LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಶೆಡ್‌ವೊಂದರಲ್ಲಿ ದಾಖಲೆಯಿಲ್ಲದ ಕೋಟ್ಯಂತರ ರೂ. ನಗದು ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿದಾಖಲೆಗಳಿಲ್ಲದ ಕೋಟ್ಯಂತರ ರೂಪಾಯಿ ನಗದು ಹಣ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಕುರುಬರಹಳ್ಳಿಯ ಕೈಗಾರಿಕಾ ಶೆಡ್ ಒಂದರಲ್ಲಿ ಬಚ್ಚಿಡಲಾಗಿದ್ದ ಬರೋಬ್ಬರಿ 2,98,00,900 ರೂಪಾಯಿ ನಗದು ಹಣವನ್ನು ಮಹಾಲಕ್ಷ್ಮೀ ಲೇಔಟ್ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾವರೆಕೆರೆ ನಿವಾಸಿಯೊಬ್ಬರು ಈ ಬೃಹತ್ ಮೊತ್ತವನ್ನು ಸ್ನೇಹಿತನ ಶೆಡ್‌ನಲ್ಲಿ ಬಚ್ಚಿಟ್ಟಿದ್ದರು ಎನ್ನಲಾಗಿದೆ.ಜೂನ್ 2 ರಂದು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯ ಪಿಎಸ್‌ಐ ರಾಕೇಶ್ ಮತ್ತು ಸಿಬ್ಬಂದಿ ಎಂದಿನಂತೆ ರೌಂಡ್ಸ್ ಹಾಗೂ ಗಸ್ತು ತಿರುಗುತ್ತಿದ್ದರು. ಈ ವೇಳೆ ಕುರುಬರಹಳ್ಳಿಯ 11 ನೇ ಕ್ರಾಸ್‌ನಲ್ಲಿರುವ `ಶೇಷಾದ್ರಿ ಇಂಡಸ್ಟ್ರಿಸ್' ಹೆಸರಿನ ಶೆಡ್‌ನಲ್ಲಿ ಭಾರಿ ಪ್ರಮಾಣದ ನಗದು ಹಣ ಅಕ್ರಮವಾಗಿ ಇಡಲಾಗಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರ ತಂಡವು ಶೆಡ್‌ಗೆ ತೆರಳಿ ತಪಾಸಣೆ ನಡೆಸಿದಾಗ ನಾಲ್ಕು ದೊಡ್ಡ ಬ್ಯಾಗ್‌ಗಳಲ್ಲಿ ತುಂಬಿಟ್ಟಿದ್ದ ನೋಟುಗಳ ಕಂತೆಗಳು ಪತ್ತೆಯಾಗಿವೆ. ಪೊಲೀಸರು ಆ ಹಣವನ್ನು ತಂದು ಲೆಕ್ಕ ಹಾಕಿದಾಗ ಒಟ್ಟು 2.98 ಕೋಟಿ ರೂಪಾಯಿ ಇರುವುದು ದೃಢಪಟ್ಟಿದೆ.ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಈ ನಗದು ಹಣವು ತಾವರೆಕೆರೆ ನಿವಾಸಿ ನಾಗರಾಜ್ ಎಂಬುವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ನಾಗರಾಜ್ ಈ ಹಣವನ್ನು ಕುರುಬರಹಳ್ಳಿಯಲ್ಲಿರುವ ತನ್ನ ಸ್ನೇಹಿತ ವೆಂಕಟೇಶ್ ಎಂಬಾತನಿಗೆ ಸೇರಿದ ಶೆಡ್‌ನಲ್ಲಿ ಇಟ್ಟಿದ್ದರು. ತಕ್ಷಣವೇ ಪೊಲೀಸರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ, ನ್ಯಾಯಾಲಯದ ಅನುಮತಿ ಪಡೆದ ಬಳಿಕ ಮಹಾಲಕ್ಷಿ÷್ಮ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಧಿಕೃತ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.ಬಳಿಕ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, `ನಾವು ಚಿತ್ರದುರ್ಗದಲ್ಲಿದ್ದ ನಮ್ಮ ಆಸ್ತಿಯನ್ನು ಮಾರಾಟ ಮಾಡಿ ಈ ಹಣವನ್ನು ತಂದಿದ್ದೇವೆ. ಬ್ಯಾಂಕಿನಲ್ಲಿರುವ ಸಾಲವನ್ನು ಚುಕ್ತಾ ಮಾಡಲು ಈ ನಗದನ್ನು ಇಟ್ಟುಕೊಂಡಿದ್ದೆವು' ಎಂದು ಹೇಳಿಕೆ ನೀಡಿದ್ದಾರೆ.ಸದ್ಯ ಬಂಧಿತರಿಬ್ಬರೂ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದಾರೆ. ಆದರೆ, ಹಣಕ್ಕೆ ಸಂಬAಧಿಸಿದAತೆ ಯಾವುದೇ ಪೂರಕ ದಾಖಲೆಗಳು ಇಲ್ಲದ ಕಾರಣ ಮಹಾಲಕ್ಷಿ÷್ಮ ಲೇಔಟ್ ಪೊಲೀಸರು ಹಾಗೂ ಐಟಿ ಇಲಾಖೆಯ ಅಧಿಕಾರಿಗಳು ಈ ಭಾರಿ ಮೊತ್ತದ ಅಸಲಿ ಮೂಲವನ್ನು ಪತ್ತೆ ಹಚ್ಚಲು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು