವರೆಗೂ ಮೀಸಲಾತಿ ಅನಿವಾರ್ಯ.ಸರ್ವರಿಗೂ ಸಮಪಾಲು ಸಮಬಾಳು ಒದಗಿಸುವುದು ಸಂವಿಧಾನದ ಆಶಯವಾಗಿದೆ. ಸರಕಾರದ ಸವಲತ್ತಿನ ಸಿಂಹಪಾಲು ಬಳಸಿಕೊಂಡು ಮುಂದುವರೆದಿರುವ ಸಮುದಾಯಗಳು ವಿನಾಕಾರಣ ಜಾತಿಗಣತಿ ಬಗ್ಗೆ ಅಪಸ್ವರ ಎತ್ತುವುದು ಸರಿಯಲ್ಲ.ಜಾತಿಗಣತಿ ವರದಿ ಸರಕಾರದ ಕೈ ಸೇರಿದ ಮೇಲೆ ಅಧ್ಯಯನ ಮಾಡಿ ಸಮಸ್ಯೆಗಳೇನಾದರು ಇದ್ದರೆ ಸರಿಪಡಿಸಲಿ ಎಂದು ರೇವಣ್ಣ ತಿಳಿಸಿದರು.

ಶ್ರೀಮತಿ ವತ್ಸಲಾರೇವಣ್ಣ, ಚಲನಚಿತ್ರ ನಾಯಕನಟ ಅನೂಪ್ ರೇವಣ್ಣ, ಬೆಳಗುಂಬ ಗ್ರಾಪಂ ಮಾಜಿ ಅದ್ಯಕ್ಷರಾದ ಲತಾ ಜಯರಾಂ,ಕೈ ಮುಖಂಡರಾದ ನಾಗರಾಜು(ಮೊಗಣ್ಣ)ಎಲ್.ಐ.ಸಿ.ಶಿವಕುಮಾರ್, ಹೊಸಪೇಟೆ ಚಂದ್ರಯ್ಯ(ಕಿಟ್ಟಿ) ತೋಟದಮನೆ ಕೃಷ್ಣಪ್ಪ, ಕಲ್ಯಾಗೇಟ್ ಬಸವರಾಜು, ಬೋಡುರಂಗನಾಥ್, ಡ್ರೈವರ್ ನಾರಾಯಣಪ್ಪ, ಬಂಕ್ ರಾಜಣ್ಣ, ಹೊಸಪೇಟೆ ಭರತ್, ಕುಂಬಳಕಾಯಿ ಗಂಗಣ್ಣ ಸೇರಿದಂತೆ ಮತ್ತಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು