LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮತದಾನ ಬಳಿಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಉಪಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡ ನಂತರ ಬಿಡುಗಡೆ ಮಾಡಲು ನಿರ್ಧರಿಸಿದೆ.
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನವು ನಾಳೆ ನಡೆಯಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಫಲಿತಾಂಶ ಪ್ರಕಟಿಸಲು ಅನುಮತಿ ಕೋರಿ ಮಂಡಳಿಯು ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು.
ಚುನಾವಣಾ ಆಯೋಗದಿಂದ ಈವರೆಗೆ ಯಾವುದೇ ಅಧಿಕೃತ ಉತ್ತರ ಬಂದಿಲ್ಲ. ಈ ಹಿನ್ನೆಲೆಯಲ್ಲಿ, ನೀತಿ ಸಂಹಿತೆಯ ಅಡ್ಡಿ ಉಂಟಾಗದAತೆ ಮತದಾನ ಮುಗಿದ ನಂತರವಷ್ಟೇ ಫಲಿತಾಂಶ ಪ್ರಕಟಿಸುವುದು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದೆ.
ನಾಳೆ ಸಂಜೆ ಮತದಾನ ಮುಗಿದ ಕೂಡಲೇ ಫಲಿತಾಂಶ ನೀಡಲು ಅವಕಾಶವಿದ್ದರೂ, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟಿಸಿದರೆ ಶಾಲೆ-ಕಾಲೇಜುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತಾಂತ್ರಿಕವಾಗಿ ತೊಂದರೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ಎಲ್ಲಾ ಕಾರಣಗಳಿಂದಾಗಿ ಏಪ್ರಿಲ್ 10, ಶುಕ್ರವಾರದಂದು ಫಲಿತಾಂಶ ಪ್ರಕಟಿಸುವುದು ಸೂಕ್ತ ಎಂದು ಮಂಡಳಿಯು ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಆತಂಕ ಪಡುವ ಅಗತ್ಯವಿಲ್ಲ. ಈ ಕೆಳಗಿನ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಸುಲಭವಾಗಿ ನಿಮ್ಮ ಅಂಕಪಟ್ಟಿಗಳನ್ನು ವೀಕ್ಷಿಸಬಹುದು:
(karresults.nic.in), (kseab.karnataka.gov.in) ಪರ್ಯಾಯ ವ್ಯವಸ್ಥೆ:ಒಂದು ವೇಳೆ ಹೆಚ್ಚಿನ ಸಂಚಾರದ (Traffic) ಕಾರಣದಿಂದ ವೆಬ್‌ಸೈಟ್ ವಿಳಂಬವಾದರೆ, ವಿದ್ಯಾರ್ಥಿಗಳು ಡಿಜಿಲಾಕರ್ (Digilocker) ಮೂಲಕವೂ ತಮ್ಮ ಫಲಿತಾಂಶವನ್ನು ಪಡೆಯಬಹುದು: digilocker.gov.iಟn

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು