LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಶ್ರೀಕೃಷ್ಣ ದೇಗುಲ ನಿರ್ಮಾಣ: ರಾಜೇಂದ್ರ ರಾಜಣ್ಣ

ಮಧುಗಿರಿ: ಪಟ್ಟಣದ ಇತಿಹಾಸ ಪ್ರಸಿದ್ಧ ಪುರಾತನ ದೇವಾಲಯಗಳಾದ ಶ್ರೀ ಮಲ್ಲೇಶ್ವರ ಮತ್ತು ಶ್ರೀ ವೆಂಕಟರಮಣಸ್ವಾಮಿ ದೇವಾಲಯಗಳ ಮಧ್ಯ ಭಾಗದಲ್ಲಿ ಶ್ರೀ ಕೃಷ್ಣನ ಭವ್ಯವಾದ ದೇವಾಲಯವನ್ನು ನಿರ್ಮಿಸಲಾಗುವುದೆಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು.
ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಮಧುಗಿರಿಯ ತಂಡದವರೊಂದಿಗೆ ಭೇಟಿ ನೀಡಿ ಶ್ರೀ ವಿಶ್ವಪ್ರಸನ್ನ ತೀರ್ಥರು ಪೇಜಾವರ ಸ್ವಾಮೀಜಿಗಳನ್ನು ಭೇಟಿ ಮಾಡಿ ಆರ್ಶೀವಾದ ಪಡೆದು ನಂತರ ಮಾತನಾಡಿದ ಅವರು ಶ್ರೀ ಕೃಷ್ಣ ಮಠಕ್ಕೆ ಈಗಾಗಲೇ ಮಲ್ಲೇಶ್ವರ ಸ್ವಾಮಿ ಮತ್ತು ಶ್ರೀ ವೆಂಕಟರಮಣಸ್ವಾಮಿ ದೇವಾಲಯಗಳ ಮಧ್ಯೆ ಭಾಗದಲ್ಲಿ ಸಾರ್ವಜನಿಕರ ಮನವಿಯಂತೆ ಸುಂದರವಾದ ಶ್ರೀ ಕೃಷ್ಣ ಮಂದಿರ ಪುನಃ ಪ್ರತಿಷ್ಠಾಪನೆ ನಡೆಸುವಂತೆ ಮನವಿ ಮಾಡಲಾಗಿದ್ದು ಸ್ವಾಮಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದು ದೇವಾಲಯದ ನಿರ್ಮಾಣದ ಕಾರ್ಯ ಆರಂಭವಾಗಲಿದೆ ಎಂದರು.
ತಾಲ್ಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಪಿ.ದತ್ತಾತ್ರೇಯ ಮಾತನಾಡಿ ಈಗಾಗಲೇ ಪುರಸಭೆಯ ವತಿಯಿಂದ ಶ್ರೀ ಕೃಷ್ಣ ನ ಮಠದ ಹೆಸರಿಗೆ ವರ್ಗಾಯಿಸಲಾಗಿರುವ ಇ- ಸ್ವತ್ತಿನ ಪ್ರತಿ ಮತ್ತು ದುಸ್ಥಿತಿಯಲ್ಲಿರುವ ಕಟ್ಟಡವನ್ನು ಕೆಡವಲು ಪುರಸಭೆಯ ವತಿಯಿಂದ ನೀಡಲಾಗಿರುವ ಆದೇಶಗಳ ಪ್ರತಿಗಳನ್ನು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ನವರು ಸ್ವಾಮೀಜಿಯವರಿಗೆ ಹಸ್ತಾಂತರಿಸಿದ್ದಾರೆ.ಮುAದಿನ ದಿನಗಳಲ್ಲಿ ಪಾಳು ಬಿದ್ದಿರುವ ಕಟ್ಟಡವನ್ನು ತೆರವು ಗೊಳಿಸುವ ಕಾರ್ಯವನ್ನು ಶೀಘ್ರವಾಗಿ ಆರಂಭಿಸಲಾಗುವುದು ಹಾಗೂ ಇನ್ನೂ ಕೆಲವೇ ದಿನಗಳಲ್ಲಿ ದೇವಾಲಯ ನಿರ್ಮಾಣಕ್ಕಾಗಿ ಶಾಸಕರಾದ ಕೆ.ಎನ್ ರಾಜಣ್ಣ ಹಾಗೂ ರಾಜೇಂದ್ರ ರಾಜಣ್ಣ ಮತ್ತು ಸಮುದಾಯದವರು ಮತ್ತು ಸಾರ್ವಜನಿಕರನ್ನು ಆಹ್ವಾನಿಸಿ ಭೂಮಿ ಪೂಜೆಯನ್ನು ಸಹ ಆರಂಭಿಸಲಾಗುವುದು ಎಂದರು.
ಸಿದ್ದನಹಳ್ಳಿಕಿರಣ್,ರವೀಶ್, ಪುರಸಭಾ ಮಾಜಿ ಅಧ್ಯಕ್ಷರಾದ ಲಾಲಾ ಪೇಟೆ ಮಂಜುನಾಥ್, ಮಾಜಿ ಸದಸ್ಯರುಗಳಾದ ನಾರಾಯಣ್, ಮಂಜುನಾಥ್ ಆಚಾರ್, ಶ್ರೀಧರ್ ,ಗುಂಡಣ್ಣ, ಮುಖಂಡರುಗಳಾದ ರಘು,ಮೌಂಟ್ ವ್ಯೂ ಶಾಲೆಯ ಕಾರ್ಯದರ್ಶಿ ಜಿ.ಎಸ್ ಜಗದೀಶ್ ಕುಮಾರ್, ಹರ್ಷ ಮತ್ತಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು