LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಜವಾಬ್ದಾರಿ ನಿರ್ವಹಿಸುವೆ ಸೋಮಣ್ಣ 

ದೆಹಲಿ: ತಮಗೆ ಯಾವುದೇ ಜವಾಬ್ದಾರಿ ನೀಡಿದರೂ ಸಮರ್ಪಕವಾಗಿ ನಿರ್ವಹಿಸುವೆ ಎಂದು ಕೇಂದ್ರ ನೂತನ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಸಚಿವರಾದ ನಂತರ ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷ ಗುರುತರವಾದ ಜವಾಬ್ದಾರಿ ವಹಿಸಿದೆ. ತಮ್ಮ ಮೇಲಿಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕಾರ್ಯ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ.

ಯಾವುದೇ ಖಾತೆ ಮಹತ್ವದ್ದಲ್ಲ ಎಂದು ಹೇಳುವ ಹಾಗಿಲ್ಲ. ಎಲ್ಲಾ ಖಾತೆಯೂ ಅದರದೆ ಆದ ಮಹತ್ವ ಹೊಂದಿರುತ್ತದೆ. ಪ್ರಧಾನಿ ಮೋದಿ ಅವರು....
ಮಂತ್ರಿಗಳಾದವರು ಯಾರು ಊರಿಗೆ ಹೋಗಬೇಡಿ, ಕೆಲಸ ಮಾಡಿ ಕ್ಷೇತ್ರಗಳಿಗೆ ತೆರಳಿ ಎಂದಿದ್ದಾರೆ.ಹಾಗಾಗಿ ಏನಾದರೂ ಕೆಲಸ ನಿರ್ವಹಿಸಿ ಕ್ಷೇತ್ರಕ್ಕೆ ತೆರಳುತ್ತೇನೆ.

ಇಂದು ಪಕ್ಷದ ಹಿರಿಯರಾದ ಅಮಿತ್ ಶಾ,ನಡ್ಡಾ, ಸಂತೋಷ್ ಅವರನ್ನು ಭೇಟಿಯಾಗುತ್ತೇನೆ. ಅವರಿಂದ ಸಲಹೆ ಸಹಕಾರ ಪಡೆಯುತ್ತೇನೆ. ನನ್ನನ್ನು ಗೆಲ್ಲಿಸಿ ಸಚಿವರನ್ನಾಗಿ ಮಾಡಲು ಪ್ರಮುಖ ಪಾತ್ರ ವಹಿಸಿದ ಕ್ಷೇತ್ರದ ಜನತೆ, ಕಾರ್ಯಕರ್ತರು ಸೇರಿದಂತೆ ಮುಖಂಡರಿಗೆ ಧನ್ಯವಾದ ಸಮರ್ಪಿಸುತ್ತೇನೆ. ನಾನು ಗೆಲ್ಲಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸಾಕಷ್ಟು ಸಹಾಯ ಮಾಡಿದ್ದಾರೆ ಎಂದು ದೇವೇಗೌಡರ ನೆರವನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಇದಕ್ಕೂ ಮುನ್ನ ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರನ್ನು ದೆಹಲಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಹಾಗೂ ಸಂಸದ ಗೋವಿಂದಕಾರಜೋಳ ಹಾಗೂ ಬಿ.ವೈ. ರಾಘವೇಂದ್ರ ಅವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಸೋಮಣ್ಣ ಅವರಿಗೆ ಶುಭಾಶಯ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು