LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಟ್ರಂಪ್ ಮಾನಸಿಕ ಸ್ಥಿತಿ ಅಸ್ಥಿರ: ಜಾನ್ ಬ್ರೆನ್ನನ್

ವಾಷಿಂಗ್ಟನ್: ಇರಾನ್ ವಿರುದ್ಧ ಯುದ್ಧದ ಎಚ್ಚರಿಕೆ ಹಾಗೂ ಹಾರ್ಮುಜ್ ಜಲಸಂಧಿಗೆ ದಿಗ್ಬಂಧನ ವಿಧಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡೆಯನ್ನು ಮಾಜಿ ಸಿಐಎ ಮುಖ್ಯಸ್ಥ ಜಾನ್ ಬ್ರೆನ್ನನ್ ತೀವ್ರವಾಗಿ ಖಂಡಿಸಿದ್ದಾರೆ.
ಟ್ರಂಪ್ ಅವರು `ಮಾನಸಿಕವಾಗಿ ಅಸ್ಥಿರರಾಗಿದ್ದಾರೆ' ಎಂದು ಗಂಭೀರ ಆರೋಪ ಮಾಡಿರುವ ಅವರು, ಅಮೆರಿಕ ಸಂವಿಧಾನದ 25ನೇ ತಿದ್ದುಪಡಿಯನ್ನು ಬಳಸಿಕೊಂಡು ಅವರನ್ನು ತಕ್ಷಣವೇ ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ.ಟ್ರಂಪ್ ಅವರ ಇತ್ತೀಚಿನ ಆಕ್ರಮಣಕಾರಿ ಹೇಳಿಕೆಗಳು ಮತ್ತು ಇರಾನ್ ನಾಗರಿಕತೆಯನ್ನು ನಾಶಪಡಿಸುವ ಬೆದರಿಕೆಗಳು ಅವರು ದೇಶವನ್ನು ಮುನ್ನಡೆಸಲು ಅಶಕ್ತರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತವೆ ಎಂದು ಬ್ರೆನ್ನನ್ ಹೇಳಿದ್ದಾರೆ.ಅಮೆರಿಕ ಸಂವಿಧಾನದ 25ನೇ ತಿದ್ದುಪಡಿಯು ಅಧ್ಯಕ್ಷರು ತಮ್ಮ ಕರ್ತವ್ಯ ನಿರ್ವಹಿಸಲು ಅಶಕ್ತರಾದಾಗ (ಮಾನಸಿಕ ಅಥವಾ ದೈಹಿಕವಾಗಿ), ಉಪಾಧ್ಯಕ್ಷರು ಮತ್ತು ಸಂಪುಟದ ಬಹುಮತದೊಂದಿಗೆ ಅವರನ್ನು ಅಧಿಕಾರದಿಂದ ತೆಗೆದುಹಾಕಲು ಅವಕಾಶ ನೀಡುತ್ತದೆ. ``ಈ ತಿದ್ದುಪಡಿಯನ್ನು ಡೊನಾಲ್ಡ್ ಟ್ರಂಪ್ ಅಂತಹವರನ್ನು ಗಮನದಲ್ಲಿಟ್ಟುಕೊಂಡೇ ಬರೆಯಲಾಗಿದೆ'' ಎಂದು ಅವರು ಕಿಡಿಕಾರಿದ್ದಾರೆ.
ಅಧ್ಯಕ್ಷರ ಕೈಯಲ್ಲಿ ಪರಮಾಣು ಅಸ್ತ್ರಗಳ ನಿಯಂತ್ರಣ ಇರುವುದು ಜಗತ್ತಿಗೆ ಅಪಾಯಕಾರಿ ಎಂದು ಬ್ರೆನ್ನನ್ ಆತಂಕ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು