LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕವಣಾಪುರ ಕ್ಷೇತ್ರದಲ್ಲಿ ಉದ್ಯಮಿ ಟಿ.ಸುನಿತಾಗೆ ಸನ್ಮಾನ

ಬೆಂಗಳೂರು : ರಾಮನಗರದ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರ ಕವಣಾಪುರ ಬಸವೇಶ್ವರ ಸ್ವಾಮಿ ವರ್ಧಂತಿ ಮಹೋತ್ಸವದ ಸಂದರ್ಭದಲ್ಲಿ ಉದ್ಯಮಿ ಸುನಿತಾ ತಿಮ್ಮೇಗೌಡ ಅವರಿಗೆ ದೇವಸ್ಥಾನದ ವತಿಯಿಂದ ವಿಶೇಷ ಸನ್ಮಾನ ನಡೆಯಿತು. ಕೊಡುಗೈ ದಾನಿಗಳು ಹಾಗೂ ದೈವಭಕ್ತರಾಗಿರುವ ಸುನಿತಾ ಅವರ ಸಮಾಜಸೇವಾ ಕಾರ್ಯಗಳನ್ನು ಟ್ರಸ್ಟ್ನ ಸದಸ್ಯರು ಪ್ರಶಂಸಿದರು.

ಜೆಮಿನಿ ಮತ್ತು ಜಂಬೋ ಸರ್ಕಸ್ ಮಾಲೀಕರಾಗಿರುವ ಟಿ. ಸುನಿತಾ ಹಾಗೂ ಅಶೋಕ್ ಶಂಕರ್ ಅವರು ಹಲವಾರು ದೇಗುಲಗಳಿಗೆ ಧನ ಸಹಾಯ ನೀಡುತ್ತಿದ್ದಾರೆ. ಈ ಮೂಲಕ ಅವರು ಭಾರತೀಯ ಧಾರ್ಮಿಕ ಪರಂಪರೆಯನ್ನುಪೋಷಿಸುತ್ತಿದ್ದಾರೆ. ಅವರ ಈ ಎಲ್ಲ ಸೇವೆಗಳನ್ನು ಪರಿಗಣಿಸಿ ಕವಣಾಪುರ ಕ್ಷೇತ್ರದಿಂದ ಸನ್ಮಾನ ಮಾಡಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿದ ಮಾತನಾಡಿದ ಸುನಿತಾ, ಕವಣಾಪುರದ ಬಸವೇಶ್ವರ ಪುಣ್ಯಕ್ಷೇತ್ರವು ಈ ನಾಡಿನ ಅತ್ಯಂತ ಸುಂದರ ಹಾಗೂ ರಮಣೀಯ ಧಾರ್ಮಿಕ ಕ್ಷೇತ್ರವಾಗಿದೆ. ಇಲ್ಲಿನ ಬಸವಣ್ಣನೂ ಮಹಾಮಹಿರಾಗಿದ್ದಾರೆ. ಇಲ್ಲಿನ ದೇಗುಲದ ನಿರ್ಮಾಣ ಕಾರ್ಯಕ ಬಹುತೇಕ ಪೂರ್ಣಗೊಂಡಿದೆ. ಸುತ್ತಮುತ್ತಲಿನ ಭಕ್ತರು ಇಲ್ಲಿಗೆ ಭೇಟಿ ನೀಡುವ ಮೂಲಕ ದೇಗುಲದ ಕೆಲಸವನ್ನು ಮುಗಿಸಲು ತಮ್ಮ ನೆರವು ನೀಡಬೇಕು ಎಂದು ಕೋರಿಕೊಂಡರು.

ಸುನೀತಾ ಅವರು ಕವಣಾಪುರ ಕ್ಷೇತ್ರದ ಭಕ್ತರಾಗಿದ್ದು, ಇಲ್ಲಿನ ದೇವರ ಮಹಿಮೆಯ ಬಗ್ಗೆ ಅಪಾರ ಭಕ್ತಿ ಹೊಂದಿದ್ದಾರೆ. ಈ ದೇಗುಲಕ್ಕೆ ಭೇಟಿ ನೀಡುವ ಮೂಲಕ ದೇವರ ಪ್ರೀತಿಗೆ ಪಾತ್ರರಾಗುವಂತೆ ಅವರು ಕೋರಿದ್ದಾರೆ. ಅಲ್ಲದೆ ಇಲ್ಲಿನ ರುದ್ರರಮಣೀಯ ದೃಶ್ಯಗಳನ್ನು ವೀಕ್ಷಿಸುವಂತೆ ಸಲಹೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ, ಆಟದ ಉಪಕರಣಗಳ ವಿತರಣೆ ಹಾಗೂ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಬಸವಣ್ಣನಿಗೆ ವಿಶೇಷ ಅಲಂಕಾರ: ಜನವರಿ 15ರಂದು ಕವಣಾಪುರ ಕ್ಷೇತ್ರದಲ್ಲಿ ವರ್ಧಂತಿ ಮಹೋತ್ಸವ ನಡೆಯಿತು. ನಡೆದಾಡುವ ಬಸವಣ್ಣ ಎಂದೇ ಭಕ್ತಿಯಿಂದ ಕರೆಯುವ ಕವಾಣಪುರ ಬಸಪ್ಪನವರಿಗೆ ಈ ವೇಳೆ ದೇಗುಲದ ವತಿಯಿಂದ ವಿಶೇಷ ನೋಟಿನ ಅಲಂಕಾರ ಮಾಡಲಾಗಿತ್ತು. ಗ್ರಾಮದ ಸಾವಿರಾರು ಭಕ್ತರು ವರ್ಧಂತಿಮಹೋತ್ಸವಲ್ಲಿ ಪಾಲ್ಗೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು