LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಲೋಕಸಭಾ ಸಮರ ದೊಡ್ಡ ಸತ್ವಪರೀಕ್ಷೆ ಬಿ.ಎಸ್.ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ಲೋಕಸಭಾ ಸಮರವುನಮ್ಮೆಲ್ಲರಿಗೆ ಬಹುದೊಡ್ಡ ತಿರುವಿನ ಸತ್ವ ಪರೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಅರಮನೆ ಮೈದಾನದಲ್ಲಿ ಇಂದು ಆರಂಭವಾದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು. 2019ರಲ್ಲಿ 26 ಸ್ಥಾನಗಳನ್ನು ಗೆಲ್ಲಲಾಗಿತ್ತು. ಇದು ಜನರ ಸಂಕಲ್ಪ ಶಕ್ತಿಯಾಗಿತ್ತು. ಈ ಬಾರಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿಯವರಿಗೆ ನಮ್ಮದೇ ಆದ ಕೊಡುಗೆ ನೀಡಬೇಕಿದೆ ಎಂದು ಮನವಿ ಮಾಡಿದರು.

ಜನರಿಗೆ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಕಲಹದಲ್ಲಿ ತೊಡಗಿದೆ. ಇವರ ಕಚ್ಚಾಟದಿಂದ ಅಧಿಕಾರ ಕುಸಿದುಬಿದ್ದಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆಕ್ಷೇಪಿಸಿದರು. ಇದರ ನಡುವೆಯೂ ಅವರು ದುರ್ಮಾರ್ಗದಲ್ಲಿ ಮತ ಗಳಿಸುವ ಕುತಂತ್ರ ನಡೆಸಿದ್ದಾರೆ. ಜನರಿಗೆ ವಾಸ್ತವ ಮನವರಿಕೆ ಮಾಡಿಕೊಡುವ ಸವಾಲು ನಮ್ಮ ಮುಂದಿದೆ ಎಂದು ತಿಳಿಸಿದರು.

ಜನರು ಈ ಸರಕಾರದ ಬಗ್ಗೆ ಬೇಸತ್ತು ಹಿಡಿಶಾಪ ಹಾಕುತ್ತಿದ್ದಾರೆ. ಈ ಸರಕಾರಕ್ಕೆ ಬರಗಾಲದಲ್ಲಿ ರೈತರ ಕಣ್ಣೀರು ಒರೆಸಲು ಆಗಿಲ್ಲ. ಹೆಣ್ಮಕ್ಕಳ ಮಾನ ರಕ್ಷಿಸಲು ಸಾಧ್ಯವಾಗಿಲ್ಲ. ಅರಾಜಕತೆ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಇದೆಲ್ಲವನ್ನು ನೋಡುತ್ತ ಸುಮ್ಮನಿರಲು ಅಸಾಧ್ಯ. ಜನರ ಪರವಾಗಿ, ರಾಜ್ಯದ ಪರವಾಗಿ ನಿಂತು ಹೋರಾಟ ಮಾಡೋಣ ಎಂದು ತಿಳಿಸಿದರು.

ಬಿಜೆಪಿಗೆ ಜಗದೀಶ ಶೆಟ್ಟರ್ ಸೇರಿದ್ದು, ನಮಗೊಂದು ದೊಡ್ಡ ಶಕ್ತಿಯನ್ನು ಕೊಟ್ಟಿದೆ. ಅವರಿಗೆ ವಿಶೇಷ ಸ್ವಾಗತ ಎಂದರು. ನೂತನ ರಾಜ್ಯ, ಜಿಲ್ಲಾ ಪದಾಧಿಕಾರಿಗಳನ್ನು ಅವರು ಅಭಿನಂದಿಸಿದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು