LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಉಡ ಬೇಟೆಯಾಡಿದ ವ್ಯಕ್ತಿ ಬಂಧನ

ಹನೂರು: ತಾಲ್ಲೂಕಿನ ಭದ್ರಳ್ಳಿ ಗ್ರಾಮದ ಸಣ್ಣಕಾಳ ಶೆಟ್ಟಿ ಎಂಬಾತನು ಅರಣ್ಯಕ್ಕೆ ಅಕ್ರಮ ಪ್ರವೇಶ ಮಾಡಿ ಉಡ ಬೇಟೆಯಾಡಿ ಕೊಂಡೊಯ್ಯುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಜರುಗಿದೆ.

ಕೌದಳ್ಳಿ ವನ್ಯಜೀವಿ ವಲಯ ವ್ಯಾಪ್ತಿಯ ವಲಯ ಅರಣ್ಯಾಧಿಕಾರಿ ಲೋಕೇಶ್ ಚೌಹಾಣ್, ಉಪವಲಯ ಅರಣ್ಯ ಅಧಿಕಾರಿ ಅನಂತರಾಮು .ಬಿ, ಗಸ್ತು ವನಫಲಕರಾದ ಭೀಮಪ್ಪ ಎಚ್ ದಾಸರ, ಶಿವರಾಜ್ ಡಿ, ಮಲ್ಲಿಕಾರ್ಜುನ ಭೀಮಪ್ಪ ಹಂಗರಗಿ, ಬಾಬು ಮತ್ತು ಕಳ್ಳ ಬೇಟೆ ಶಿಬಿರದ ಸಿಬ್ಬಂದಿಗಳಾದ ಬೆಟ್ಟಪ್ಪ, ಸಿದ್ದಪ್ಪಾಜಿ ಕಾವೇರಿ ವನ್ಯಜೀವಿಧಾಮದ ಕೌದಳ್ಳಿ ವನ್ಯಜೀವಿ ವಲಯ ವ್ಯಾಪ್ತಿಯ ಕೌದಳ್ಳಿ ಗಸ್ತಿನ ಮುನಿಗುಡಿ ಬಯಲು ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿ ಗಸ್ತು ಮಾಡುತ್ತಿದ್ದ .

ಸಂದರ್ಭದಲ್ಲಿ ತಾಲೂಕಿನ ಭದ್ರಯ್ಯನಹಳ್ಳಿ ಗ್ರಾಮದ ಸಣ್ಣಕಾಳ ಶೆಟ್ಟಿ ಅರಣ್ಯಕ್ಕೆ ಅಕ್ರಮ ಪ್ರವೇಶ ಮಾಡಿ ಉಡ ಬೇಟೆಯಾಡಿ, ಕೊಂಡೊಯ್ಯುತ್ತಿದ್ದ ವೇಳೆ ಆರೋಪಿಯನ್ನು ವಶಕ್ಕೆ ಪಡೆದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸುರೇಂದ್ರ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಂಕರಾಜುರವರ ಮಾರ್ಗದರ್ಶನದಲ್ಲಿ ಸದರಿಯವರ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯಿದೆಯಂತೆ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು