LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಚಿನ್ನದ ಸರ ಕಳವು: ಸಿ-ರಿಪೋರ್ಟ್ ನಂತರ ಪತ್ತೆ

ಬೆಂಗಳೂರು: ಬಸವೇಶ್ವರನಗರದ ಕಮಲಾನಗರದಲ್ಲಿರುವ ದೇವಾಲಯದಲ್ಲಿ ಮಾರ್ಚ್ ತಿಂಗಳಿನಲ್ಲಿ ದೇವರ ವಿಗ್ರಹದ ಮೇಲಿದ್ದ ಚಿನ್ನದ ಸರ ಕಳವು ಪ್ರಕರಣ ದಾಖಲಾಗಿತ್ತು.ಈ ಪ್ರಕರಣವು ಪತ್ತೆಯಾಗದ ಕಾರಣ ಸಿ ವರದಿಯನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಇತ್ತೀಚೆಗೆ ಪೊಲೀಸರು ಠಾಣೆಯ ಶಂಕರ್ ಮಠ ರಸ್ತೆಯ ಸರಹದಿನಲ್ಲಿ ಗಸ್ತಿನಲ್ಲಿ ಇರುವಾಗ ಅನುಮಾನಾಸ್ಪದ ವ್ಯಕ್ತಿಯನ್ನು ಠಾಣೆಗೆ ತಂದು ತೀವ್ರ ವಿಚಾರಣೆ ನಡೆಸಿದಾಗ ತಾನು ಆ ದೇವಾಲಯದ ವಿಗ್ರಹದ ಮೇಲಿದ್ದ 12 ಗ್ರಾಂ ತೂಕದ ಸರ ಕಳವು ಮಾಡುತ್ತಿರುತ್ತೇನೆ ಎಂದು ಒಪ್ಪಿಕೊಂಡಿರುತ್ತಾನೆ.ಆರೋಪಿ ಸೈಯದ್38 ಅಹಮದ್ ನನ್ನು ಬಂಧಿಸಿ ತೀವ್ರ ವಿಚಾರಣೆ ಒಳಪಡಿಸಿದಾಗ ಬಸವೇಶ್ವರನಗರದಲ್ಲಿ ಮತ್ತೊಂದು ಮನೆ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ಹಾಗೂ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಎಂ ಒ ಬಿ ಶೀಟ್ ಅನ್ನು ಸಹ ಈ ಆರೋಪಿಯ ಮೇಲೆ ಓಪನ್ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿರುತ್ತದೆ.

ಈ ಸಂಬಂಧ ಇನ್ನು ಹೆಚ್ಚು ವಿಚಾರಣೆ ಮಾಡಿದಾಗ ಮೈಸೂರಿನ ವಿವಿಪುರಂಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.
ತದನಂತರ ವಿವಿಧ ಪ್ರಕರಣಗಳಲ್ಲಿ ಕಳವು ಮಾಡಿದ ಸುಮಾರು 650 ಗ್ರಾಂ ಚಿನ್ನಾಭರಣ, ವಜ್ರದ ಆಭರಣಗಳು ಮತ್ತು ಒಂದು ಕೆಜಿ ಬೆಳ್ಳಿ ಆಭರಣಗಳನ್ನು ಮಂಡ್ಯದ ಗುತ್ತಲ್ನ ಅವನ ಮನೆಯಲ್ಲಿ ವಶಪಡಿಸಿಕೊಂಡಿರುತ್ತಾರೆ .ಬಸವೇಶ್ವರನಗರ ಪೊಲೀಸರು ಇವುಗಳ ಮೌಲ್ಯ 38 ಲಕ್ಷ ಗಳಾಗಿರುತ್ತದೆ ಎಂದು ತಿಳಿಸಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು