LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಸಾರ್ವಜನಿಕ ಶೌಚಾಲಯಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರ ದಿಢೀರ್ ಭೇಟಿ

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಇಂದು ನಗರಸಭಾ ಅಧಿಕಾರಿಗಳೊಂದಿಗೆ ಚಾಮರಾಜನಗರ ಪಟ್ಟಣದಲ್ಲಿರುವ ಸಾರ್ವಜನಿಕ ಹಾಗೂ ಸಮುದಾಯ ಶೌಚಾಲಯಗಳಿಗೆ ದಿಢೀರ್ ಭೇಟಿ ನೀಡಿ ಶೌಚಾಲಯಗಳ ಸ್ವಚ್ಚತೆ ಹಾಗೂ ನಿರ್ವಹಣೆಯನ್ನು ಪರಿಶೀಲಿಸಿದರು.

ನಗರದ ನ್ಯಾಯಾಲಯ ರಸ್ತೆ, ತಾಲ್ಲೂಕು ಕಚೇರಿ, ಸರ್ಕಾರಿ ಆಸ್ಪತ್ರೆ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಹತ್ತಿರ, ಸಂತೇಮರಹಳ್ಳಿ ವೃತ್ತ, ದೊಡ್ಡಂಗಡಿ ಬೀದಿ ವೃತ್ತ, ಹಳೆ ಬಸ್ ನಿಲ್ದಾಣ, ಮಾರ್ಕೆಟ್ ಹತ್ತಿರ ಹಾಗೂ ಸತ್ತಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ನಿರ್ವಹಣಾ ವ್ಯವಸ್ಥೆಯನ್ನು ವೀಕ್ಷಿಸಿದರು.

ಚಾಮರಾಜನಗರ ಪಟ್ಟಣದಲ್ಲಿ ಚಾಲ್ತಿಯಲ್ಲಿರುವ ಸಾರ್ವಜನಿಕ ಹಾಗೂ ಸಮುದಾಯ ಶೌಚಾಲಯಗಳನ್ನು ಉತ್ತಮ ಜನೋಪಯೋಗಿಯಾಗಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಶೌಚಾಲಯಗಳ ಸ್ವಚ್ಚತೆ ಬಗ್ಗೆ ಗಮನಹರಿಸಬೇಕು. ಶೌಚಾಲಯಗಳ ಕಟ್ಟಡದ ದುರಸ್ತಿಗೆ ಸಕಾಲದಲ್ಲೇ ಅಗತ್ಯ ಕ್ರಮ ಕೈಗೊಂಡು ಸುತ್ತಮುತ್ತಲಿನ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ವಹಣೆ ಮಾಡಲು ಕ್ರಮ ವಹಿಸುವಂತೆ ನಗರಸಭಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರಸಭೆಯ ಪರಿಸರ ಅಭಿಯಂತರರಾದ ಗಿರಿಜಮ್ಮ, ಹಿರಿಯ ಆರೋಗ್ಯ ನಿರೀಕ್ಷಕರಾದ ಮಂಜುನಾಥ್, ಸುಷ್ಮಾ, ಆರೋಗ್ಯ ನಿರೀಕ್ಷಣಾಧಿಕಾರಿ ನಾರಾಯಣಸ್ವಾಮಿ, ಇತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು