LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bellary

`ಸನಾತನ ಸಂಸ್ಕೃತಿ ಉಳಿವಿಗಾಗಿ ಶಂಕರಾಚಾರ್ಯರ ಕೊಡುಗೆ ಅಪಾರ’

ಬೇಲೂರು: ಶ್ರೀ ಶಾರದಾ ಪೀಠಂ ಶಂಕರಮಠ ಬೇಲೂರು ಮತ್ತು ದೇಶಭಕ್ತರ ಬಳಗ ಬೇಲೂರು ಸಂಯುಕ್ತಾಶ್ರಯದಲ್ಲಿ ನಡೆದ ಭಜಗೋವಿಂದ ಸ್ಪರ್ಧಾ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ದೇಶಭಕ್ತರ ಬಳಗದ ತಾಲೂಕು ಅಧ್ಯಕ್ಷರಾದ ಡಾಕ್ಟರ್ ಸಂತೋಷ್ ಕುಮಾರ್ ನಡೆಸಿಕೊಟ್ಟರು.

ನಂತರ ಮಾತನಾಡಿದ ಅವರು. ಸನಾತನ ಧರ್ಮ ಸಂಸ್ಕೃತಿ ಉಳಿವಿಗಾಗಿ ಆದಿಶಂಕರರ ಕೊಡುಗೆ ಅಪಾರ ಎಂದು ನುಡಿದರು.. ಜಗತ್ತಿನ 36 ಸಂಸ್ಕೃತಿಗಳಲ್ಲಿ. 35 ಸಂಸ್ಕೃತಿಗಳು ನಶೆಸಿ ಹೋಗಿರುವಾಗಲು ಭಾರತೀಯ ಸನಾತನ ಸಂಸ್ಕೃತಿ ಮಾತ್ರ ಉಳಿಯಿತು.. ಇದನ್ನು ಉಳಿಸುವಲ್ಲಿ ಶಂಕರಾಚಾರ್ಯರಂತ ಧರ್ಮದೃಷ್ಟರ ಕೊಡುಗೆ ಅಪಾರ. ಇವರು ದೇಶಾದ್ಯಂತ ಸಂಚರಿಸಿ.

ನಾಲಕ್ಕು ಆಮ್ನಾಯ ಮಠಗಳನ್ನು ಸ್ಥಾಪಿಸಿ ತಮ್ಮದೇ ಅದ್ವೈತ ಸಿದ್ದಾಂತವನ್ನು ಪ್ರತಿಷ್ಠಾಪಿಸಿ ಸನಾತನ ಸಂಸ್ಕೃತಿಯನ್ನು ಉಳಿಸಿದರು.ಅಲ್ಲದೆ ನಮ್ಮ ದೇಶಭಕ್ತ ಬಳಗದ ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದೇವೆ ಮುಂದೆಯೂ ಕೂಡ ಇದನ್ನು ಮುಂದುವರೆಸಿಕೊಂಡುಹೋಗುವುದಾಗಿ ತಿಳಿಸಿದರು.

ನಂತರ ಶಂಕರ ಮಠದ ಕಾರ್ಯದರ್ಶಿ ಸುಬ್ರಹ್ಮಣ್ಯ ಮಾತನಾಡಿ ನಮ್ಮ ಸಂಸ್ಕೃತಿ ಧರ್ಮ ರಕ್ಷಣೆಗೆ ಶೃಂಗೇರಿ ಶ್ರೀಗಳ ಕೊಡುಗೆ ಅಪಾರ ಮತ್ತು ನಾವು ಈ ಕಾರ್ಯಕ್ರಮವನ್ನು ಮಾಡು ವುದಕ್ಕೆ ಶೃಂಗೇರಿ ಶ್ರೀಗಳು ಮನಪೂರ್ವಕವಾಗಿ ಆಶೀರ್ವಾದ ಮಾಡಿರುವುದೇ ಪ್ರೇರಣೆಯಾಗಿರುತ್ತದೆ.

ಇನ್ನು ಮುಂದೆ ನಿರಂತರವಾಗಿ ಭಗವದ್ಗೀತೆ ರಾಮಾಯಣ ಮಹಾಭಾರತ ಕ್ವಿಜ್ ಮುಂತಾದ ಕಾರ್ಯಕ್ರಮಗಳನ್ನು ಮಠದಲ್ಲಿ ಮಾಡುವ ಯೋಜನೆ ಇದೆ ಎಂದು ತಿಳಿಸಿದರುಇದೇ ವೇಳೆ 80 ಜನ ವಿದ್ಯಾರ್ಥಿಗಳಿಂದ ಭಜಗೋವಿಂದ ಸ್ಪರ್ಧೆ ಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಮೆಡಿಕಲ್ ಮಹೇಶ್, ಹಯವದನರಾವ್, ಪ್ರಕಾಶ್, ನವರತ್ನ ಎಸ್ ವಟಿ,ಹರೀಶ್ ಸೇರಿದಂತೆ ಇತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು