LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ವಾಹನ ಸಮೇತ ಆರೋಪಿ ಸೆರೆ

ಗುಂಡ್ಲುಪೇಟೆ: ಜಿಂಕೆ ಹಾಗೂ ಕಾಡು ನಾಯಿಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಇನ್ನೋವಾ ಕಾರನ್ನು ಬೆನ್ನಟ್ಟಿದ ಅರಣ್ಯಾಧಿಕಾರಿಗಳು ವಾಹನ ಸಮೇತ ಆರೋಪಿಯನ್ನು ಬಂಧಿಸಿರುವ ಘಟನೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯ ಮದ್ದೂರು ಸಮೀಪದಲ್ಲಿ ನಡೆದಿದೆ.

ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿಯ ಸ್ಟೇಪ್ಪನ್ ಸನ್ನಿ ಬಂಧಿತ ಆರೋಪಿ. ಈತ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಮದ್ದೂರು ವಲಯದ ಹೆದ್ದಾರಿ ರಸ್ತೆಯಲ್ಲಿ ಗುಂಡ್ಲುಪೇಟೆಯಿಂದ ತನ್ನ ಇನೋವಾ ಕಾರು(ಕೆ.ಎಲ್-58 ಎಎಫ್-0331)ನಲ್ಲಿ ಕೇರಳ ಕಡೆ ವೇಗವಾಗಿ ಚಲಿಸಿದ್ದ ವೇಳೆ 5 ವರ್ಷದ ಕಾಡು ನಾಯಿ(ಡೋಲ್) ಹಾಗೂ 3 ವರ್ಷದ ಜಿಂಕೆಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿವೆ. ಇದರಿಂದ ಭಯಭೀತನಾದ ಕಾರು ಚಾಲಕ ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣ ಕಾರ್ಯ ಪ್ರೌವೃತ್ತರಾದ ಉಪ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಇನ್ನೋವಾ ಕಾರನ್ನು ಬೆನ್ನಟ್ಟಿ ಚಾಲಕನನ್ನು ಕಾರು ಸಮೇತ ಹಿಡಿದು ಬಂಧಿಸಿದ್ದಾರೆ.ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್.ಪ್ರಭಾಕರನ್ ಮಾರ್ಗದರ್ಶನದಂತೆ ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ ಬಂಧಿತ ಆರೋಪಿಯ ವಿಚಾರಣೆ ನಡೆಸಿದರು.

ನಂತರ ಮೃತ ಕಾಡು ನಾಯಿ ಹಾಗೂ ಜಿಂಕೆಯ ಕಳೆಬರವನ್ನು ಇಲಾಖಾ ಪಶು ವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ತದನಂತರ ಅರಣ್ಯ ಪ್ರದೇಶದಲ್ಲಿ ಪ್ರಕೃತಿಗೆ ಬಿಡಲಾಯಿತು. ಹಾಗೂ ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಈ ಸಂದರ್ಭದಲ್ಲಿ ಮದ್ದೂರು ವಲಯ ಅರಣ್ಯಾಧಿಕಾರಿ ಬಿ.ಎಂ.ಮಲ್ಲೇಶ್, ಉಪ ವಲಯ ಅರಣ್ಯಾಧಿಕಾರಿ ರವಿಕುಮಾರ್ ಸಂಗೂರ್, ಗಸ್ತು ವನಪಾಲಕರಾದ ಬಾಹುಬಲಿ, ಮಹಮ್ಮದ್ ನಡಾಫ್, ನವೀನ, ಜೀವನ್, ಮನು ಸೇರಿದಂತೆ ಇಲಾಖಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು