LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಶಿವಣ್ಣ ಬೇಲ್ ಫಸ್ಟ್ ಲುಕ್ ಅನಾವರಣ..

ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಶಿವರಾಜ್ ಕುಮಾರ್ ಅವರ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ನಿರ್ದೇಶಕ ಪವನ್ ಒಡೆಯರ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಅನಾವರಣ ಮಾಡಲಾಗಿದೆ.ವೆಂಕಟ್ ಕೆ ನಾರಾಯಣ್, ಶಿವಣ್ಣ ಹಾಗೂ ಪವನ್ ಒಡೆಯರ್ ಸಂಯೋಗದ ಈ ಸಿನಿಮಾಗೆ ಬೇಲ್ ಎಂಬ ಟೈಟಲ್ ಇಡಲಾಗಿದೆ. ಮಳೆಯಲ್ಲಿ ಛತ್ರಿ ಹಿಡಿದು ಶಿವಣ್ಣ ನಿಂತಿರುವ ಪೋಸ್ಟರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚುವಂತೆ ಮಾಡಿದೆ. ಈ ಮಹತ್ವಾಕಾಂಕ್ಷೆ ಪ್ರಾಜೆಕ್ಟ್ ನ್ನು ವೆಂಕಟ್ ಕೆ ನಾರಾಯಣ್ ಅವರು ತಮ್ಮದೇ ಕೆವಿಎನ್ ಪ್ರೊಡಕ್ಷನ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಗೋವಿಂದಾಯ ನಮಃ, ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ, ರೇಮೋ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರ ಕೊಟ್ಟಿರುವ ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಪವನ್ ಶಿವಣ್ಣಗೆ ಆಕ್ಷನ್ ಕಟ್ ಹೇಳಬೇಕೆಂಬ ಬಹುದಿನಗಳ ಕನಸನ್ನು ಈಡೇರಿಸಿಕೊಳ್ಳುತ್ತಿದ್ದಾರೆ.ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಪವನ್ ಒಡೆಯರ್, "ಇದು ನನಗೂ ಮತ್ತು ನಿರ್ಮಾಣ ಸಂಸ್ಥೆಗೂ ಅತ್ಯಂತ ವಿಶೇಷವಾದ ಸಿನಿಮಾವಾಗಲಿದೆ. ನಿಮಗಾಗಿ ನಾವು ಬಹಳಷ್ಟು ಕಾಯ್ದಿರಿಸಿದ್ದೇವೆ ಮತ್ತು ಶೀಘ್ರದಲ್ಲೇ ಟೀಸರ್ ಅನ್ನು ಘೋಷಿಸುತ್ತೇವೆ. ಶಿವಣ್ಣ ಅವರೊಂದಿಗೆ ಕೆಲಸ ಮಾಡುವುದು ನನ್ನ ಕನಸು ನನಸಾಗಿದೆ. ಅವರು ದಶಕಗಳಿಂದ ಐಕಾನ್ ಆಗಿದ್ದಾರೆ ಮತ್ತು ಹಿಂದೆAದೂ ಮಾಡದ ರೀತಿಯಲ್ಲಿ ಅವರನ್ನು ಪ್ರಸ್ತುತಪಡಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ" ಎಂದರು. `ಬೇಲ್' ನಮಗೆ ಬಹಳ ವಿಶೇಷವಾದ ಯೋಜನೆಯಾಗಿದ್ದು, ಇದು ಬಲವಾದ ಕಥೆ ಹೇಳುವಿಕೆಯನ್ನು ವಿಶಿಷ್ಟ ಸಿನಿಮೀಯ ದೃಷ್ಟಿಕೋನದೊಂದಿಗೆ ಸಮತೋಲನಗೊಳಿಸುತ್ತದೆ. ಪವನ್ ಒಡೆಯರ್ ಅವರಂತಹ ಸಾಬೀತಾದ ಕಥೆಗಾರರೊಂದಿಗೆ ಕೈ ಜೋಡಿಸುವುದು ಮತ್ತು ಶಿವಣ್ಣ ಅವರಂತಹ ಐಕಾನ್ ಜೊತೆಗೆ ಕೆಲಸ ಮಾಡುವುದು ಸಂಪೂರ್ಣ ಗೌರವವಾಗಿದೆ ಮತ್ತು ಅರ್ಥಪೂರ್ಣ ಸಿನಿಮಾವನ್ನು ನೀಡುವ ನಮ್ಮ ಉದ್ದೇಶದೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುತ್ತದೆ. ಪ್ರೇಕ್ಷಕರು ಇಲ್ಲಿಯವರೆಗೆ ನೋಡಿರದ ಹೊಸ ದೃಷ್ಟಿಕೋನದಲ್ಲಿ ಶಿವಣ್ಣ ಅವರನ್ನು ಪ್ರಸ್ತುತಪಡಿಸಲು ನಾವು ವಿಶೇಷವಾಗಿ ಎದುರು ನೋಡುತ್ತಿದ್ದೇವೆ' ವೆಂಕಟ್ ಕೆ ಕೊನಂಕಿ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು