LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ತಮಿಳು ನಟ ವಿಜಯಕಾಂತ್ ನಿಧನ

ಚೆನ್ನೈ: ಡಿಎಂಡಿಕೆ ಮುಖ್ಯಸ್ಥ ಹಾಗೂ ನಟ ಕ್ಯಾಪ್ಟನ್ ವಿಜಯಕಾಂತ್ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಕೊರೊನಾ ಸೋಂಕು ತಗುಲಿ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಇದರಿಂದಾಗಿ ವಿಜಯಕಾಂತ್ ಅವರನ್ನು ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು.

ಆದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಕ್ಯಾಪ್ಟನ್ ವಿಜಯಕಾಂತ್ ಬೆಂಬಲಿಗರು ಮತ್ತು ಆತ್ಮೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.ವಿಜಯಕಾಂತ್ ಅವರ ನಿಜವಾದ ಹೆಸರು ವಿಜಯರಾಜ್. ನಟನೆಯಲ್ಲಿ ಸಾಕಷ್ಟು ಹೆಸರು ಗಳಿಸಿದ ನಂತರ ವಿಜಯಕಾಂತ್ ರಾಜಕೀಯ ಪ್ರವೇಶಿಸಿದರು.

ವಿಜಯಕಾಂತ್ 2011 ರಿಂದ 2016 ರವರೆಗೆ ತಮಿಳುನಾಡಿನ ವಿರೋಧ ಪಕ್ಷದ ನಾಯಕರಾಗಿದ್ದರು. ರಾಜಕೀಯಕ್ಕೆ ಬರುವ ಮುನ್ನ ವಿಜಯಕಾಂತ್ ಹಲವು ತಮಿಳು ಚಿತ್ರಗಳಲ್ಲಿ ನಟಿಸಿದ್ದರು. ನಟನೆಯ ಜೊತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು. 14 ಸೆಪ್ಟೆಂಬರ್ 2005 ರಂದು ತಮ್ಮದೇ ಆದ ಪಕ್ಷವನ್ನು ಕಟ್ಟಿ ಆ ಪಕ್ಷಕ್ಕೆ ದೇಸಿಯ ಮುಪೆರ್ಕ್ಕು ದ್ರಾವಿಡ ಕಳಗಂ (DMDK) ಎಂದು ಹೆಸರಿಟ್ಟರು.

ವಿಜಯಕಾಂತ್ ಅವರ ವೈಯಕ್ತಿಕ ಜೀವನವನ್ನು ನೋಡುವುದಾದರೆ ಅವರುಆಗಸ್ಟ್ 25, 1952 ರಂದು ಜನಿಸಿದ್ದು, ಮಧುರೈ ನಿವಾಸಿಯಾಗಿದ್ದರು. ಇವರ ತಂದೆಯ ಹೆಸರು ಕೆ.ಎನ್.ಅಲಗರಸ್ವಾಮಿ. ಅವರ ಪೂರ್ವಜರು ಆಂಧ್ರಪ್ರದೇಶ ಮೂಲದವರು. ವಿಜಯಕಾಂತ್ ಜನವರಿ 31, 1990 ರಂದು ಪ್ರೇಮಲತಾ ಅವರನ್ನು ವಿವಾಹವಾದರು. ಇವರ ಇಬ್ಬರು ಪುತ್ರರ ಹೆಸರು ವಿಜಯ್ ಪ್ರಭಾಕರ್ ಮತ್ತು ಷಣ್ಮುಗ ಪಾಂಡಿಯನ್.

ವಿಜಯಕಾಂತ್ ಅವರು ಮೊದಲಿನಿಂದಲೂ ನಟನೆಯತ್ತ ಒಲವು ಹೊಂದಿದ್ದರು ಎಂಬುದು ಗಮನಾರ್ಹ. ಚಿತ್ರರಂಗಕ್ಕೆ ಬಂದ ನಂತರ ವಿಜಯಕಾಂತ್ ತಮ್ಮ ಹೆಸರನ್ನು ಬದಲಾಯಿಸಿಕೊಂಡರು. ಅವರು ತಮ್ಮ ಮೂಲ ಹೆಸರಾದ ವಿಜಯ್ ರಾಜ್ ನಿಂದ ವಿಜಯ ಎನ್ನುವುದನ್ನು ಉಳಿಸಿಕೊಂಡು ರಾಜ್ ಬದಲಿಗೆ ಕಾಂತ್ ಎಂದು ಮಾಡಿಕೊಂಡರು. ಜನರೂ ಅವರನ್ನು ಪ್ರೀತಿಯಿಂದ ಕ್ಯಾಪ್ಟನ್ ಎಂದು ಕರೆಯತೊಡಗಿದರು. ಚಿತ್ರದಲ್ಲಿ ಕ್ಯಾಪ್ಟನ್ ಪ್ರಭಾಕರನ್ ಪಾತ್ರವನ್ನು ನಿರ್ವಹಿಸಿದ ನಂತರ ಅವರು ಕ್ಯಾಪ್ಟನ್ ಹೆಸರಿನಿಂದ ಪ್ರಸಿದ್ಧರಾದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು