LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಪರ್ಶು'ಗೆ ಸಿಂಪಲ್ ಸುನಿ, ಸಪ್ತಮಿಗೌಡ ತಂದೆ ಸಾಥ್

ನೈಜ ಘಟನೆ ಆಧಾರಿತ ಸಿನಿಮಾಗಳಿಗೇನು ಸ್ಯಾಂಡಲ್‍ನಲ್ಲಿ ಬರವಿಲ್ಲ. ಬಿಲ್ಡಪ್, ಹೊಡಿ ಬಡಿ ಸಿನಿಮಾಗಳ ನಡುವೆಯೂ ನೈಜ ಘಟನೆ ಆಧಾರಿತ ಸಿನಿಮಾಗಳು ಸಹ ಅಭಿಮಾನಿಗಳ ಗಮನ ಸೆಳೆಯುತ್ತಿವೆ. ಇದೀಗ ಹೊಸಬರ ತಂಡವೊಂದು ರಾಜ್ಯ ಮಟ್ಟದ ಕಬ್ಬಡ್ಡಿ ಆಟಗಾರನೊಬ್ಬನ ದುರಂತದ ಕಥೆಯನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈಹಾಕಿದ್ದಾರೆ.

ಚಿತ್ರಕ್ಕೆ 'ಪರ್ಶು' ಎಂದು ಟೈಟಲ್ ಇಡಲಾಗಿದೆ.ಟೈಟಲ್ ರಿಲೀಸ್ ಮಾಡುವ ನೆಪದಲ್ಲಿ 'ಪರ್ಶು' ಸಿನಿಮಾತಂಡ ಮಾಧ್ಯಮ ಮುಂದೆ ಹಾಜರಾಗಿತ್ತು. ಪರ್ಶು ಸಿನಿಮಾತಂಡಕ್ಕೆ ನಿರ್ದೇಶಕ ಸಿಂಪಲ್ ಸುನಿ, ಮಾಜಿ ಪೊಲೀಸ್ ಅಧಿಕಾರಿ, ನಾಯಕಿ ಸಪ್ತಮಿ ಗೌಡ ಅವರ ತಂದೆ ಹೆಚ್ ಸಿ ಉಮೇಶ್, ಕಾಶಿನಾಥ್ ಅವರ ಪುತ್ರ ಅಭಿಮನ್ಯು ಸಾಥ್ ನೀಡಿದರು. ಟೈಟಲ್ ಪೋಸ್ಟರ್ ರಿಲೀಸ್ ಮಾಡಿ ಸಿನಿಮಾತಂಡಕ್ಕೆ ಶುಭಹಾರೈಸಿದರು.

ಪರ್ಶು ಸಿನಿಮಾಗೆ ರುದ್ರ ಶ್ರೀನಿವಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕ ಶ್ರೀನಿವಾಸ್ ಅವರಿಗೆ ಇದು ಚೊಚ್ಚಲ ಸಿನಿಮಾ. ಹಾಗಂತ ಸಿನಿಮಾರಂಗ ಅವರಿಗೆ ಹೊಸದೇನಲ್ಲ. ಶ್ರೀನಿವಾಸ್ ಅವರು ಊರ್ವಶಿ ಚಿತ್ರಮಂದಿರದಲ್ಲಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಇದೀಗ ನಿರ್ದೇಶಕರಾಗಿ ಸ್ಯಾಂಡಲ್‍ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.

ಪರ್ಶು ಚಿತ್ರಕ್ಕೆ ಪರಶುರಾಮ್ ಬಂಡವಾಳ ಹೂಡುತ್ತಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ಕಬ್ಬಡ್ಡಿ ಆಟಗಾರನ ಪಾತ್ರದಲ್ಲಿ ಪರಶುರಾಮ್ ಅವರೇ ಕಾಣಿಸಿಕೊಳ್ಳುತ್ತಿದ್ದಾರೆ.ಅಂದಹಾಗೆ ಪರ್ಶು 2014 ಮತ್ತು 2015ರಲ್ಲಿ ನಡೆದ ಘಟನೆಯಾಗಿದೆ. ಮೈಸೂರು ಭಾಗದ ರಾಜ್ಯಮಟ್ಟದ ಕಬ್ಬಡ್ಡಿ ಆಟಗಾರನೊಬ್ಬನ ಕಥೆ ಇದಾಗಿದೆ. ದೊಡ್ಡ ಆಟಗಾರನಾಗಬೇಕು ಎನ್ನುವ ಕನಸುಕಂಡಿದ್ದ ವ್ಯಕ್ತಿಯ ಮೇಲೆ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕುಳುಹಿಸಿ ಆತನ ಜೀವನ ಮತ್ತು ಇಡೀ ಕುಟುಂಬದ ಬದುಕನ್ನೇ ಕಿತ್ತುಕೊಂಡ ಘಟನೆ ಇದಾಗಿದೆ.

ಸಿನಿಮಾದ ಪೋಸ್ಟರ್ ಅನಾವರಣ ಮಾಡಿ ಮಾತನಾಡಿದ ಮಾಜಿ ಪೊಲೀಸ್ ಅಧಿಕಾರಿ ಹೆಚ್ ಸಿ ಉಮೇಶ್, 'ಈ ಸಿನಿಮಾಗೆ ನಾನು ಕೂಡ ಸಾಕಷ್ಟು ಇನ್‍ಪುಟ್ ಕೊಡುತ್ತಿದ್ದೀನಿ. ನನ್ನ ಬೆಂಬಲ ಖಂಡಿತ ಇರುತ್ತೆ' ಎಂದು ಹೇಳಿದರು. ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, 'ಈ ಕಥೆ ತುಂಬಾ ಚೆನ್ನಾಗಿ ಇದೆ. ನೈಜ ಘಟನೆ ಆಧಾರಿತ ಘಟನೆ, ಪರಶು ಅವರೇ ಈ ಸಿನಿಮಾಗೆ ಸೂಕ್ತ'ಎಂದರು.
ನಟ ಕಾಶಿನಾಥ್ ಅವರ ಪುತ್ರ ಮಾತನಾಡಿ, 'ಕಥೆ ಕೇಳಿದಾಗ ತುಂಬಾ ಇಷ್ಟ ಆಯ್ತು. ಜೊತೆಗೆ ಅಷ್ಟೇ ನೋವು ಕೂಡ ಆಯ್ತು. ಕರಳು ಹಿಂಡುವ ಕಥೆ' ಎಂದರು.

ನಿರ್ದೇಶಕ ಶ್ರೀನಿವಾಸ್ ಮಾತನಾಡಿ, ಬಡವರ ಮೇಲಿನ ದೌರ್ಜನ್ಯದ ಬಗ್ಗೆ ಇರುವ ಸಿನಿಮಾವಾಗಿದೆ. ಈ ಕಥೆ ಮಾಡುವಾಗ ಆ ಕುಟುಂಬದ ಜೊತೆ ಒಂದಿಷ್ಟು ದಿನ ಇದ್ದೆ' ಎಂದರು.ನಾಯಕ ಮತ್ತು ನಿರ್ಮಾಪಕ ಪರಶುರಾಮ್ ಮಾತನಾಡಿ, 'ಅನೇಕ ವರ್ಷಗಳಿಂದ ಈ ಸಿನಿಮಾದ ಕಥೆಗಾಗಿ ಕೆಲಸ ಮಾಡಿದ್ದೀನಿ. ಯಾವುದೇ ತಪ್ಪು ಮಾಡದ ಉತ್ತಮ ಆಟಗಾರನ ದುರಂತ ಬದುಕಿನ ಘಟನೆ ಇದು. ಸಿನಿಮಾಗೆ ಸಹಾಯ ಮಾಡಿ' ಎಂದು ಕೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು