LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪಾಕ್ ತಂಡಕ್ಕೆ ಬಾಂಗ್ಲಾದಲ್ಲೂ ಮುಖಭಂಗ

ಐಸಿಸಿ ಟಿ20 ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಹಿನ್ನೆಲೆಯಲ್ಲಿ ತಮ್ಮ ದೇಶದ ಕ್ರಿಕೆಟ್ ಪ್ರೇಮಿಗಳಿಂದ ಈಗಾಗಲೇ ಛೀಮಾರಿ ಹಾಕಿಸಿಕೊಂಡಿರುವ ಪಾಕಿಸ್ತಾನ ತಂಡ ಇದೀಗ ಬಾಂಗ್ಲಾದೇಶ ಪ್ರವಾಸದ ಮೊದಲನೇ ಪಂದ್ಯದಲ್ಲೇ ಹೀನಾಯ ಸೋಲು ಕಂಡಿದೆ. ಮಧ್ಯಮ ವೇಗಿ ನಹೀದ್ ರಾಣಾ, ಸ್ಪಿನ್ನರ್ ಮೆಹೆದಿ ಹಸನ್ ಮಿರಾಜ್, ಬ್ಯಾಟರ್ ತಾನ್ಝಿದ್ ಹಸನ್ ಅವರ ಉತ್ತಮ ಪ್ರದರ್ಶನದ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ತಂಡವು ಏಕದಿನ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿತು.
ಪಾಕಿಸ್ತಾನ ತಂಡದ ಈ ಸೋಲು ಸಾಮಾಜಿಕ ಜಾಲತಾಣದಲ್ಲಿ ಬಹಳ ಟ್ರೋಲ್ ಆಗಿದೆ ಐಸಿಸಿ ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಆಟಗಾರರಿಗೆ ಪಾಕಿಸ್ತಾನ ಕ್ರಿಕಟ್ ಮಂಡಳಿಯು 50 ಲಕ್ಷ ರೂ ದಂಡ ವಿಧಿಸಿತ್ತು. ಇದೀಗ ಮತ್ತೆ 50 ಲಕ್ಷ ರೂಪಾಯಿ ದಂಡ ಹಾಕಿದರೆ ಪರಿಸ್ಥಿತಿ ಸುಧಾರಿಸಬಹುದು ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.
ಮಿರ್ಪುರದಲ್ಲಿ ನಡೆದ ಪ್ರಥಮ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಕೇವಲ 10.4 ಓವರ್ ಗಳಾಗುವಷ್ಟರಲ್ಲಿ 114 ರನ್ ಗಳಿಗೆ ಸರ್ವಪತನ ಕಂಡಿತು. ಇದಕ್ಕುತ್ತರವಾಗಿ ಬಾಂಗ್ಲಾದೇಶ ತಂಡ ಇನ್ನೂ 209 ಎಸೆತಗಳು ಬಾಕಿ ಇರುವಂತೆಯೇ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಬಾಂಗ್ಲಾದೇಶದ ಪರ ಆರಂಭಿಕ ಬ್ಯಾಟರ್ ತಾನ್ಝಿದ್ ಹಸನ್ ಕೇವಲ 42 ಎಸೆತಗಳಲ್ಲಿ 7 ಬೌಂಡರಿ ಮತ್ತು 5 ಸಿಕ್ಸರ್ ಗಳನ್ನೊಳಗೊಂಡ ಅಜೇಯ 67 ರನ್ ಬಾರಿಸಿದರು. ಅವರು ನಜ್ಮುಲ್ ಹೊಸೈನ್ (33 ಎಸೆತದಲ್ಲಿ 27 ರನ್) ಅವರೊಂದಿಗೆ 2ನೇ ವಿಕೆಟ್ ಗೆ 82 ರನ್ ಗಳ ಜೊತೆಯಾಟವಾಡಿದರು. ಅಲ್ಲಿಗೆ ಬಾಂಗ್ಲಾದೇಶದ ಗೆಲುವು ಪಕ್ಕಾ ಆಯಿತು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಪಾಕಿಸ್ತಾನ ತಂಡ ಮೆಹಿದಿ ಹಸನ್ ಮತ್ತು ನಹೀದ್ ರಾಣಾ ಅವರ ಮಾರಕ ಬೌಲಿಂಗ್ ಗೆ ತತ್ತರಿಸಿತು. ಆರಂಭಕಾರ ಸಹೀಬಾ ಝಾದಾ ಫರ್ಹಾನ್ (38 ಎಸೆತಗಳಲ್ಲಿ 27 ರನ್) ಮತ್ತು ಫಹೀಮ್ ಅಶ್ರಫ್ (47 ಎಸೆತಗಳಲ್ಲಿ 37 ರನ್) ಹೊರತುಪಡಿಸಿದರೆ ಬೇರಾವ ಆಟಗಾರ ಸಹ ನಿಂತು ಆಡಲು ಯಶಸ್ವಿಯಾಗಲಿಲ್ಲ. ಮಧ್ಯಮ ಕ್ರಮಾಂಕದ ಬ್ಯಾಟರ್ ಗಳ ತೀವ್ರ ವೈಫಲ್ಯದಿಂದಾಗಿ ತಂಡ 100ರ ಗಡಿ ದಾಟುವುದೇ ಕಷ್ಟಕರ ಎಂಬ ಪರಿಸ್ಥಿತಿ ಇತ್ತು. ಈ ಹಂತದಲ್ಲಿ ಫಹೀಮ್ ಅಶ್ರಫ್ ಅವರು ಕೊಂಚ ಪ್ರತಿರೋಧ ತೋರಿದ್ದರಿಂದ ಮೂರಂಕೆ ದಾಟಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು