LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಚಿತ್ರದುರ್ಗ ಅರಸರ ಆರಾಧ್ಯ ದೈವ, ಶ್ರೀ ಉಚ್ಚಂಗಿ ಯಲ್ಲಮ್ಮ ಜಾತ್ರೆ

ಚಿತ್ರದುರ್ಗ: ಚಿತ್ರದುರ್ಗ ಅರಸರ ರಾಜದೇವತೆ ಶ್ರೀ ಉಚ್ಚಂಗಿ ಯಲ್ಲಮ್ಮ ಅಮ್ಮನವರ ಜಾತ್ರಾ ಮಹೋತ್ಸ ವದ ಅಂಗವಾಗಿ ಅಮ್ಮನವರ ರಥೋತ್ಸವವನ್ನು ನಗರ ದ ವಿವಿಧ ಬಡಾವಣೆಗಳಲ್ಲಿ ಮೆರವಣಿಗೆ ಮೂಲಕ ಅದ್ದೂರಿ ವಿಜೃಂಭಣೆಯಿಂದ ನೆಡೆಯಿತು.

ನಗರದ ಕೋಟೆ ರಸ್ತೆಯಲ್ಲಿ ಇರುವ ಶ್ರೀ ಉಚ್ಚಂಗಿ ಯಲ್ಲಮ್ಮ ದೇವಿಗೆ ಅಭೀಷೇಕ ಹಾಗೂ ಮಹಾ ಮಂಗ ಳಾರತಿ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗ ಳೊಂದಿಗೆ ದೇವಿಗೆ ಪೂಜಾ ಕೈಂಕರ್ಯಗಳನ್ನು ನೇರ ವೇರಿಸಿದ ನಂತರ,ಸಾವಿರಾರು ಭಕ್ತರು ರಥೋತ್ಸವವ ನ್ನು ನಗರದ ವಿವಿಧ ರಾಜಬೀದಿಗಳಲ್ಲಿ ಸಡಗರ ಸಂಭ್ರ ಮದಿಂದ ನಡೆಸಲಾಯಿತು.

ಮೇ 25ರ ಶನಿವಾರ ಮಧ್ಯಾಹ್ನ 12ಕ್ಕೆ ದೇವಿಗೆ ವಿಶೇಷ ಭಂಡಾರ ಪೂಜೆ,ಸಂಜೆ 6ಕ್ಕೆ ಅಮ್ಮನವರ ಸಿಡಿ ಉತ್ಸವ ನಡೆಯಲಿದೆ.ದೇವಿಗೆ ಅಭೀಷೇಕ ರಾತ್ರಿ 9ಕ್ಕೆ ಜೋಗಪ್ಪ ಮತ್ತು ಜೋಗಮ್ಮನವರಿಂದ ಓಕುಳಿ ಕಾರ್ಯಕ್ರಮ ನಡೆಯಲಿದೆ.ಮೇ. 28 ರಂದು ಬೆಳಿಗ್ಗೆ 8ಕ್ಕೆ ದೇವಿಗೆ ಅಭೀಷೇಕ ಕಂಕಣ ವಿಸರ್ಜನೆ ಯೊಂದಿಗೆ ಈ ವರ್ಷದ ಜಾತ್ರಾ ಕಾರ್ಯಕ್ರಮ ಮುಕ್ತಾಯವಾಗಲಿದೆ.

ಬೆಳಿಗ್ಗೆ ದೇವಸ್ಥಾನದಲ್ಲಿ ಅಮ್ಮನವರಿಗೆ ಅಭೀಷೇಕವ ನ್ನು ಮಾಡಿ ವಿವಿಧ ರೀತಿಯ ಹೂಗಳಿಂದ ಆಲಂಕಾರವ ನ್ನು ಮಾಡಲಾಗಿತು. ನಂತರ ದೇವಾಲಯದ ಹೊರಗಡೆ ಅಮ್ಮನವರನ್ನು ಕುದುರೆಯ ಮೇಲೆಕುಳ್ಳರಿಸಿ. ಅಮ್ಮ ನವರ ಮುಖ ಪದ್ಮ ಹಾಗೂ ತಲೆಗೆಬಂಗಾರದ ಕೀರಿಟ ದ ಮೇಲೆ ಐದು ಹೆಡೆ ನಾಗರ ದೇವಿಗೆ ದೈವಿಕಳೆ ಹೆಚ್ಚಿಸಿ ತ್ತು. ಶಾವಂತಿಗೆ, ಚಂಡೆ ಹೂ ಸೇರಿದಂತೆ ವಿವಿಧ ರೀತಿ ಯ ಹೂಗಳಿಂದ ದೇವಿಗೆ ಪ್ರಭಾವಳಿ ಆಲಂಕಾರವನ್ನು ಮಾಡಲಾಗಿತು. ಎರಡು ಕಡೆಗಳಲ್ಲಿ ನವೀಲಿನ ಆಕೃತಿ ಮತ್ತು ತಲೆಯ ಮೇಲೆ ಕಮಲದ ಆಕೃತಿಯನ್ನು ಅಲಂಕಾರ ಮಾಡಿದ್ದರು.

ಈ ಮೆರವಣಿಗೆಯಲ್ಲಿ ಮುಖ್ಯ ಆಕರ್ಷಣೆಯಾಗಿ ವೀರ ಗಾಸೆ,ಚಂಡೆ,ನಂದಿಧ್ವಜ, ಕೀಲು ಕುದುರೆ, ತಟ್ಟೆ ರಾಯ, ಉರುಮೆ,ಕಹಳೆ, ನಾದ ಸ್ವರ ಯಕ್ಷಗಾನ ಸೇರಿದಂತೆ ವಿವಿಧ ಜಾನಪದ ತಂಡಗಳು ಭಾಗವಹಿಸಿದ್ದವು.ಈ ಜಾತ್ರೆಯಲ್ಲಿ ಮದಕರಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಂದೀಪ್,ಮಾಜಿ ನಗರಸಭಾ ಅಧ್ಯಕ್ಷ ಬಿ.ಕಾಂತರಾಜ್, ನಗರಸಭೆ ಸದಸ್ಯರಾದ ಚಂದ್ರ ಶೇಖರ್, ವೇದ,ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎನ್.ಡಿ. ಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು