LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ-2024ರ ಪ್ರಯುಕ್ತ ವಿಶೇಷ ನೋಂದಣಿ ಕಾರ್ಯಕ್ರಮ

ದೇವನಹಳ್ಳಿ: ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶ್ರೀನಾಥ ಗೌಡ ಅವರ ಅಧ್ಯಕ್ಷತೆಯಲ್ಲಿ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ-2024 ರ ಪ್ರಯುಕ್ತ ವಿಶೇಷ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಮೀಪದ ಮತಗಟ್ಟೆ ಕೇಂದ್ರಗಳಿಗೆ ತೆರಳಿ ಸಹ ಮತದಾರರ ಪಟ್ಟಿಯ ಪರಿಷ್ಕರಣೆಗೆ ಅನುಕೂಲ ಪಡೆಯಲು ಅರಿವು ಮೂಡಿಸಲಾಯಿತು.

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಅನ್ನು ಹಮ್ಮಿಕೊಂಡಿದ್ದು ಸದರಿ ಕಾರ್ಯಕ್ರಮದ ಕುರಿತು ಅರಿವು ಮೂಡಿಸಲು ಕಾಲೇಜು ಸಭಾಂಗಣದಲ್ಲಿ ಹೊಸ ಮತದಾರರ ನೋಂದಣೆಗಾಗಿ ನಮೂನೆ-6, ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ನಮೂನೆ-7, ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆಗೆ ನಮೂನೆ-6(ಬಿ) ಮತ್ತು ವಾಸಸ್ಥಳ ಬದಲಾವಣೆ ಒಳಗೊಂಡ ಇತರೆ ತಿದ್ದುಪಡಿಗಾಗಿ ನಮೂನೆ-8 ಅರ್ಜಿಗಳನ್ನು ಬಿ.ಎಲ್.ಓ ಗಳಿಗೆ ನೀಡುವ ಅಥವಾ ಗಿಊಂ ಂಠಿಠಿ ಮುಖಾಂತರ ಸಲ್ಲಿಸುವ ಕುರಿತು ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಶ್ರೀ ಮಂಜಯ್ಯ, ತಾಲ್ಲೂಕು ದಂಢಾಧಿಕಾರಿಗಳ ಕಚೇರಿ ರಮೇಶ, ಸಹಾಯಕ ನಿರ್ದೇಶಕರು, ಅಮರನಾರಾಯಣಸ್ವಾಮಿ, ಮಂಜುನಾಥ ಪುರಸಭೆ ಪಾಪಣ್ಣ, ರಘು ರಾಜ್ಯಶಾಸ್ತ್ರ ವಿಭಾಗ, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು