LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯಶಸ್ವಿಯಾಗಿ ಪೂರ್ಣಗೊಂಡ ಉಚಿತ ಮಕ್ಕಳ ಶಿಬಿರ

ಬೆಂಗಳೂರು: ಉತ್ತರಹಳ್ಳಿ ಕುಸುಮ ಪುತ್ರಿ ವಾಸವಿ ಮಂಡಳಿಯವರ ಆಶ್ರಯದಲ್ಲಿ ಆಯೋಜಿಸಿದ್ದ 10 ದಿನಗಳ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಉಚಿತ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಹಾಗೂ ಮಕ್ಕಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.

ಸಮಾರೋಪ ಸಮಾರಂಭದಲ್ಲಿ ವಾಸವಿ ದೇವಸ್ಥಾನದ ಕಮಿಟಿ ಅಧ್ಯಕ್ಷರಾದ ಶ್ರೀಯುತ. ರಮೇಶ್ ಬಾಬು , ಅಖಿಲ ಕರ್ನಾಟಕ ಆರ್ಯ ವೈಶ್ಯ ಮಹಿಳಾ ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀಮತಿ ಸುಧಾ ಮೂರ್ತಿ, ಕೋಶಾಧ್ಯಕ್ಷರಾದ ಶ್ರೀಮತಿ ಶ್ರೀವಿದ್ಯಾ ಅವರು, ಆರ್ಯ ವೈಶ್ಯ ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ರಾದ ಶ್ರೀಮತಿ ವತ್ಸಲಾ ಮದನ್ ಅವರು, ಬೆಂಗಳೂರು ಆರ್ಯ ವೈಶ್ಯ ಮಹಿಳಾ ಮಂಡಳಿಗಳ ಒಕ್ಕೂಟದ ಕೋಶಾಧ್ಯಕ್ಷರಾದ ಶ್ರೀಮತಿ ಸಿ ಪಿ ರಾಧಾರವರು ಉಪಸ್ಥಿತರಿದ್ದರು.

ಈ ಶಿಬಿರದ ಮುಖ್ಯ ಆಯೋಜಕರಾದ ಶ್ರೀಮತಿ ಮಾಧವಿ ಹರಿನಾಥ್ ರವರು ಮಾತನಾಡಿ ಬೇಸಿಗೆ ಶಿಬಿರವು ವಿಶೇಷವಾಗಿ ರಚಿಸಲಾದ ಕಾರ್ಯಕ್ರಮವಾಗಿದ್ದು, ಮಕ್ಕಳ ಪ್ರತಿಭೆಗೆ ವೇದಿಕೆ ಒದಗಿಸುವುದರ ಜೊತೆಗೆ ವ್ಯಕ್ತಿತ್ವ ರೂಪಿಸುವುದಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿತ್ತು. ಬೇಸಿಗೆ ಬಂದರೆ ಮಕ್ಕಳು ಕೇವಲ ಟಿವಿ ಮೊಬೈಲ್ ಟ್ಯಾಬ್ ಗಳ ಮುಂದೆ ಕುಳಿತು ತಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುವುದರ ಜೊತೆಗೆ ತಮ್ಮ ಕ್ರಿಯಾಶೀಲತೆಯನ್ನು ಕಳೆದುಕೊಳ್ಳುತ್ತಿರುವುದು ಖೇದದ ಸಂಗತಿ.

ಈ ಕೊರತೆಯನ್ನು ನೀಗಿಸಲು ಮತ್ತು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ದೃಷ್ಟಿಯಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಮಕ್ಕಳು ಅತಿ ಉತ್ಸಾಹದಿಂದ ಭಾಗವಹಿಸಿದ್ದರು. 66 ಮಕ್ಕಳು ಭಾಗವಹಿಸಿದ್ದ ಈ ಹತ್ತು ದಿನದ ಶಿಬಿರದಲ್ಲಿ ಕಥೆ ಹೇಳುವ ಕಾರ್ಯಕ್ರಮ-ಶ್ಲೋಕಗಳು-ಭಗವದ್ಗೀತೆ ಪಠನೆ-ಯೋಗ-ದೇಶಭಕ್ತಿ ಗೀತೆ ಗಾಯನ- ಸಂಗೀತ- ನೃತ್ಯ- ಗಣಿತ ಕಸರತ್ತು- ಪೇಟಿಂಗ್ ಇತ್ಯಾದಿಗಳನ್ನು ಭೋದಿಸಲಾಯಿತು ಎಂದರು.

ಪಾರಿಜಾತ ,ಆಶ್ರವಿ ,ಸುಚಿತ್ರ ಶ್ರೀರೇಖಾ ದೀಪಿಕಾ ,ನಾಗವಿಶ್ವಾಸ್ ರಜಿತ ಮತ್ತು ಜ್ಯೋತಿ ಯವರು ಮಕ್ಕಳಿಗೆ ವಿಶೇಷ ಜ್ಞಾನದ ತರಬೇತಿಯನ್ನು ನೀಡಿದರು.
ಉತ್ತರಹಳ್ಳಿ ಕುಸುಮ ಪುತ್ರಿ ವಾಸವಿ ಮಂಡಳಿಯ ಕಾರ್ಯದರ್ಶಿ ಗೀತಾ ರಘು, ಖಜಾಂಚಿ ವಿನುತಾ ಪ್ರಕಾಶ ಮತ್ತು ಇತರೆ ಸಂಸ್ಥೆಯ ಸದಸ್ಯರು ಈ 10 ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು