LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

"ರಾಜ್ಯ ಮಟ್ಟದ ಉದ್ಯೋಗಾಕಾಂಕ್ಷಿಗಳ ಅಗ್ರಹ ಸಮಾವೇಶ"

ಸಮಾವೇಶ: ಚನ್ನಬಸವ ಜಾನೇಕಲ್ ಧಾರವಾಡ: ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ, ಕರ್ನಾಟಕದ ವತಿ ಯಿಂದ ೧೭ ಅಕ್ಟೋಬರ್ ೨೦೨೫ ಬೆಳಿಗ್ಗೆ
೧೦.೩೦ ಧಾರವಾಡದ ಕ.ವಿ.ವ. ಸಂಘದ ನಾಡೋಜ ಪಾಟೀಲ್ ಪುಟ್ಟಪ್ಪ ಸಭಾಭವನದಲ್ಲಿ ರಾಜ್ಯ ಮಟ್ಟದ ಉದ್ಯೋಗಾಕಾಂಕ್ಷಿಗಳ ಆಗ್ರಹ ಸಮಾವೇಶವನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಕರ್ನಾಟಕದ ರಾಜ್ಯ ಕಾರ್ಯದರ್ಶಿ ಚನ್ನಬಸವ ಜಾನೇಕಲ್ ತಿಳಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅತಿಥಿಗಳಾಗಿ ಮಾಜಿ ಲೋಕಾಯುಕ್ತರು, ಕರ್ನಾಟಕ ಹಾಗೂ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶರಾದ
ಜಸ್ಟೀಸ್ ಸಂತೋಷ್ ಹೆಗಡೆ ಮತ್ತು ಹಿರಿಯ ಸಾಮಾಜಿಕ ಹೋರಾಟಗಾರರು ಹಾಗೂ ಸಿಟಿಜನ್ಸ್ ಫಾರ್ ಡೆಮಾಕ್ರಸಿಯ ರಾಷ್ಟಿçÃಯ ಅಧ್ಯಕ್ಷರಾದ ಎಸ್. ಆರ್.
ಹಿರೇಮಠ ಆಗಮಿಸುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಯುವಜನತೆ ನಿರುದ್ಯೋ ಗದಿಂದ ಕಂಗಾಲಾಗಿದ್ದಾರೆ. ಉದ್ಯೋಗ ಪಡೆಯಲು ಅವಿರತ ಅಧ್ಯಯನ ಪರಿಶ್ರಮ
ನಡೆಸಿದರೂ ಸಹ ಯಾವುದೇ ನೇಮಕಾತಿ ಪ್ರಕ್ರಿಯೆಗಳು ನಡೆಯದೇ ಬೇಸತ್ತಿದ್ದಾರೆ.

ಭವಿಷ್ಯದ ಬಗ್ಗೆ ಭರವಸೆ ಕಳೆದುಕೊಂಡು ಸಿನಿಕತೆಗೆ ಬಲಿಯಾಗುತ್ತಿದ್ದಾರೆ ಎಂದರು. ನಮ್ಮ ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಯಾವುದೇ ಪ್ರಯತ್ನ ಮಾಡಲಿಲ್ಲ. ಬಿಜೆಪಿ ಪಕ್ಷದ ವೈಫಲ್ಯಗಳನ್ನು ಎತ್ತಿ ತೋರಿಸುತ್ತಾ, ಕಾಂಗ್ರೆಸ್ ಪಕ್ಷವು ತಾನು ಅಧಿಕಾರಕ್ಕೆ ಬಂ
ದರೆ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ೨ ವರ್ಷ ೪ ತಿಂಗಳು ಕಳೆದರೂ ಸº ಒಳ ಮೀಸಲಾತಿ ನಿರ್ಧಾರದ ಹೆಸರಿನಲ್ಲಿ ಯಾವುದೇ ನೇಮಕಾತಿಯನ್ನು ಮಾಡಿಲ್ಲ. ತಾನು ನೀಡಿದ ಉದ್ಯೋಗದ ಗ್ಯಾರಂಟಿಯನ್ನು ಅಧಿಕಾರಕ್ಕೆ ಬಂದ ನಂತರ ಕಾರ್ಯ ರೂಪಕ್ಕೆ ತರುವುದೆಂದು ಯುವಜನತೆ ನಿರೀಕ್ಷೆಯಲ್ಲಿದ್ದರು. ಆದರೆ ಅವರ ನಿರೀಕ್ಷೆ ಹುಸಿಯಾಗಿದೆ ಎಂದರು. ೨೦೨೫-೨೬ನೇ ಸಾಲಿಗೆ ರಾಜ್ಯದ ೪೩ ಇಲಾಖೆಗಳಲ್ಲಿ ೨,೮೪,೮೮೧ ಹುದ್ದೆಗಳು ಖಾಲಿ ಬಿದ್ದಿವೆ.

ಅವುಗಳ ನೇಮಕಕ್ಕೆ ಕಿಂಚಿತ್ತೂ ಪ್ರಯತ್ನಗಳು ನಡೆಯುತ್ತಿಲ್ಲ. ಒಂದಿಲ್ಲೊAದು ನೆಪಗಳನ್ನು ಹೇಳುತ್ತಾ ನೇಮಕಾತಿಗಳನ್ನು ಮುಂದೂಡಲಾಗುತ್ತಿದೆ. ರಾಜ್ಯದ ಎಲ್ಲೆಡೆ ಲಕ್ಷಾಂತರ ಉದ್ಯೋಗಾಕಾಂಕ್ಷಿ ಯುವಜನರು ಸರ್ಕಾರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬಹುದು ಎಂದು ಹಲವಾರು ವರ್ಷಗಳಿಂದ ಪರೀಕ್ಷೆಗಳ ತಯಾರಿ ನಡೆಸುತ್ತಿದ್ದಾರೆ. ೪-೫ ವರ್ಷಗಳಿಂದ ನೇಮಕಾತಿಗಳೇ ನಡೆಯದಿರುವುದರಿಂದ ಅದೆಷ್ಟೋ ಯುವಜನರು ತಮ್ಮ ಅರ್ಹತಾ ವಯಸ್ಸನ್ನು ಮೀರಿದ್ದಾರೆ. ಉದ್ಯೋಗದ ಭರವಸೆಯಿಲ್ಲದೆ ಯುವಜನರು ಆತ್ಮಹತ್ಯೆಯಂತಹ ಕಠಿಣ, ನೋವಿನ ನಿರ್ಧಾರಕ್ಕೆ ಮೊರೆಹೋಗುತ್ತಿದ್ದಾರೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು