LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

`ಹೃದಯ ಸಂಬಂಧಿ ಕಾಯಿಲೆ ತಡೆಗೆ ದಿನ ವಾಕ್ ಮಾಡಿ'

ಬೆಂಗಳೂರು: ಪ್ರತಿ ದಿನ ಬೆಳಗಿನ ಜಾವ ವಾಕ್, ವ್ಯಾಯಾಮ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆ ತಡೆಯಬಹುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ನಾಗಮಂಗಲದ ಬಿ.ಜಿ.ಎಸ್ ವಾಕಾಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮೊದಲು 60 ವರ್ಷ ಮೇಲ್ಪಟ್ಟವರಲ್ಲಿ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಳ್ಳುತ್ತಿತ್ತು, ಇಂದಿನ ಜನರ ಜೀವನ ಶೈಲಿ ಬದಲಾಗಿದ್ದು, ಚಿಕ್ಕ ಮಕ್ಕಳಲ್ಲೂ ಹೃದಯ ಸಂಬಂಧಿ ಕಾಯಿಲೆ ಕಾಣುತ್ತಿದೆ. ಇದನ್ನು ತಡೆಯಲೂ ಚಿಕ್ಕ ವಯಸ್ಸಿನಿಂದಲೇ ನಡಿಗೆಯನ್ನು ರೂಢಿಸಿಕೊಳ್ಳಬೇಕು.

ಮಕ್ಕಳು ತಮ್ಮ ಮನೆಯಲ್ಲಿರುವ ಪೋಷಕರಿಗೂ ಬೆಳಗಿನ ಸಮಯ ನಡಿಗೆಯ ಅಭ್ಯಾಸ ಮಾಡಿಸಬೇಕು ಎಂದರು.ನಿತ್ಯ ಜೀವನದಲ್ಲಿ ನಡಿಗೆ ಇರಲಿ. ಪ್ರತಿದಿನ ಸಮಯ ಸಿಕ್ಕಾಗೆಲ್ಲಾ ನಡಿಗೆಯಲ್ಲಿ ನಿಮ್ಮ ದಿನ ಆರಂಭಿಸಿ. ಇದರಿಂದ ಹೃದಯ ಸಂಬಂಧಿ ಕಾಯಿಲೆ ಹಾಗೂ ಆರೋಗ್ಯ ಪೂರ್ಣ ಜೀವನ ನಿಮ್ಮದಾಗುತ್ತದೆ ಎಂದರು.

ಹಣ, ಅಧಿಕಾರ, ಆಸ್ತಿಯಿಂದ ಮನುಷ್ಯ ಆರೋಗ್ಯವಾಗಿರಲು ಸಾಧ್ಯವಿಲ್ಲ. ಪ್ರತಿಧಿನ ನೀವು ನಡೆಯುವ ನಡಿಗೆ ಆರೋಗ್ಯದ ಜೊತೆಗೆ ಎಲ್ಲವನ್ನೂ ತಂದುಕೊಡುತ್ತದೆ ಎಂದರು.ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದ ಮಹಾಸ್ವಾಮೀಜಿ ಅವರು ಮಾತನಾಡಿ ನಾವು ಮಾಡುವ ತಪ್ಪುಗಳನ್ನು ದೇವರು ಕ್ಷಮಿಸಬಹುದು. ವ್ಯಾಯಮ, ಯೋಗ, ನಡಿಗೆ ಮಾಡದಿದ್ದರೆ ದೇಹದ ಜೀವಕೋಶ ಕ್ಷಮಿಸುವುದಿಲ್ಲ. ಉತ್ತಮ ಆರೋಗ್ಯಕ್ಕಾಗಿ ವಾಕ್ ಮಾಡಿ ಎಂದರು.

ನಾವು ವಿವಿಧ ರೀತಿಯ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ನೋಡಿ ಸಂತೋಷ ಪಡುತ್ತೇವೆ.ಪಾಲ್ಗೊಳ್ಳಲು ಸೋಮರಿತಾನದಿಂದ ಹಿಂದೇಟು ಹಾಕುತ್ತೇವೆ. ಈ ಮನಸ್ಥಿತಿಯನ್ನು ದೂರಮಾಡಿಕೊಳ್ಳಬೇಕು ಎಂದರು.ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಹೃದಯ ಸಂಬಂಧಿ ಕಾಯಿಲೆಗೆ ತಕ್ಕಂತೆ ಸುಸಜ್ಜಿತ ಕಟ್ಟಡವುಳ್ಳ ಆಸ್ಪತ್ರೆ ನಿರ್ಮಿಸಿದೆ. ಅತ್ಯುತ್ತಮ ಯಂತ್ರೋಪಕರಣಗಳೊಂದಿಗೆ ವೈದ್ಯಕೀಯ ಚಿಕಿತ್ಸೆ ಸಿಗುತ್ತದೆ ಎಂದರು.

ವಾಕಾಥಾನ್ ನಲ್ಲಿವ 12 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. 6 ಕಿ.ಮೀ ಕ್ಕೂ ಹೆಚ್ಚು ಕಿ.ಮೀ ನಡಿಗೆ ನಡೆಸಿದರು.
ಇದೇ ಸಂದರ್ಭದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪ್ರಸನ್ನನಂದನಾಥ ಸ್ವಾಮೀಜಿ, ಶ್ರೀ ಶಂಭುನಾಥನಂದ ಸ್ವಾಮೀಜಿ, ಶ್ರೀ ಮಂಗಳನಾಥನಂದ ಸ್ವಾಮೀಜಿ, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ: ಮೋಹನ್, ಚಲನಚಿತ್ರ ನಟ ಧನ್ವೀರ್ ಸೇರಿದಂತೆ ಇನ್ನಿತರ ಗಣ್ಯರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು