LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಇಂದಿನ ಮಕ್ಕಳೇ ಮುಂದಿನ ವಿಜ್ಞಾನಿಗಳು: ಡಿಕೆ ಶಿವಕುಮಾರ್

ಕನಕಪುರ: ಇಂದಿನ ಯುವಕರೇ ನಾಳೆ ನಮ್ಮ ದೇಶದ ಹೆಮ್ಮೆಯ ವಿಜ್ಞಾನಿಗಳಾಗಿ ಹೊರಹೊಮ್ಮಲಿದ್ದು ಅವರನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಕೆಲಸವನ್ನು ನಾವುಗಳು ಮಾಡಬೇಕಾಗಿದೆ ಎಂದು ಡಿ ಸಿ ಎಂ ಡಿಕೆ ಶಿವಕುಮಾರ್ ತಿಳಿಸಿದರು.
ಕನಕೋತ್ಸವ ಅಂಗವಾಗಿ ನಗರದ ಸೆಂಟ್ ಥಾಮಸ್ ಶಾಲೆಯಲ್ಲಿ ಆಯೋಜಿಸಿಲಾಗಿರುವ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿ ಮಕ್ಕಳು ನಿ ತಯಾರಿಸಿರುವ ವಿಜ್ಞಾನದ ಪ್ರಾಯೋಗಿಕ ಮಾದರಿಗಳನ್ನು (ಪ್ರಾಜೆಕ್ಟ್ ಗಳನ್ನು) ವೀಕ್ಷಿಸಿ ಮಾತನಾಡಿದ ಅವರು ನಮ್ಮ ಮಕ್ಕಳ ವಿಜ್ಞಾನದ ಪ್ರಯೋಗಗಳು ಅಚ್ಚರಿ ಜೊತೆಗೆ ಹೆಮ್ಮೆಯನ್ನು ತಂದಿದ್ದು ಈ ವಿಜ್ಞಾನ ವಸ್ತು ಪ್ರದರ್ಶನವು ಸಮಾಜದ ಅಭಿವೃದ್ಧಿಗೆ ನವೀನ ಚಿಂತನೆಯ ಒಂದು ಉತ್ತಮ ವೇದಿಕೆಯಾಗಿದೆ, ಮಕ್ಕಳು ಬಹಳ ಉತ್ಸಾಹ ಹಾಗೂ ಸಂಭ್ರಮದಿAದ ತಮ್ಮ ಚಿಂತನೆಗಳನ್ನು ಅತ್ಯುತ್ತಮವಾಗಿ
ಪ್ರದರ್ಶಿಸಿದ್ದು ಅವರ ಮುಂದಿನ ಭವಿಷ್ಯ ಉಜ್ವಲವಾಗಿ ರಲಿ ಹಾಗೂ ದೊಡ್ಡ ವಿಜ್ಞಾನಿಗಳಾಗಿ ಬೆಳೆದು ತಾಲ್ಲೂಕಿಗೆ ರಾಜ್ಯಕ್ಕೆ, ದೇಶಕ್ಕೆ ಹೆಮ್ಮೆ ತರಲಿ ಎಂದು ಹಾರೈಸಿದರು.
ನಂತರ ಕನಕೋತ್ಸವ ವೇದಿಕೆಗೆ ಆಗಮಿಸಿ ವಾಯ್ಸ್ ಆಪ್ ಕನಕೋತ್ಸವದಲ್ಲಿ ಭಾಗಿಯಾಗಿ ಮಕ್ಕಳ ಗಾಯನ ವೀಕ್ಷಿಸಿ ವಿಜೇತರಿಗೆ ಬಹುಮಾನವನ್ನು ವಿತರಣೆ ಮಾಡಿ ಸಮಾರಂಭಕ್ಕೆ ಆಗಮಿಸಿದ ಪಕ್ಷದ ಮುಖಂಡರಿಗೆ ಸನ್ಮಾನಿಸಿ ಗೌರವಿಸಿದರು,ದಂಪತಿಗಳ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ ಹಾಗೂ ರಘು ದೀಕ್ಷಿತ್ ತಂಡದವರ ರಸಮಂಜರಿ ಕಾರ್ಯಕ್ರಮದಲ್ಲಿ ಚಲನಚಿತ್ರ ನಟರಾದ ಶಿವರಾಜ್ ಕುಮಾರ್, ಉಪೇಂದ್ರ, ರಚಿತಾ ರಾಮ್ ಸೇರಿದಂತೆ ಹಿರಿ-ಕಿರುತೆರೆ ನಟರು ಭಾಗವಹಿಸಿ ಈ ಭವ್ಯ ಸಮಾರಂಭಕ್ಕೆ ಮೆರಗು ನೀಡಿದರು.
ವಿಧಾನ ಪರಿಷತ್ ಸದಸ್ಯ ರಾಮೋಜಿಗೌಡ, ಎಸ್ ರವಿ, ನಾಗರಾಜ್ ಯಾದವ್, ಸುಧಾಮ್ ದಾಸ್, ಬಮೂಲ್ ಅಧ್ಯಕ್ಷ ಡಿ. ಕೆ ಸುರೇಶ್, ಯೋಗ ಗುರು ವಚನಾನಂದ ಸ್ವಾಮೀಜಿ ಸೇರಿದಂತೆ ಪಕ್ಷದ ಶಾಸಕರು ಹಾಗೂ ಮುಖಂಡರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು