LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

`ಸಮಾಜದ ಶ್ರೇಷ್ಟತೆಗೆ ಶ್ರಮಿಸಿದ ಸವಿತಾ ಮಹರ್ಷಿ’

ದೇವನಹಳ್ಳಿ: ಸವಿತಾ ಮಹರ್ಷಿ ಸಮಾಜದ ಶ್ರೇಷ್ಟತೆಗೆ ಶ್ರಮಿಸಿದ ಮಹಾನ್ ಪುರುಷ. ಪ್ರತಿ ರಥಸಪ್ತಮಿ ದಿನದಂದು ಶಿವನ ಬಲಗಣ್ಣಿನಿಂದ ಜನ್ಮ ತಾಳಿದ್ದರಿಂದ ಪ್ರತಿ ವರ್ಷ ಅದೇ ದಿನದಲ್ಲಿ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ಸವಿತ ಸಮಾಜದ ರಾಜ್ಯ ಕಾರ್ಯಧ್ಯಕ್ಷ ಎಸ್.ಕಿರಣ್ಕುಮಾರ್ ತಿಳಿಸಿದರು.

ದೇವನಹಳ್ಳಿ ಪಟ್ಟಣದ ತಾಲೂಕು ಆಡಳಿತ ಸೌಧದ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿ ಕೊಂಡಿದ್ದ ಸವಿತಾ ಮಹರ್ಷಿ ಹಾಗೂ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಇಬ್ಬರು ಮಹಾನ್ ವ್ಯಕ್ತಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು
ಮಾತನಾಡಿದರು.

ಸವಿತಾ ಸಮಾಜದ ಮೂಲ ಪುರಷ ಮಹರ್ಷಿಯವರಾಗಿದ್ದಾರೆ. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದವರ ಉದ್ದಾರ
ಕ್ಕಾಗಿ ಶ್ರಮಿಸಿದ್ದಾರೆ. ಇವರು ಕ್ಷತ್ರಿಯ, ವೈದ್ಯ, ಕ್ಷೌರಿಕ,ಸಂಗೀತ ವಾದ್ಯ ನುಡಿಸುವವರು ಹಾಗೂ ಆಯುಷ್ಕರ್ಮ ಮಾಡುವ ಕಾಯಕ ಶೂರರಾಗಿದ್ದರು. 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣ ಅವರಿಗೆಆಶ್ರಯ ನೀಡಿದ ಸವಿತಾ ಸಮಾಜದ ದೊರೆ ಬಿಜ್ಜಳ ಎಂಬುವುದು ಹೆಮ್ಮೆಯ ಸಂಗತಿ ಎಂದರು.

ಸವಿತಾ ಸಮಾಜದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಮೂರ್ತಿ ಮಾತನಾಡಿ, ಸವಿತಾ ಮಹರ್ಷಿ ಸಮಾಜ ಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಾಹತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ನಮಗೆ ಬೆಳಕು ತೋರಿಸಿದೆ. ಜನಸಾಮಾನ್ಯರು ಸವಿತಾ ಮಹರ್ಷಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಮಾಜಿ ಜಿಲ್ಲಾಧ್ಯಕ್ಷ ಕೋರಮಂಗಲ ವೆಂಕಟೇಶಪ್ಪ, ಸವಿತ ಸಮಾಜದ ದೇವರಾಜ್, ಲೋಕೇಶ್, ರಾಘವೇಂದ್ರ, ಚಿನ್ನಿ, ಗಿಡ್ಡಿಬಾಗಿಲು ವೆಂಕಟೇಶ್, ಮಂಜುನಾಥ್, ಚಂದ್ರಶೇಖರ್, ರವಿ, ಕೃಷ್ಣಪ್ಪ ಇನ್ನಿತರರು ಇದ್ದರು.ಸವಿತಾ ಮಹರ್ಷಿ ಮತ್ತು ಸರ್ವಜ್ಞನ ಭಾವಚಿತ್ರಕ್ಕೆ ಸವಿತಾ ಸಮಾಜದ ವತಿಯಿಂದ ಪುಷ್ಪನಮನ ಸಲ್ಲಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು