LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ವಿದ್ಯಾರ್ಥಿನಿ ಜ್ಞಾನೇಶ್ವರಿ ಭಾಗಿ

ಬೇಲೂರು: ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ತಾಲೂಕಿನ ಜನರು ಸಾಧನೆ ಮಾಡುತಿದ್ದಾರೆ. ಅದೇ ರೀತಿ ಕ್ರೀಡಾ ಕ್ಷೇತ್ರದಲ್ಲಿ ಅರೇಹಳ್ಳಿ ಮಲ್ನಾಡ್ ಆಂಗ್ಲಾ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಜ್ಞಾನೇಶ್ವರಿ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸುತ್ತಿರುವುದು ನಮಗೆ ಹೆಮ್ಮೆ ತರಿಸಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಹೆಳಿದರು.

ಶಾಲಾ ಶಿಕ್ಷಣಾ ಹಾಗೂ ಸಾಕ್ಷರತಾ ಇಲಾಖೆಯಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಆಯೋಜಿಸಿರುವ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಬಾಗವಹಿಸಲು ತೆರಳುತ್ತಿರುವ ವಿದ್ಯಾರ್ಥಿನಿ ಜ್ಞಾನೇಶ್ವರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟು ಮಾತನಾಡಿದ ಅವರು, ಇತ್ತೀಚಿನ ವರ್ಷ ಹಾಗೂ ದಿನಗಳಲ್ಲಿ ಬೇಲೂರು ತಾಲೂಕಿನಲ್ಲಿ ಸಾಕಷ್ಟು ಕ್ರೀಡಾಪಟುಗಳು ವಿವಿಧ ಕ್ರೀಡೆ ಹಾಗೂ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯೊಂದಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿ ಕೊಳ್ಳುತ್ತ ಬೇಲೂರಿಗೆ ಕೀರ್ತಿ ತಂದಿದ್ದಾರೆ.

ಅದೇ ರೀತಿ ಕೆಲ ದಿನಗಳ ಹಿಂದೆ ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ತಾಲೂಕಿನ ಅರೇಹಳ್ಳಿ ಮಲ್ನಾಡ್ ಆಂಗ್ಲಾ ಮಾಧ್ಯಮ ಶಾಲೆ ವಿದ್ಯಾರ್ಥಿನಿ 14 ವರ್ಷದೊಳಗಿನ ವಿಭಾಗದ ಉದ್ದ ಜಿಗಿತದಲ್ಲಿ ರಾಜ್ಯಕ್ಕೆ ಪ್ರಥಮ ಸ್ತಾನ ಪಡೆದಿದ್ದು, ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲೂ ಉತ್ತಮ ಸಾಧನೆ ಮಾಡಲಿ. ಮತ್ತು ಸ್ಪೂರ್ತಿ ತುಂಬುವ ಉದ್ದೇಶದಿಂದ ಬಾಲಕಿಯನ್ನು ಇಲಾಖೆಯಿಂದ ಸನ್ಮಾನಿಸಿ ಶುಭಕೋರಿ ಕಳುಹಿಸಿ ಕೊಡುತಿದ್ದೇವೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ದೈಹಿಕ ಶಿಕ್ಷಣ ಪರಿವೀಕ್ಷಕ ಪಾಲಾಕ್ಷ ಮೂರ್ತಿ ಮಾತನಾಡಿ, ಶಾಲಾ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಉಡುಪಿಯಲ್ಲಿನ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ತಾಲೂಕಿನ ಅರೇಹಳ್ಳಿ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಜ್ಞಾನೇಶ್ವರಿ, ಉದ್ದ ಜಿಗಿತದಲ್ಲಿ ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಿರ್ತಿ ತಂದಿದ್ದಾರೆ. ನಾಳೆಯಿಂದ ಉತ್ತರ ಪ್ರಧೇಶದಲ್ಲಿ ನಡೆಯಲಿರುವ ಕ್ರೀಡಾ ಕೂಟದಲ್ಲಿ ಬಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯ, ಜಿಲ್ಲೆ, ತಾಲೂಕಿಗೆ ಕೀರ್ತಿ ತರುವಂತ್ತಾಗಲಿ ಎಂದರು.

ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶಿವಮರಿಯಪ್ಪ, ಅರೇಹಳ್ಳಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪವಿತ್ರ, ತರಬೇತುದಾರ ಜ್ಯೂಲ್ಫಿ, ಇಸಿಒಗಳಾದ ರವಿಕುಮಾರ್, ಮಂಜುನಾಥ್, ಬಿಆರ್‍ಪಿ ಮಂಜುನಾಥ್, ವಿಶ್ವನಾಥ್ ಸೇರಿದಂತೆ ಸಿಬ್ಬಂದಿ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು