LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

"ಬಾಲ್ ಬದಲು ರಶೀದ್ ಅನ್ನು ನೋಡಿದ್ದೇ ಎಡವಟ್ಟಾಯ್ತು"

ಅಫ್ಘಾನಿಸ್ತಾನದ ವಿರುದ್ಧ ಏಕದಿನ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋತ ಬಳಿಕ ತಮ್ಮ ಬ್ಯಾಟರ್ ಗಳ ಬಗ್ಗೆ ಬಾಂಗ್ಲಾದೇಶದ ಪ್ರಧಾನ ಕೋಚ್ ಮುಷ್ತಾಕ್ ಅಹ್ಮದ್ ಅವರ ಬೇಸರದ ನುಡಿ. ಈ ಸೋಲುಗಳಿಂದ ಹೊರಬಂದು ನಮ್ಮ ಆಟಗಾರರು ಶೀಘ್ರ ಲಯ ಕಂಡುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.

ಯುಎಇನ ಅಬುಧಾಬಿಯಲ್ಲಿ ಶನಿವಾರ ನಡೆದ ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ೮೧ ರನ್ ಗಳ ಸೋಲು ಅನುಭವಿಸಿದ ಬಾಂಗ್ಲಾದೇಶ ತಂಡ ಸರಣಿಯನ್ನೂ ಕಳೆದುಕೊಂಡಿತು. ಈ ಬಗ್ಗೆ ಪಂದ್ಯದ ಬಳಿಕ ಮಾತನಾಡಿದ ಮುಷ್ತಾಕ್ ಅಹ್ಮದ್ ಅವರು, ರಶೀದ್ ಖಾನ್ ದೊಡ್ಡ ಪ್ರಮಾಣದಲ್ಲಿ ಸ್ಪಿನ್ ಮಾಡುವ ಬೌಲರ್ ಅಲ್ಲ. ಆದರೆ, ಅವರು ಬಹಳ ಅನುಭವಿಯಾಗಿದ್ದು ವಿಕೆಟ್ ಪಡೆಯುವಲ್ಲಿ ನಿಸ್ಸೀಮರು. ಅವರ
ಲೈನ್ ಮತ್ತು ಲೆಂಗ್ತ್ ಬಹಳ ಸ್ಥಿರವಾಗಿದೆ. ನಾವು ಕೆಲವೊಮ್ಮೆ ಚೆಂಡನ್ನು ನೋಡಬೇಕು, ಬೌಲರ್ ಅನ್ನು ಅಲ್ಲ. ನಾವು ಬೇಗನೆ ಸುಧಾರಿಸಿಕೊಳ್ಳಬೇಕು ಎಂದು ಪಾಕಿಸ್ತಾನ ಮೂಲದ ಮಾಜಿ ಸ್ಪಿನ್ನರ್ ಅಭಿಪ್ರಾಯಪಟ್ಟರು.

"ನೀವು ಉತ್ತಮ ಮನಸ್ಥಿತಿಯನ್ನು ಹೊಂದಿದ್ದರೆ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಯಾವುದೇ ಬೌಲರ್ ವಿರುದ್ಧಆಡಬಹುದು. ರಶೀದ್ ಖಾನ್ ಅವರು ಹಲವು ವರ್ಷಗಳಿಂದ ಯಶಸ್ವಿಯಾಗಿದ್ದಾರೆ, ಆದರೆ ಅದೇ ಸಮಯದಲ್ಲಿ ಬಾಂಗ್ಲಾದೇಶದ ಬ್ಯಾಟಿಂಗ್ ವಿಭಾಗವಾಗಿ, ಚೆಂಡನ್ನು ಹೇಗೆ ಆಡಬೇಕೆಂದು ನಮಗೆ ತಿಳಿದಿರಬೇಕು, ಬೌಲರ್ ಅನ್ನು ಅಲ್ಲ'' ಎಂದರು.

ಬೌಲರ್‌ಗಳ ವಿರುದ್ಧ ಸ್ಪಿನ್ನರ್‌ಗಳ ವಿರುದ್ಧ ಬ್ಯಾಟ್ಸ್ಮನ್‌ಗಳು ಏನು ಮಾಡಬೇಕು ಎಂಬುದನ್ನು ಮುಷ್ತಾಕ್ ವಿವರಿಸಿದರು. ದೊಡ್ಡ ಹೊಡೆತಗಳಿಗೆ ಹೋಗುವ ಬದಲು,
ರನ್‌ಗಳನ್ನು ಗಳಿಸುವುದರ ಬಗ್ಗೆ ಮೇಲೆ ಗಮನಹರಿಸಬೇಕು ಎಂದು ತಿಳಿಸಿದರು.

ಅಫ್ಘಾನಿಸ್ತಾನದ ವಿರುದ್ಧ ಟಿ೨೦ ಸರಣಿಯನ್ನು ೩-೦ ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದ್ದ ಬಾಂಗ್ಲಾದೇಶ ಕ್ರಿಕೆಟ್ ತಂಡ ಇದೀಗ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡಿದೆ. ಮೂರು ಪಂದ್ಯಗಳ ಏಕದಿನ ಪಂದ್ಯದಲ್ಲಿ ೨-೦ ಹಿನ್ನಡೆಯಲ್ಲಿದ್ದು ಕ್ಲೀನ್ ಸ್ವೀಪ್ ಭೀತಿ ಎದುರಿಸುತ್ತಿದೆ. ಬೌಲರ್‌ಗಳಿಗೆ ಅನುಕೂಲಕರವಾಗಿದ್ದ ಪಿಚ್‌ಗಳಲ್ಲಿ ಬ್ಯಾಟ್ಸ್ಮನ್‌ಗಳು ಸರಿಯಾಗಿ ಆಡಲು ಸಾಧ್ಯವಾಗದಿರುವುದು ಬಾಂಗ್ಲಾದೇಶಕ್ಕೆ ಮುಳುವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು