LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Tumakuru

ತುಮಕೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ..?

ಬೆಂಗಳೂರು: ಈಗಾಗಲೇ ಲೋಕಸಭೆ ಚುನಾವಣೆ ಸಂಬಂಧ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ತೀವ್ರ ಕಸರತ್ತು ನಡೆದಿದ್ದು, ಅಭ್ಯರ್ಥಿಗಳ ಆಯ್ಕೆಗಾಗಿ ಪಕ್ಷದ ವರಿಷ್ಠರು ಅಂತಿಮವಾಗಿ ಕಣಕ್ಕಿಳಿಯುವ ಅಭ್ಯರ್ಥಿಗಳ ಆಯ್ಕೆಗಾಗಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ತುಮಕೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಾ ಕಣಕ್ಕಿಳಿಯಲು ಇಬ್ಬರು ಮಾಜಿ ಸಚಿವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವ ಬೆನ್ನಲ್ಲೇ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪಕ್ಷದ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಮಾಜಿ ಸಚಿವರಾದ ವಿ. ಸೋಮಣ್ಣ ಜೆ.ಸಿ. ಮಾಧುಸ್ವಾಮಿ ಅವರನ್ನು ಹೊರತುಪಡಿಸಿ ಮತ್ತೊಬ್ಬರನ್ನು ಕಣಕ್ಕಿಳಿಸಲು ಯತ್ನಿಸಿರುವ ಬಿಜೆಪಿ ನಾಯಕರು ಮೂರನೇ ಅಭ್ಯರ್ಥಿ ಹೆಸರು ಮತ್ತು ಅವರ ಪೂರ್ವ ಪರಗಳನ್ನು ಪರಿಶೀಲನೆ ನಡೆಸಲು ನಿನ್ನೆಯಿಂದ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಈ ಹಿಂದೆ 1996ರಲ್ಲಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಎದುರಾದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಲು ಅನುಸರಿಸಿದ ಸೂತ್ರವನ್ನು ಇದೀಗ ಬಿಜೆಪಿಯವರು ಅನುಸರಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ರಾಜ್ಯ ಬಿಜೆಪಿ ಪದಾಧಿಕಾರಿಗಳಲ್ಲಿ ಒಬ್ಬರಾಗಿರುವ ಮಹಿಳಾ ಘಟಕದಲ್ಲಿ ಗುರುತಿಸಿಕೊಂಡಿರುವ ತುಮಕೂರಿನ ಮಾಜಿ ವಿಧಾನಪರಿಷತ್ ಸದಸ್ಯ ಡಾ. ಹುಲಿನಾಯ್ಕರ್ ಅವರ ಪುತ್ರಿ ಅಂಬಿಕ ಹುಲಿನಾಯ್ಕರ್ ಅವರನ್ನು ಕಣಕ್ಕಿಳಿಸಿದರೆ ಹೇಗೆ ಎಂಬ ಲೆಕ್ಕಾಚಾರದಲ್ಲಿ ಬಿಜೆಪಿವರು ಇದ್ದಾರೆ ಎನ್ನಲಾಗಿದೆ.

ಈಗಾಗಲೇ ಹಾಲಿ ಸಂಸದ ಜಿ.ಎಸ್. ಬಸವರಾಜು ಅವರು ಚುನಾವಣೆ ನಿವೃತ್ತಿ ಘೋಷಿಸಿರುವುದರಿಂದ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿರುವ ಬಿಜೆಪಿಯವರು ಇಬ್ಬರು ಮಾಜಿ ಸಚಿವರ ಪೈಪೋಟಿಯಲ್ಲಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮಾಡುತ್ತಿರುವ ಯತ್ನ ಫಲಿಸುವುದೇ ಎಂಬುದನ್ನು ಕಾದು ನೋಡಬೇಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು