LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಯುಗಾದಿ ಹಬ್ಬ: ಪತ್ರಕರ್ತರ ಭವನದಲ್ಲಿ ಪೂಜಾ ಕಾರ್ಯಕ್ರಮ

ಭಾಗ್ಯನಗರ: ಪಟ್ಟಣದ ಪತ್ರಕರ್ತರ ಭವನದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ಪೂಜಾ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಯಿತು.
ಸಂಘದ ಅಧ್ಯಕ್ಷರಾದ ಡಿ.ಎನ್. ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಹಾಗೂ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಅಂಗವಾಗಿ ಹಾಜರಿದ್ದ ಎಲ್ಲರಿಗೂ ಬೇವು-ಬೆಲ್ಲ, ಸಿಹಿ ಮತ್ತು ಖಾರವನ್ನು ವಿತರಿಸಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷರಾದ ಡಿ.ಎನ್. ಕೃಷ್ಣಾರೆಡ್ಡಿ ಅವರು, ?ಯುಗಾದಿ ಹಬ್ಬವು ಹೊಸ ವರ್ಷದ ಆರಂಭವನ್ನು ಸೂಚಿಸುವುದಷ್ಟೇ ಅಲ್ಲದೆ, ಜೀವನದಲ್ಲಿ ಸುಖ-ದುಃಖಗಳನ್ನು ಸಮನಾಗಿ ಸ್ವೀಕರಿಸುವ ಸಂದೇಶವನ್ನು ನೀಡುತ್ತದೆ. ಬೇವು-ಬೆಲ್ಲದಂತೆಯೇ ಜೀವನದಲ್ಲಿಯೂ ಸಿಹಿ-ಕಹಿ ಅನುಭವಗಳು ಸಹಜ. ಪತ್ರಕರ್ತರು ಸಮಾಜದ ಕನ್ನಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸತ್ಯವನ್ನು ನಿಷ್ಠೆಯಿಂದ ಜನರಿಗೆ ತಲುಪಿಸುವ ಮಹತ್ವದ ಹೊಣೆಗಾರಿಕೆಯನ್ನು ಹೊಂದಿದ್ದಾರೆ. ಇಂತಹ ಹಬ್ಬಗಳು ಪರಸ್ಪರ ಏಕತೆ ಮತ್ತು ಸಹೋದರತ್ವವನ್ನು ಹೆಚ್ಚಿಸುತ್ತವೆ, ಪತ್ರಕರ್ತರ ನಡುವೆ ಸಹಕಾರ, ಒಗ್ಗಟ್ಟು ಹಾಗೂ ವೃತ್ತಿಪರ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವೆಂದು ತಿಳಿಸಿದರು.ಕಾರ್ಯಕ್ರಮದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಎಸ್. ಸುರೇಶ್, ಅಶ್ವತ್ಥನಾರಾಯಣ (ಮಣಿಕಂಠ), ಪ್ರಧಾನ ಕಾರ್ಯದರ್ಶಿ ಸೈಯದ್ ಸಿದ್ದೀಕ್, ಕಾರ್ಯದರ್ಶಿ ಎಸ್.ಎಸ್.ಶ್ರೀನಿವಾಸ್, ಪತ್ರಕರ್ತರಾದ ಅಬ್ದುಲ್ ಕರೀಂಸಾಬ್, ಬಿ.ಆರ್. ಕೃಷ್ಣಾ, ಎ.ಜಿ. ನಾರಾಯಣಸ್ವಾಮಿ, ಗೋಪಾಲರೆಡ್ಡಿ, ರಂಗನಾಥ್, ನಾಗರಾಜ್, ಬಾಬು ಸೇರಿದಂತೆ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು