LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕರ್ನಾಟಕ ತಲುಪಿದ ‘ಉಜಾಸ್ ಋತುಚಕ್ರ ಆರೋಗ್ಯ ಎಕ್ಸ್‍ಪ್ರೆಸ್’

ಬೆಂಗಳೂರು: `ಆದಿತ್ಯ ಬಿರ್ಲಾ ಎಜುಕೇಶನ್ ಟ್ರಸ್ಟ್’ನ ಉಪಕ್ರಮವಾದ `ಉಜಾಸ್’, ಋತುಚಕ್ರ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ತನ್ನ ಧ್ಯೇಯದಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಿದೆ.

`ಉಜಾಸ್’ ಸ್ಥಾಪಕರಾದ ಶ್ರೀಮತಿ ಅದ್ವೈತ ಬಿರ್ಲಾ ಅವರ ದೃಷ್ಟಿಕೋನದಿಂದ ಮಾರ್ಗದರ್ಶನ ಪಡೆದ ಈ ಉಪಕ್ರಮವು ಕರ್ನಾಟಕ ರಾಜ್ಯದಲ್ಲಿ ಸಕಾರಾತ್ಮಕ ಬದಲಾವಣೆ ಮತ್ತು ಸಬಲೀಕರಣವನ್ನು ತರಲು ಸಜ್ಜಾಗಿದೆ. ಗೌರವಾನ್ವಿತ ಸ್ಥಳೀಯ ಎನ್ಜಿಒ ಪಾಲುದಾರ ಸಂಸ್ಥೆಯಾದ ಆಕ್ಷನ್ ಇನಿಶಿಯೇಟಿವ್ ಫಾರ್ ಡೆವಲಪ್ಮೆಂಟ್ (ಎಐಡಿ) ಸಹಯೋಗದೊಂದಿಗೆ, `ಉಜಾಸ್’ ತನ್ನ ಮೊದಲ ಹಂತದ ಕಾರ್ಯವನ್ನು ಪ್ರಾರಂಭಿಸಿದೆ.

ಸ್ಥಳೀಯ ಶಾಲೆಗಳು, ಅನಾಥಾಶ್ರಮಗಳು ಮತ್ತು ಸರ್ಕಾರಿ ಕಾಲೇಜುಗಳು, ಬಾಲಕಿಯರ ಹಾಸ್ಟೆಲ್ ಮತ್ತು ಸ್ಥಳೀಯ ಸಮುದಾಯಗಳ ಮೂಲಕ ಹದಿಹರೆಯದ ಹುಡುಗಿಯರು ಮತ್ತು ಮಹಿಳೆಯರನ್ನು ಸಮಗ್ರವಾಗಿ ತಲುಪಲಿದೆ. ಈ ವ್ಯೂಹಾತ್ಮಕ ಸಹಭಾಗಿತ್ವವು ಒಂದು ವರ್ಷದ ಅಭಿಯಾನದ ಆರಂಭವನ್ನು ಸೂಚಿಸುತ್ತದೆ. ಇದು ಕರ್ನಾಟಕದಲ್ಲಿ ಎಐಡಿ ಮೂಲಕ ಸಮುದಾಯದೊಂದಿಗೆ ನಿಕಟವಾಗಿ ಕೆಲಸ ಮಾಡುವ ಉಜಾಸ್‍ನ ಅಚಲ ಬದ್ಧತೆಯನ್ನು ಪ್ರದರ್ಶಿಸುತ್ತದೆ.

ಒಟ್ಟಾರೆಯಾಗಿ, ಈ ಸಂಸ್ಥೆಗಳು ಸಕ್ರಿಯವಾಗಿ ಜಾಗೃತಿ ಮೂಡಿಸುವ, ಮೌಢ್ಯಗಳನ್ನು ತೊಡೆದುಹಾಕುವ ಹಾಗೂ ಈ ಪ್ರದೇಶದಾದ್ಯಂತ ಋತುಚಕ್ರ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಸಕಾರಾತ್ಮಕ ಚರ್ಚೆಗಳನ್ನು ಬೆಳೆಸುವ ಗುರಿಯನ್ನು ಹೊಂದಿವೆ. ಅಭಿಯಾನದ ಮೊದಲ ಹಂತದಲ್ಲಿ, ಉಜಾಸ್ ತಂಡವು ಋತುಚಕ್ರ ಆರೋಗ್ಯ ಮತ್ತು ನೈರ್ಮಲ್ಯ ನಿರ್ವಹಣೆಯ ಬಗ್ಗೆ ವಯಸ್ಸಿಗೆ ಅನುಗುಣವಾದ ಜಾಗೃತಿ ಶಿಬಿರಗಳನ್ನು ನಡೆಸಿತು ಮತ್ತು ಸ್ಯಾನಿಟರಿ ನ್ಯಾಪ್‍ಕಿನ್‍ಗಳನ್ನು ವಿತರಿಸಿತು.

ಈ ಉಪಕ್ರಮದ ಬಗ್ಗೆ ಮಾತನಾಡಿದ ಉಜಾಸ್ ಸಂಸ್ಥಾಪಕಿ ಅದ್ವೈತ ಬಿರ್ಲಾ, ಅವರು “ಉಜಾಸ್ ಋತುಚಕ್ರ ಆರೋಗ್ಯ ಎಕ್ಸ್ಪ್ರೆಸ್ ಕೇವಲ ವ್ಯಾನ್ ಅಲ್ಲ, ಅದೊಂದು ಬದಲಾವಣೆಯ ಸಂಕೇತವಾಗಿದೆ. ಅಡೆತಡೆಗಳನ್ನು ನಿವಾರಿಸುವುದರ ಜೊತೆಗೆ ಋತುಚಕ್ರ ಆರೋಗ್ಯವನ್ನು ಒಂದು ನಿಷೇಧವಾಗಿ ಅಲ್ಲದೆ, ಒಂದು ಹಕ್ಕಾಗಿ ಹೊಂದಿರುವ ಸಮಾಜವನ್ನು ಬೆಳೆಸುತ್ತದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು