LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರೋಚಕತೆ ಸೃಷ್ಟಿಸಿದ ಇಂದಿನ ಮುಂಬೈ-ಲಕ್ನೋ ಐಪಿಎಲ್ ಪಂದ್ಯ: ಸೋತ ತಂಡ ಟೂರ್ನಿಯಿಂದ ಔಟ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 47 ನೇ ಪಂದ್ಯ ಸೋಮವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಎರಡೂ ತಂಡಗಳು ಪ್ಲೇಆಫ್ ತಲುಪುವ ತಮ್ಮ ಮರೆಯಾಗುತ್ತಿರುವ ಆಸೆಯನ್ನು ಪುನರುಜ್ಜೀವನಗೊಳಿಸಲು ಹೋರಾಡಲಿದೆ. ಈ ಪಂದ್ಯವು ಋತುವಿನಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ತಂಡಗಳ ನಡುವೆ ನಡೆಯುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ಐಪಿಎಲ್ 2026 ರಲ್ಲಿ 8 ಪಂದ್ಯಗಳಲ್ಲಿ 6 ರಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅವರು ಸತತ ಐದು ಸೋಲುಗಳಿಂದ ತತ್ತರಿಸುತ್ತಿದ್ದಾರೆ. ಅತ್ತ ಮುಂಬೈ ಸ್ಥಿತಿ ಕೂಡ ತೀರಾ ಕಳಪೆಯಲ್ಲಿದೆ.
ರಿಷಭ್ ಪಂತ್ ನೇತೃತ್ವದ ಎಲ್?ಎಸ್?ಜಿ ತಂಡವು ಬ್ಯಾಟಿಂಗ್ ವೈಫಲ್ಯಗಳಿಂದಾಗಿ ಸಂಕಷ್ಟದಲ್ಲಿದೆ, ಆದರೆ ಅವರ ಬೌಲರ್‌ಗಳು ತಂಡದ ಗೆಲುವಿಗೆ ಹೋರಾಡುತ್ತಿದ್ದಾರೆ. ಹಿಂದಿನ ಪಂದ್ಯದಲ್ಲಿ, ಮೊಹ್ಸಿನ್ ಖಾನ್ ಅವರ ಅದ್ಭುತ ಬೌಲಿಂಗ್ ವ್ಯರ್ಥವಾಯಿತು, ಆದರೆ ನಿಕೋಲಸ್ ಪೂರನ್ ಒಳಗೊಂಡ ವಿವಾದಾತ್ಮಕ ಸೂಪರ್ ಓವರ್ ನಿರ್ಧಾರವು ತಂಡಕ್ಕೆ ಭಾರಿ ನಷ್ಟವನ್ನುಂಟು ಮಾಡಿತು.
ಮುಂಬೈ ಇಂಡಿಯನ್ಸ್ ತಂಡ ಆಡಿದ ಒಂಬತ್ತು ಪಂದ್ಯಗಳಲ್ಲಿ ಏಳರಲ್ಲಿ ಸೋತು ಒಂಬತ್ತನೇ ಸ್ಥಾನದಲ್ಲಿದೆ. ಚೆನ್ನೆöÊ ಸೂಪರ್ ಕಿಂಗ್ಸ್ ವಿರುದ್ಧದ ಇತ್ತೀಚಿನ ಪಂದ್ಯದಲ್ಲಿ ಎಂಟು ವಿಕೆಟ್‌ಗಳ ಹೀನಾಯ ಸೋಲು ಸೇರಿದಂತೆ ಸತತ ಮೂರು ಸೋಲುಗಳ ನಂತರ ಮುಂಬೈಯ ಇಂದಿನ ಪಂದ್ಯ ಕುತೂಹಲ ಮೂಡಿಸಿದೆ. ಇಂದಿನ ಪಂದ್ಯದಲ್ಲಿ ಸೋತ ತಂಡ ಟೂರ್ನಿಯಿಂದ ಹೊರಬಿದ್ದಂತೆ ಲೆಕ್ಕ.
ಜಸ್ಪಿçÃತ್ ಬುಮ್ರಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ಮತ್ತು ನಾಯಕ ಹಾರ್ದಿಕ್ ಪಾಂಡ್ಯ ಅವರಂತಹ ಪ್ರಮುಖ ಸ್ಟಾರ್ ಆಟಗಾರರ ಅಸಮಂಜಸ ಪ್ರದರ್ಶನದಿಂದ ಮುಂಬೈ ತಂಡದ ಗೆಲುವಿಗೆ ಅಡ್ಡಿಯಾಗಿದೆ. ಹಾರ್ದಿಕ್ ಅವರ ನಾಯಕತ್ವವೂ ಈಗ ತೂಗುಯ್ಯಾಲೆಯಲ್ಲಿದೆ. ಹ್ಯಾಮ್ ಸ್ಟಿçಂಗ್ ಗಾಯದಿಂದಾಗಿ ರೋಹಿತ್ ಶರ್ಮಾ ಅನುಪಸ್ಥಿತಿಯು ತಂಡವನ್ನು ದುರ್ಬಲಗೊಳಿಸಿದೆ.
ಐಪಿಎಲ್ ಇತಿಹಾಸದಲ್ಲಿ ಇದುವರೆಗೆ ಉಭಯ ತಂಡಗಳ ನಡುವೆ ಒಟ್ಟು 8 ಪಂದ್ಯಗಳು ನಡೆದಿದ್ದು, ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಎರಡು ಪಂದ್ಯಗಳು ಸೇರಿದಂತೆ ಎಲ್‌ಎಸ್‌ಜಿ ಈ ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆದ್ದಿದೆ.
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರಾಬಿನ್ ಮಿಂಜ್, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ಶ್ರೀಜಿತ್ ಕೃಷ್ಣನ್ (ವಿಕೆಟ್ ಕೀಪರ್), ಬೆವೊನ್ ಜೇಕಬ್ಸ್, ತಿಲಕ್ ವರ್ಮಾ, ನಮನ್ ಧೀರ್, ವಿಲ್ ಜಾಕ್ಸ್, ಕೇಶವ್ ಮಹಾರಾಜ್, ರಾಜ್ ಅಂಗದ್ ಬಾವಾ, ವಿಘ್ನೇಶ್ ಪುತ್ತೂರ್, ಕಾರ್ಬಿನ್ ಬಾಷ್, ಟ್ರೆಂಟ್ ಬೌಲ್ಟ್, ಕರ್ಣ್ ಶರ್ಮಾ, ದೀಪಕ್ ಚಾಹರ್, ಅಶ್ವಿನಿ ಕುಮಾರ್, ರೀಸ್ ಟೋಪ್ಲಿ, ವಿಎಸ್ ಪೆನ್ಮೆಟ್ಸಾ, ಅರ್ಜುನ್ ತೆಂಡೂಲ್ಕರ್, ಮುಜೀಬ್ ಉರ್ ರೆಹಮಾನ್, ಜಸ್ಪಿçತ್ ಬುಮ್ರಾ.
ಲಕ್ನೋ ಸೂಪರ್ ಜೈಂಟ್ಸ್ ತಂಡ: ರಿಷಭ್ ಪಂತ್ (ನಾಯಕ/ವಿಕೆಟ್ ಕೀಪರ್), ಏಡೆನ್ ಮರ್ಕ್ರಾಮ್, ಹಿಮ್ಮತ್ ಸಿಂಗ್, ಮ್ಯಾಥ್ಯೂ ಬ್ರೀಟ್ಜೆ÷್ಕ, ಮುಕುಲ್ ಚೌಧರಿ, ಅಕ್ಷತ್ ರಘುವಂಶಿ, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಅರ್ಶಿನ್, ಹನಿ ಕುಲ್ದುಕರ್, ಅರ್ಶಿನ್ ಕುಲ್ದುಕರ್ ಮೊಹಮ್ಮದ್ ಶಮಿ, ಅವೇಶ್ ಖಾನ್, ಎಂ. ಸಿದ್ಧಾರ್ಥ್, ದಿಗ್ವೇಶ್ ಸಿಂಗ್, ಆಕಾಶ್ ಸಿಂಗ್, ಪ್ರಿನ್ಸ್ ಯಾದವ್, ಅರ್ಜುನ್ ತೆಂಡೂಲ್ಕರ್, ಅನ್ರಿಚ್ ನೋರ್ಟ್ಜೆ, ನಮನ್ ತಿವಾರಿ, ಮಯಾಂಕ್ ಯಾದವ್ ಮತ್ತು ಮೊಹ್ಸಿನ್ ಖಾನ್.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು