LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಯುಗಾದಿಗೆ ಸ್ವಾಗತ ಕೋರಿದ ಮಳೆ: ಬಿರುಗಾಳಿ ಸಹಿತ ಮಳೆಗೆ ಉರುಳಿದ ಮರಗಳು, ವಿದ್ಯುತ್ ಕಂಬಗಳು

ದೊಡ್ಡಬಳ್ಳಾಪುರ: ಭಾರಿ ಬಿರುಗಾಳಿ ಮಳೆಗೆ ಬುಧವಾರ ರಾತ್ರಿ ತಾಲ್ಲೂಕಿನ ಹಲವಾರು ಕಡೆಗಳಲ್ಲಿ ಮರಗಳು ಬಿದ್ದು ರಸ್ತೆ ಸಂಚಾರ ಅಸ್ತವ್ಯ ಸ್ತವಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಕಂಬಗಳು ಮುರಿದು ಬಿದ್ದಿರುವುದರಿಂದ ವಿದ್ಯುತ್ ಕಡಿತವಾಗಿದತ್ತು.ದೊಡ್ಡಬಳ್ಳಾಪುರದಲ್ಲಿ ಬುಧವಾರ ರಾತ್ರಿ 7 ಗಂಟೆ ಸಮಯದಲ್ಲಿ ಸುರಿದ ಭಾರಿ ನಗರದ ಜಾಲಪ್ಪ ಕಾಲೇಜು ರಸ್ತೆಯ ಮುತ್ಯಾಲಮ್ಮ ದೇವಾಲಯ ಸಮೀಪ ಮರ ಮುರಿದು ರಸ್ತೆಗೆ ಆಡ್ಡಲಾಗಿ ಬಿದ್ದಿತ್ತು. ಕೋರ್ಟ್ ರಸ್ತೆ, ಪದವಿ ಕಾಲೇಜು ರಸ್ತೆ, ನಗರಸಭೆ ಕಚೇರಿ ರಸ್ತೆಯಲ್ಲಿ ಮರ ಮುರಿದು ಬಿದ್ದರಿಂದ ಸಂಚಾರಕ್ಕೆ ಅಡ್ಡಿಯಾಗಿತ್ತು. ನಗರದ ಬಾಲಾಜಿ ಲೇಔಟ್ ನಲ್ಲಿ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.ಸತತ ಬಿಸಿಲಿನಿಂದ ಕಂಗೆಟ್ಟಿದ್ದ ಜನರು: ಹಿಂದೂಪುರ ಬೆಂಗಳೂರುವ ರಾಜ್ಯ ಹೆದ್ದಾರಿಯಲ್ಲೂ ಬಿರುಗಾಳಿ ಮಳೆಗೆ ಭಯಭೀತರಾಗಿರುವ ವಾಹನಗಳ ಸವಾರರು ಮರಗಳು ಇಲ್ಲದ ಕಡೆಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಿದ್ದು ಕಂಡಬಂತು.ಮೊಗದಲ್ಲಿ ಬುಧವಾರವೂ ಸುರಿದ ಮಳೆ ಜನರಲ್ಲಿ ಮಂದಹಾಸ ಮೂಡಿಸಿದೆ. ಉರಿ ಬಿಸಿಲಿಗೆ ಕಾದಿದ್ದ ಇಳೆ ತಂಪಾಗಿದೆ.ತಾಲ್ಲೂಕಿನಲ್ಲಿ ಎರಡನೇ ದಿನವಾದ ಬುಧವಾರ ರಾತ್ರಿ 7 ಗಂಟೆ ಸುಮಾರಿಗೆ ಪ್ರಾರಂಭವಾದ ಪೂರ್ವ ಮುಂಗಾರು ಮಳೆ ಒಂದು ಗಂಟೆಗೂ ಹೆಚ್ಚು ಸಮಯ ಸುರಿಯಿತು.ಮಂಗಳವಾರದಂದು ಸಂಜೆ ಬಿದ್ದ ಮಳೆಗಿಂತಲೂ ಬುಧವಾರ ಸಂಜೆ ಗುಡುಗು ಸಹಿತ ಭಾರಿ ಮಳೆ, ವೇಗವಾಗಿ ಗಾಳಿ ಬೀಸಿದ್ದರಿಂದ ವಿದ್ಯುತ್ ಕಡಿತವಾಗಿತ್ತು, ತಾಲ್ಲೂಕಿನಲ್ಲಿ ಪೂರ್ವ ಮುಂಗಾರಿನ ಮೊದಲ ಮಳೆ ಮಂಗಳವಾರ ಸಂಜೆ ಸುರಿದಿದೆ. ಸುಮಾರು 30 ನಿಮಿಷಗಳ ಕಾಲ ಗುಡುಗು ಸಹಿತ ಬಿದ್ದ ಮಳೆಯಲ್ಲಿ ಅಲ್ಲಲ್ಲಿ ಅಲಿ ಕಲ್ಲುಗಳು ಬಿದ್ದಿವೆ.ತಾಲ್ಲೂಕಿನಲ್ಲಿ 2025ರ ನಂವೆAಬರ್ ಎರಡನೇ ವಾರದಲ್ಲಿ ಹಿಂಗಾರಿನ ಕೊನೆಯ ಮಳೆ ಬಿದ್ದಿತ್ತು,ಯುಗಾದಿ ಹಬ್ಬದ ಎರಡು ದಿನ ಇರುವಂತೆಯೇ ಬಂದ ಮಳೆಯಿಂದ ರೈತರಲ್ಲಿ ಸಂತಸ ಮೂಡಿದೆ. ಯುಗಾದಿ ಹಬ್ಬ ನಂತರ ಮಾರ್ಚ್ 31ರಂದು ಹುಟ್ಟುವ ರೇವತಿ ಮಳೆಯ ಬೀಳಲು ಪ್ರಾರಂಭವಾದರೆ ಉತ್ತಮ ಮುಂಗಾರಿನ ನಿರೀಕ್ಷೆ ಇರಲಿದೆ ಎನ್ನುವ ನಂಬಿಕೆ ರೈತರದ್ದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು