LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ದೇವನಹಳ್ಳಿ: ವೈಕುಂಠ ಏಕಾದಶಿ ದಿನವು ಹಿಂದೂ ಧರ್ಮದಲ್ಲಿ ಮಹತ್ವ ಪೂರ್ಣ ಹಾಗೂ ಧಾರ್ಮಿಕ ಸದ್ಗುಣವನ್ನು ಉಂಟು ಮಾಡುವ ಕಾರ್ಯಕ್ರವಾಗಿದ್ದು, ವಿಷ್ಣುವನ್ನು ಇಂದು ಪೂಜೆಗಿಟ್ಟು ಭಕ್ತರು ಉಪವಾಸದ ವೃತವನ್ನು ಆಚರಿಸುತ್ತಾರೆಂದು ಆಲೂರು ದುದ್ದನಹಳ್ಳಿ ಹಾಲು ಉತ್ಪಾಧಕರ ಸಹಕಾರ ಸಂಘದ ಮಾಜಿ ಅದ್ಯಕ್ಷ ಮುನೇಗೌಡ ಹೇಳಿದರು.

ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ ಆಲೂರು ದುದ್ದನಹಳ್ಳಿ ಗ್ರಾಮದಲ್ಲಿ ವೈ ಕುಂಠ ಏಕಾದಶಿ ಪ್ರಯುಕ್ತ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರೆಲ್ಲರು ದೇವರಿಗೆ ವಿಷೇಶ ಪೂಜೆಯಲ್ಲಿ ಭಾಗವಹಿಸಿ ಮಾತನಾಡಿ, ನಮ್ಮ ಗ್ರಾಮದಲ್ಲಿ ಧಾರ್ಮಿಕ ಹಬ್ಬ-ಹರಿದಿನಗಳಲ್ಲಿ ಸಹಸ್ತ್ರಾರು ಭಕ್ತರು ಸ್ವಾಮಿಗೆ ವಿಷೇಶ ಪೂಜೆ, ಅಭಿಷೇಕ ಸಲ್ಲಿಸುವ ಮೂಲಕ ಸಂಕಷ್ಟಗಳು ದೂರ ಮಾಡಲು ದೇವರಲ್ಲಿ ಪ್ರಾರ್ಥಿಸುತ್ತಾರೆ.

1972 ರಲ್ಲಿ ಶ್ರೀ ಆಂಜಿನೇಯ ಸ್ವಾಮಿ ನಿರ್ಮಿಸಿದ್ದು, ಶಿಥಿಲ ಹಾಗೂ ಕಿರಿದಾಗಿದ್ದ ಗರ್ಭ ಗುಡಿಯನ್ನು ಧಾನಿಗಳ ಸಹಕಾರದ ಜತೆಗೆ ಭಕ್ತರ ಇಷ್ಟಾರ್ಥದಂತೆ ರಾಜಗೋಪುರ, ದೇವಸ್ಥಾನ ಒಳಾಂಗ ಣವನ್ನು ನಿರ್ಮಿಸಲಾಗಿದೆ.ಗ್ರಾಮದಲ್ಲಿ ಸುಖ, ಶಾಂತಿ, ನೆಮ್ಮದಿ ಜತೆಗೆ ಜನ, ಜಾನುವಾರು ಹಾದಿಯಾಗಿ ಸಕಲ ಜೀವರಾಶಿಗಳು ಸಂಮೃದ್ದಿ, ಸಹಬಾಳ್ವೆಯಿಂದ ಬದುಕಲು ಭಗವಂತನ ಕೃಪೆ ಅತ್ಯವಶ್ಯಕ ವಾಗಿದೆ. ಸುತ್ತ-ಮುತ್ತಲಿನಿಂದ ಬರುವ ಭಕ್ತರಿಗೆ ಅಗತ್ಯ ಸೌಕರ್ಯಗಳನ್ನು ದೇವಸ್ಥಾನ ಆಡಳಿತ ಮಂಡಳಿಯಿಂದ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಆಲೂರು ದುದ್ದನಹಳ್ಳಿ ಶ್ರೀ ಆಂಜಿನೇಯ ಸ್ವಾಮಿ ಭಕ್ತಾದಿಗಳಾದ ಪಾರ್ವ ತಮ್ಮ, ಮಧನ್‍ಗೌಡ, ಪ್ರೀಯಾಂಕ, ದೇವಸ್ಥಾನದ ಪ್ರಧಾನ ಅರ್ಚಕ ನಾರಾಯಣ ಆಚಾರ್, ಸೇರಿದಂತೆ ನೂರಾರು ಭಕ್ತಾದಿಗಳು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು