LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸೂಪರ್ ಓವರ್ ಬಳಿಕ ಸೂರ್ಯವಂಶಿ ಫೈಟ್

ಭಾರತ ಎ ಮತ್ತು ಶ್ರೀಲಂಕಾ ಎ ತಂಡಗಳ ನಡುವೆ ಮೈದಾನದಲ್ಲಿ ಜಗಳವಾ ಗಿರುವ ಘಟನೆ ಡಂಬುಲಾದಲ್ಲಿ ನಡೆದಿದೆ. ಟೈ ಆದ ಪಂದ್ಯವನ್ನು ಶ್ರೀಲಂಕಾ ತಂಡ ಸೂಪರ್ ಓವರ್ ನಲ್ಲಿ ಗೆದ್ದುಕೊಂಡ ಬಳಿಕ ಭಾರತದ ವೈಭವ್ ಸೂರ್ಯವಂಶಿ ಮತ್ತು ಶ್ರೀಲಂಕಾದ ಆಟಗಾರನ ನಡುವೆ ಜಗಳವಾಗಿದ್ದು ಈ ಪಂದ್ಯ ಈ ರೀತಿ ಕೊನೆಗೊಳ್ಳಬಾರದಿತ್ತು ಎಂದು ಮಾತನಾಡಿಕೊಳ್ಳುವಂತಾಗಿದೆ.ಇನ್ನು ಪಂದ್ಯ ಮುಗಿದ ಕ್ಷಣದಿಂದಲೇ ಅಂಪೈರ್‌ಗಳೊಂದಿಗೆ ಸತತ ಜಗಳಕ್ಕಿಳಿದ ತಂಡದ ನಾಯಕ ತಿಲಕ್ ವರ್ಮಾ ಅವರೇ ಈ ಜಗಳಕ್ಕೆ ಕೆಟ್ಟ ಮುನ್ನುಡಿ ಬರೆದಿದ್ದರು. ಇದು ಸಹ ಬಹಳಷ್ಟು ಬೇಸರಕ್ಕೆ ಕಾರಣವಾಯಿತು. ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡುವ ಆಟಗಾರರು ತಾಳ್ಮೆ ಕಳೆದುಕೊಂಡರೆ ಹೇಗೆ ಎಂಬ ಪ್ರಶ್ನೆಯೂ ಉದ್ಭವಿಸಿತು.ವೈಭವ್ ಡ್ರೆಸ್ಸಿಂಗ್ ಕೋಣೆಗೆ ಹಿಂತಿರುಗುತ್ತಿದ್ದಾಗ, ಶ್ರೀಲಂಕಾದ ಆಟಗಾರರೊಬ್ಬರು ಅನಗತ್ಯವಾಗಿ ಅವರನ್ನು ಮತ್ತೆ ನಿಂದಿಸಿದರು. ಅದು ಮಿತಿ ಮೀರಿತು. ವೈಭವ್ ಅದಕ್ಕೆ ಪ್ರತಿಕ್ರಿಯಿಸುವ ಮೂಲಕ ಸರಿಯಾದ ಕೆಲಸವನ್ನು ಮಾಡಿದರು.ರಂಗಿರಿ ಡಂಬುಲಾದ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜೂನ್ 15ರ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎ ತಂಡ 48.2 ಓವರ್ ಗಳಲ್ಲಿ 265 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಶ್ರೀಲಂಕಾ 9 ವಿಕೆಟ್ ಕಳೆದುಕೊಂಡು ಅಷ್ಟೇ ರನ್ ಗಳನ್ನು ಪೇರಿಸಲು ಶಕ್ತವಾಯಿತು. ಪಂದ್ಯ ಟೈ ಆಗಿದ್ದರಿಂದ ಸೂಪರ್ ಓವರ್ ಆಡಿಸಲಾಯಿತು. ಈವೇಳೆ ಲಂಕಾ ತಂಡ 1 ಓವರ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 16 ರನ್ ಪೇರಿಸಿತು. ಭಾರತ ಕೇವಲ 9 ರನ್ ಅಷ್ಟೇ ಗಳಿಸಲು ಸಾಧ್ಯವಾಯಿತು. ಹೀಗಾಗಿ ಶ್ರೀಲಂಕಾ ವಿಜಯಿ ಎಂದು ಘೋಷಿಸಲಾಯಿತು.ಈ ಸೋಲಿನಿಂದಾಗಿ ಇಂಡಿಯಾ 'ಎ' ತಂಡವು ಫೈನಲ್ ತಲುಪುವ ಅವಕಾಶವನ್ನು ಕೈತಪ್ಪಿಸಿಕೊಳ್ಳುವ ಅಪಾಯದಲ್ಲಿದೆ. ಪಂದ್ಯಾವಳಿಯಲ್ಲಿ ತಂಡವು ಈಗ ಸತತ ಎರಡು ಪಂದ್ಯಗಳನ್ನು ಸೋತಿದ್ದು, ಜೂನ್ 17 ರಂದು ಅಫ್ಘಾನಿಸ್ತಾನ 'ಎ' ವಿರುದ್ಧ ನಡೆಯಲಿರುವ ಮುಂದಿನ ಪಂದ್ಯವು ಅತ್ಯಂತ ನಿರ್ಣಾಯಕವಾಗಿದೆ.ಪಂದ್ಯದ ಬಳಿಕ ಏನಾಯ್ತು?ಸೂಪರ್ ಓವರ್ ಮುಕ್ತಾಯದ ಬೆನ್ನಲ್ಲೇ, 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ತೀವ್ರ ಕೋಪಗೊಂಡು ಶ್ರೀಲಂಕಾದ ಆಟಗಾರನೊಂದಿಗೆ ತೀವ್ರ ವಾಗ್ವಾದಕ್ಕಿಳಿದರು. ತಾಳ್ಮೆ ಕಳೆದುಕೊಂಡ ವೈಭವ್ ಸೂರ್ಯವಂಶಿ ಎದುರಾಳಿ ಆಟಗಾರನನ್ನು ತಳ್ಳುತ್ತಿರುವುದು ಮತ್ತು ಇಬ್ಬರ ನಡುವೆ ಕಟು ಮಾತುಗಳ ವಿನಿಮಯ ನಡೆದಿರುವುದು ಗೋಚರವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು