LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ

ಪುಣೆ: ಹಿರಿಯ ಪರಿಸರ ವಿಜ್ಞಾನಿ ಮಾಧವ ಧನಂಜಯ ಗಾಡ್ಗೀಳ್ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಪುಣೆಯ ಪ್ರಯಾಗ್ ಆಸ್ಪತ್ರೆಯಲ್ಲಿ (Pune) ನಿಧನರಾದರು. ಇಂದು ಸಂಜೆ ಪುಣೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

1942 ಮೇ 24 ರಂದು ಪುಣೆಯಲ್ಲಿ ಜನಿಸಿದ ಮಾಧವ ಗಾಡ್ಗೀಳ್ ಅವರು ಪುಣೆಯ ಫರ್ಗುಸನ್ ಕಾಲೇಜಿನಿಂದ ಬಿಎಸ್ಸಿ (ಪ್ರಾಣಿಶಾಸ್ತ್ರ) ಪದವಿ ಪಡೆದು 1965 ರಲ್ಲಿ ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪಡೆದು 1969 ರಲ್ಲಿ ಹಾರ್ವರ್ಡ್‌ನಿಂದ ಜೀವಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದರು.

ಭಾರತಕ್ಕೆ 1971 ರಲ್ಲಿ ಮರಳಿದ ಬಳಿಕ 1973 ರಲ್ಲಿ ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯನ್ನು ಸೇರಿ 2004 ರಲ್ಲಿ ಅಧ್ಯಕ್ಷರಾಗುವ ಮೂಲಕ ಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಪರಿಸರ ಶಾಸ್ತ್ರಜ್ಞ, ಬರಹಗಾರ ಹಾಗೂ ಅಂಕಣಕಾರರಾಗಿ ಗುರುತಿಸಿಕೊಂಡಿದ್ದ ಗಾಡ್ಗೀಳ್ ಅವರು, ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿಯ ಮಾಜಿ ಸದಸ್ಯರಾಗಿದ್ದರು ಮತ್ತು 2010 ರ ಪಶ್ಚಿಮ ಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿ ಮುಖ್ಯಸ್ಥರಾಗಿದ್ದರು. ಇವರು ಅಧ್ಯಯನ ನಡೆಸಿ ತಯಾರಿಸಿದ್ದ ವರದಿಯನ್ನು ಗಾಡ್ಗೀಳ್‌ ಆಯೋಗದ ವರದಿ ಎಂದೇ ಕರೆಯಲಾಗುತ್ತಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು