ಖ್ಯಾತ ನಿರ್ದೇಶಕ ಎಸ್.ನಾರಾಯಣ್ ಅವರ ಪುತ್ರ ಪಂಕಜ್ ನಾರಾಯಣ್ ಒಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದೊಂದಿಗೆ ಮರಳಿದ್ದಾರೆ. ಸರ್ಚ್ ಹೆಸರಿನ ಈ ಚಿತ್ರದ ಮುಹೂರ್ತ ಸಮಾರಂಭ ನಾಗರಬಾವಿ ಮುದ್ದಿನ ಪಾಳ್ಯದ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.ಚಿತ್ರದ ನಾಯಕ ಪಂಕಜ್ ಮಾತನಾಡಿ, “ಉಗ್ರಂ ಮುರಳಿ ಅವರು ಈಗಾಗಲೇ ಚಿತ್ರದ ಟೈಟಲ್ ಲಾಂಚ್ ಮಾಡಿಕೊಟ್ಟರು. ಇದೀಗ ಗಣ್ಯರ ಸಮ್ಮುಖದಲ್ಲಿ ಮುಹೂರ್ತ ನೆರವೇರಿದೆ. ಮೊದಲನೆಯದಾಗಿ ಕಥೆಯೇ ನಾನು ಈ ಚಿತ್ರ ಒಪ್ಪಲು ಪ್ರಮುಖ ಕಾರಣ. ಇದು ಒಂದೇ ವಿಷಯವನ್ನು ತಲೆಯಲ್ಲಿಟ್ಟುಕೊಂಡು ಚಾಲೆಂಜ್ ಆಗಿ ಹುಡುಕಾಟ ನಡೆಸುವ ವಿಭಿನ್ನ ವ್ಯಕ್ತಿಯ ಪಾತ್ರ. ಗ್ಯಾಪ್ ಬಳಿಕ ಚಿತ್ರ ಮಾಡುತ್ತಿರುವುದೇನೋ ನಿಜ. ನಮ್ಮ ತಂದೆಯ ಮಾತಿನಂತೆ ಪ್ರತಿ ಸಿನಿಮಾಗಾಗಿ ಕೂಡ ನಾನು ಸಮರ್ಪಣಾಭಾವದಿಂದ ಕೆಲಸ ಮಾಡುತ್ತೇನೆ. ಆದರೆ ಈ ಬಾರಿ ಈ ಹಿಂದೆAದೂ ಮಾಡಿರದಂಥ ಪಾತ್ರ ಲಭಿಸಿರುವುದು ಮಾತ್ರ ನಿಜ. ಅದರಲ್ಲೂ ನಿರ್ದೇಶಕ ರಮೇಶ್ ಅವರು ಕಲಾವಿದರಿಂದ ಇದೇ ಬೇಕು ಹೇಳಿ ಕೆಲಸ ತೆಗೆಯಬಲ್ಲವರು. ಹಾಗಾಗಿ ಸಹಜವಾಗಿಯೇ ನಿರೀಕ್ಷೆಗಳಿವೆ ಎಂದರು.
ಜನಪ್ರಿಯ ಚಿತ್ರ ‘ದಿಗ್ಗಜರು’ ಸಿನೆಮಾ ಕಾಲದಿಂದಲೇ ಚಿತ್ರರಂಗದೊAದಿಗೆ ಸಂಬAಧ ಇರಿಸಿದವರು ನಿರ್ದೇಶಕ ವೈ.ಬಿ. ರಮೇಶ್ ಕೋಟೆ. ಸಿನಿಮಾ, ಧಾರಾವಾಹಿ ಕ್ಷೇತ್ರದಲ್ಲಿ ಸಹ ನಿರ್ದೇಶಕರಾಗಿ ಅನುಭವ ಹೊಂದಿರುವ ರಮೇಶ್ ಅವರ ನಿರ್ದೇಶನದ ಪ್ರಥಮ ಚಿತ್ರ ಇದು. ಚಿತ್ರದ ಬಗ್ಗೆ ಮಾಹಿತಿ ನೀಡಿದ ಅವರು, ಇದು ಒಂದು ರಾತ್ರಿಯಲ್ಲಿ ನಡೆಯುವ ಕಥೆ. ಅದನ್ನು 25 ರಾತ್ರಿಗಳಲ್ಲಿ ಚಿತ್ರೀಕರಿಸಲಿದ್ದೇವೆ.ಚಿತ್ರವನ್ನು ಹುಬ್ಬಳ್ಳಿ ಭಾಷೆಯಲ್ಲಿ ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ನಲ್ಲೇ ಚಿತ್ರೀಕರಿಸುವ ಯೋಜನೆ ಇತ್ತು. ಆದರೆ ಅಲ್ಲಿಗೆ ಹೋಗಿ ನೋಡಿದಾಗ ಜಾಗ ತುಂಬ ಬದಲಾಗಿತ್ತು. ಹಾಗಾಗಿ ಬೆಂಗಳೂರಲ್ಲೇ ಸರ್ಕಲ್ ಸೆಟ್ ಹಾಕಿ, ಬೆಂಗಳೂರಿನ ಕಥೆಯಾಗಿ ಚಿತ್ರ ಮಾಡಲಿದ್ದೇವೆ ಎಂದರು. ಚಿತ್ರದಲ್ಲಿ ನಾಯಕನ ಕಣ್ಣಮುಂದೆಯೇ ಮಿಸ್ ಆಗುವ ಹುಡುಗಿಯ ಹುಡುಕಾಟವಿದೆ. ಇದೇ ಸಂದರ್ಭದಲ್ಲಿ ಮತ್ತಂದೆಡೆ ಸಾಫ್ಟ್ ವೇರ್ ಹುಡುಗನ ಲಗೇಜ್, ಲ್ಯಾಪ್ಟಾಪ್ ಹುಡುಕಾಟವೂ ನಡೆದಿರುತ್ತದೆ. ಸಿನಿಮಾ ಪ್ರೇಕ್ಷಕರನ್ನು ಕುತೂಹಲದಿಂದ ನೋಡಿಸಿಕೊಂಡು ಹೋಗುತ್ತದೆ ಎಂದು ಭರವಸೆ ನೀಡಿದರು.ಸರ್ಚ್ನಲ್ಲಿ ಪಂಕಜ್ ಅವರ ಜೋಡಿಯಾಗಿ ನಟಿಸುತ್ತಿರುವುದು ಧಾಮಿನಿ. ನನ್ನದು ಮೂಲತಃ ಕೊಡಗು. ಪ್ರಸ್ತುತ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಮಾಂಗಲ್ಯ’ ಧಾರಾವಾಹಿಯಲ್ಲಿ ನಟಿಸುತ್ತಿದ್ದೇನೆ ಎಂದರು.
ನಟಿ ಕೃತ್ತಿಕಾ ಗೌಡ ಮಾತನಾಡಿ, ಈ ಚಿತ್ರದಲ್ಲಿನ ಪ್ರತಿಯೊಂದು ಪಾತ್ರವೂ ನನ್ನ ಪಾತ್ರದ ಸುತ್ತವೇ ಸುತ್ತುತ್ತಿರುತ್ತದೆ. ಅದರ ಕಾರಣ ತಿಳಿಯಬೇಕಾದರೆ ನೀವು ಸಿನೆಮಾ ನೋಡಬೇಕು. ನನಗೆ ನಿರ್ದೇಶಕ ರಮೇಶ್ ಅವರು ಕಿರುಚಿತ್ರವೊಂದರ ನಿರ್ದೇಶಕರಾಗಿ ಪರಿಚಯವಾದರು. ಈಗ ಅವರ ನಿರ್ದೇಶನದ ಸರ್ಚ್ ನಲ್ಲಿ ಪ್ರಧಾನ ಪಾತ್ರ ದೊರಕಿರುವುದು ಖುಷಿಯಾಗಿದೆ ಎಂದರು. ಇದು ತಾವು ನಟಿಸುತ್ತಿರುವ ಐದನೇ ಚಿತ್ರ ಎಂದರು.